ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಉಪ್ಪಿನಂಗಡಿಯಲ್ಲಿ ಪರಿಸ್ಥಿತಿ ಶಾಂತ. 144 ಸೆಕ್ಷನ್ ಜಾರಿ – ಬಿಗಿ ಪೊಲೀಸ್ ಬಂದೋಬಸ್ತ್

Twitter
Facebook
LinkedIn
WhatsApp
ಉಪ್ಪಿನಂಗಡಿಯಲ್ಲಿ ಪರಿಸ್ಥಿತಿ ಶಾಂತ. 144 ಸೆಕ್ಷನ್ ಜಾರಿ – ಬಿಗಿ ಪೊಲೀಸ್ ಬಂದೋಬಸ್ತ್

ಉಪ್ಪಿನಂಗಡಿ: ಉಪ್ಪಿನಂಗಡಿಯಲ್ಲಿ 144 ಸೆಕ್ಷನ್ ಜಾರಿಯಲ್ಲಿದ್ದು, ಪೇಟೆ ಶಾಂತ ಸ್ಥಿತಿಯಲ್ಲಿದೆ. ಉಡುಪಿ ಜಿಲ್ಲೆ ಸೇರಿದಂತೆ ವಿವಿಧ ಕಡೆಗಳಿಂದ ಉಪ್ಪಿನಂಗಡಿಗೆ ಪೊಲೀಸರನ್ನು ಕರೆಸಲಾಗಿದ್ದು, ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.
ಇಲ್ಲಿನ ಹಳೆಗೇಟ್‌ನ ಸುಬ್ರಹ್ಮಣ್ಯ ಕ್ರಾಸ್ ಬಳಿ ಇತ್ತೀಚೆಗೆ ನಡೆದ ತಲವಾರು ದಾಳಿ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮೂವರು ಪಿಎಫ್‌ಐ ಮುಖಂಡರನ್ನು ವಶಕ್ಕೆ ಪಡೆದು ಮಂಗಳವಾರ ಉಪ್ಪಿನಂಗಡಿ ಠಾಣೆಗೆ ಕರೆದುಕೊಂಡು ಬಂದಿದ್ದರು. ಅವರನ್ನು ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ ಪಿಎಫ್‌ಐ ಕಾರ್ಯಕರ್ತರು ಮಂಗಳವಾರ ಬೆಳಗ್ಗೆಯಿಂದಲೇ ಉಪ್ಪಿನಂಗಡಿಯ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದರು. ಸಂಜೆಯ ವೇಳೆ ವಶಕ್ಕೆ ಪಡೆದವರನ್ನು ಬಿಡುಗಡೆ ಮಾಡುವುದಾಗಿ ಪೊಲೀಸರು ನೀಡಿದ ಭರವಸೆಯ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಸ್ಥಳದಿಂದ ತೆರಳಿದ್ದರು.

ಈ ನಡುವೆ ಉಪ್ಪಿನಂಗಡಿ ಠಾಣೆಗೆ ಆಗಮಿಸಿದ ಪುತ್ತೂರು ತಹಶೀಲ್ದಾರ್ ಪರಿಸ್ಥಿತಿ ವಿಕೋಪಕ್ಕೆ ತಿರುಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಉಪ್ಪಿನಂಗಡಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿದ್ದರು. ಅಲ್ಲದೆ ವಶಕ್ಕೆ ಪಡೆದವರಲ್ಲಿ ಓರ್ವ ಮುಖಂಡನನ್ನು ಮಾತ್ರ ರಾತ್ರಿ ಪೊಲೀಸರು ಬಿಡುಗಡೆಗೊಳಿಸಿದ್ದರು. ರಾತ್ರಿ 9:30ರ ಸುಮಾರಿಗೆ ಆಕ್ರೋಶಿತ ಗುಂಪು ಮತ್ತಿಬ್ಬರನ್ನು ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಜಮಾಯಿಸಿದರು. ಈ ವೇಳೆ ಪೊಲೀಸರು ಗುಂಪನ್ನು ಚದುರಿಸಲು ಲಾಠಿಚಾರ್ಜ್ ನಡೆಸಿದ್ದಾರೆ. ಇದರಿಂದ 10ಕ್ಕೂ ಅಧಿಕ ಪ್ರತಿಭಟನಾಕಾರರಿಗೆ ತೀವ್ರ ಗಾಯಗಳಾಗಿವೆ.
ಘಟನೆಯ ವೇಳೆ ನಾಲ್ವರು ಪೊಲೀಸರು ಕೂಡಾ ಗಾಯಗೊಂಡಿದ್ದಾರೆ. ಲಾಠಿ ಚಾರ್ಚ್ ಸಂದರ್ಭ ಎಸ್ಸೈಗಳಾದ ಸಂದೇಶ್, ವಾಮನ ಹಾಗೂ ಪೊಲೀಸ್ ಸಿಬ್ಬಂದಿಯಾದ ರುದ್ರಪ್ಪ ಹಾಗೂ ರೇಣುಕಾ ಎಂಬವರು ಗಾಯಗೊಂಡಿದ್ದು, ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಡುಪಿ ಜಿಲ್ಲೆಯಿಂದಲೂ ಪೊಲೀಸ್ ಪಡೆಯನ್ನು ಕರೆಸಲಾಗಿದ್ದು, ಇವರೊಂದಿಗೆ ಜಿಲ್ಲಾ ಹಾಗೂ ರಾಜ್ಯ ಮೀಸಲು ಪಡೆ, ವಿವಿಧ ಠಾಣಾ ಪೊಲೀಸ್ ಉಪನಿರೀಕ್ಷಕರು, ಸಿಬ್ಬಂದಿ ಉಪ್ಪಿನಂಗಡಿಯಲ್ಲಿದ್ದು ಬಿಗು ಬಂದೋಬಸ್ತ್ ಕೈಗೊಂಡಿದ್ದಾರೆ

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು