ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಳೆಯಿಂದ ಕುಸಿದ ಮನೆಗಳಿಗೆ 5 ಲಕ್ಷ ಘೋಷಿಸಿದ ಮುಖ್ಯಮಂತ್ರಿ

Twitter
Facebook
LinkedIn
WhatsApp
ವರ್ಗಾವಣೆಗೆ ಸರ್ಕಾರದಿಂದ ಹೊಸ ಆದೇಶ ಪ್ರಕಟ.

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇತ್ತೀಚಿಗೆ ಸುರಿದ ವ್ಯಾಪಕ‌ ಮಳೆಯಿಂದಾಗಿ ಒಟ್ಟು 24 ಮನೆಗಳು ಸಂಪೂರ್ಣ ಕುಸಿದು ಬಿದ್ದಿದ್ದು, 1,078 ಮನೆಗಳು ಭಾಗಶಃ ಕುಸಿದಿವೆ. ಪೂರ್ತಿ ಕುಸಿದು ಬಿದ್ದ ಮನೆಗಳಿಗೆ ತಲಾ 5 ಲಕ್ಷ ರೂಪಾಯಿ ಹಾಗೂ ಭಾಗಶಃ ಕುಸಿದಿರುವ ಮನೆಗೆ 3ಲಕ್ಷ  ರೂಪಾಯಿ ಬಿಡುಗಡೆ ಮಾಡಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಚಿಕ್ಕಬಳ್ಳಾಪುರ ನಗರ ಮತ್ತು ಜಿಲ್ಲೆಯ ವಿವಿಧ ಮಳೆಬಾಧಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ರಾಜ್ಯದ ಕೋಲಾರ ಮತ್ತು ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇತ್ತೀಚಿಗೆ ಸುರಿದ ವ್ಯಾಪಕ ಮಳೆಯಿಂದಾಗಿ ಹಲವು ಬೆಳೆಗಳು, ಮನೆಗಳಿಗೆ  ಹಾನಿಗೊಳಗಾಗಿ ಆರ್ಥಿಕ ನಷ್ಟವಾಗಿದೆ.  ನಷ್ಟವಾಗಿರುವ ಅಂದಾಜನ್ನು ಸಮೀಕ್ಷೆ ನಡೆಸಿ ಸಂಪೂರ್ಣ ಮತ್ತು ಸಮಗ್ರ  ವರದಿ ನೀಡುವಂತೆ ಆಯಾ ಜಿಲ್ಲೆಗಳ ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ. ಈಗಾಗಲೇ ಪ್ರಾಥಮಿಕ ವರದಿ ಲಭ್ಯವಾಗಿದ್ದು, ಒಟ್ಟಾರೆಯಾಗಿ ಆಗಿರುವ ನಷ್ಟದ ಸಮಗ್ರ ಮಾಹಿತಿ ಸಂಗ್ರಹ, ವಿಶ್ಲೇಷಣೆ ಕಾರ್ಯ ನಡೆಯುತ್ತಿದ್ದು, ಇನ್ನೆರಡು ದಿನಗಳಲ್ಲಿ ಸಂಪೂರ್ಣ ಸ್ಪಷ್ಟತೆ ದೊರೆಯಲಿದೆ.

ನಿಖರವಾದ ಮತ್ತು ಸ್ಪಷ್ಟವಾದ ವರದಿ ಬಂದ ನಂತರ ಯಾವ ಯಾವ ಜಿಲ್ಲೆಗಳಿಗೆ ಎಷ್ಟು ಪರಿಹಾರ ನೀಡಬೇಕೆಂದು ನಿರ್ಧರಿಸಿ, ಆದ್ಯತೆ ಮೇಲೆ ಹಣ ಬಿಡುಗಡೆ ಮಾಡಿ ಮಳೆಬಾಧಿತ ಪ್ರದೇಶಗಳ ಜನರಿಗೆ ಸ್ಪಂದಿಸಲಾಗುವುದು. ಹಲವೆಡೆ ಮನೆಗಳಿಗೆ ನೀರು ನುಗ್ಗಿದ್ದು, ಅಂತಹ ಮನೆಗಳಿಗೆ  ಕೂಡಲೇ 10 ಸಾವಿರ ರೂಪಾಯಿ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ. ಪೂರ್ತಿಯಾಗಿ ಕುಸಿದ ಮನೆಗಳಿಗೆ ತಲಾ 5 ಲಕ್ಷ ಮತ್ತು ಭಾಗಶಃ ಕುಸಿದು ಬಿದ್ದ ಮೂರು ಲಕ್ಷ ರೂಪಾಯಿ ನೀಡಲಾಗುವುದು. ಸ್ವಲ್ಪ ಹಾನಿ ಅಥವಾ ಧಕ್ಕೆಯಾದ ಮನೆಗಳಿಗೆ ಐವತ್ತು ಸಾವಿರ ನೀಡಲು ಅವಕಾಶವಿದೆ ಎಂದರು.

ಇನ್ನು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 24 ಮನೆಗಳು ಸಂಪೂರ್ಣ ಕುಸಿದಿವೆ. 1078 ಮನೆಗಳು ಭಾಗಶಃ ಕುಸಿದಿವೆ. ಕಂದವಾರ ಕೆರೆಯಿಂದ ಅಮಾನಿ  ಗೋಪಾಲಕೃಷ್ಣ ಕೆರೆಯವರೆಗೂ ರಾಜಕಾಲುವೆ ನಿರ್ಮಾಣ ಮಾಡಬೇಕಾಗಿದ್ದು, ಕೂಡಲೇ ಸಮಗ್ರ ಯೋಜನಾ ವರದಿ ಸಿದ್ದಪಡಿಸುವಂತೆ ಅಧಿಕಾರಿಗಳಿಗೆ ಆದೇಶಿಸಲಾಗಿದೆ.ವರದಿ ಬಂದ ಕೂಡಲೇ ಅಗತ್ಯ ಅನುಧಾನ ಬಿಡುಗಡೆ ಮಾಡಲಾಗುವುದ
ಎಂದು ನುಡಿದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು