ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಉಪ್ಪಿನಂಗಡಿ: ಬೆದರಿಕೆ ಮೂಲಕ ಇಲಾಖೆಯನ್ನು ಬಗ್ಗಿಸಬಹುದೆಂಬ ಭ್ರಮೆ ಬೇಡ - ಎಸ್ಪಿ

Twitter
Facebook
LinkedIn
WhatsApp
ಉಪ್ಪಿನಂಗಡಿ: ಬೆದರಿಕೆ ಮೂಲಕ ಇಲಾಖೆಯನ್ನು ಬಗ್ಗಿಸಬಹುದೆಂಬ ಭ್ರಮೆ ಬೇಡ – ಎಸ್ಪಿ

ಉಪ್ಪಿನಂಗಡಿ: ಪಶ್ಚಿಮ ವಲಯದ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ (ಐಜಿಪಿ), ದೇವಜ್ಯೋತಿ ರೇ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ), ಋಷಿಕೇಶ್ ಸೋನವಾನೆ, ಹೆಚ್ಚುವರಿ ಎಸ್‌ಪಿ ಶಿವಕುಮಾರ್ ಗುನಾರೆ ಅವರು ಡಿ.15 ರಂದು ಬುಧವಾರ ಉಪ್ಪಿನಂಗಡಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು.
ಈ ಸಂದರ್ಭ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಎಸ್‌ಪಿ, ಋಷಿಕೇಶ್ ಸೋನವಾನೆ ,” ಮಾರಕಾಸ್ತ್ರಗಳಿಂದ ದಾಳಿ ಪ್ರಕರಣದ ತನಿಖೆ ಚುರುಕುಗೊಂಡಿದೆ. ಪ್ರಕರಣದ ನಿಜವಾದ ಆರೋಪಿಗಳನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದರು.
 
“ನಿಖರ ಮಾಹಿತಿ ಆಧಾರದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಮೂವರು ಕಾರ್ಯಕರ್ತರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆಸಿಕೊಳ್ಳಲಾಗಿತ್ತು.ಆದರೆ ಇದನ್ನು ಆಕ್ಷೇಪಿಸಿದ ಜನರ ಗುಂಪೊಂದು ಉಪ್ಪಿನಂಗಡಿಯ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿ ಪೊಲೀಸ್ ಠಾಣೆಗೆ ನುಗ್ಗಿ ಹಿಂಸಾತ್ಮಕವಾಗಿ ವರ್ತಿಸಿತು. ಹೀಗಾಗಿ ಪೊಲೀಸರು ಜನರ ಮೇಲೆ ಲಾಠಿ ಪ್ರಹಾರ ಮಾಡಬೇಕಾಯಿತು. ಪೊಲೀಸರ ಮೇಲೂ ಹಲ್ಲೆ ನಡೆಸಲಾಗಿದೆ. ಈ ಸಂಬಂಧ ಮೂರು ಪ್ರಕರಣಗಳು ದಾಖಲಾಗಿವೆ. ಆರೋಪಿಗಳನ್ನು ಪತ್ತೆ ಹಚ್ಚುವ ಕಾರ್ಯ ಪ್ರಗತಿಯಲ್ಲಿದೆ,’’ ಎಂದು ವಿವರಿಸಿದರು.
ಯಾವುದೇ ಕಾರಣಕ್ಕೂ ಜನರು ವದಂತಿಗಳಿಗೆ ಬಲಿಯಾಗಬೇಡಿ ಎಂದು ಮನವಿ ಮಾಡಿದ ಅವರು “ಜನರು ಪೊಲೀಸ್ ಇಲಾಖೆಯ ಮೇಲೆ ವಿಶ್ವಾಸವಿಡಬೇಕು, ಅವರಿಗೆ ಯಾವುದೇ ಗೊಂದಲ ಅಥವಾ ಸಂದೇಹವಿದ್ದರೆ, ಅವರು ನೇರವಾಗಿ ಸಂಬಂಧಿಸಿದವರನ್ನು ಸಂಪರ್ಕಿಸಬಹುದು. ಬಲವಂತ ಹಾಗೂ ಬೆದರಿಕೆ ಮೂಲಕ ಇಲಾಖೆಯನ್ನು ಬಗ್ಗಿಸಬಹುದು ಎಂಬ ಭ್ರಮೆ ಯಾರಿಗೂ ಬೇಡ. ನಾವು ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ಯಾವುದೇ ಅಮಾಯಕರ ವಿರುದ್ಧ ಪ್ರಕರಣ ದಾಖಲಾಗದಂತೆ ನಿಗಾ ಇರಿಸಲಾಗಿದೆ,” ಎಂದು ಹೇಳಿದರು
ಹಿಂಸಾಚಾರದಿಂದಾಗಿ ಉಪ್ಪಿನಂಗಡಿಯಲ್ಲಿ ಉದ್ವಿಗ್ನತೆ ಉಂಟಾಗಿರುವ ಕಾರಣ ಹೆಚ್ಚುವರಿ ಪೊಲೀಸ್ ಗಸ್ತು ವ್ಯವಸ್ಥೆ ಮಾಡಲಾಗಿದೆ. ರಾಜ್ಯ ಮೀಸಲು ಪೊಲೀಸ್ ಪಡೆಯ ಮೂರು ಪಡೆಯನ್ನು ಕೆಲವು ಆಯಕಟ್ಟಿನ ಸ್ಥಳಗಳಲ್ಲಿ ನಿಯೋಜಿಸಲಾಗಿದೆ ಎಂದು ಹೇಳಿದರು

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು