ರಷ್ಯಾ-ಉಕ್ರೇನ್ ಯುದ್ಧ (Russia-Ukraine War) ತೀವ್ರತೆ ದಿನೇದಿನೆ ಹೆಚ್ಚುತ್ತಿರುವ ಬೆನ್ನಲ್ಲೇ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಬೆಳಗ್ಗೆ ಕೇಂದ್ರ ಸಚಿವರು, ಉನ್ನತ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ್ದಾರೆ. ಉಕ್ರೇನ್ನಲ್ಲಿ (Ukraine Crisis) ಉಂಟಾದ ಯುದ್ಧ ಪರಿಸ್ಥಿತಿ ಮತ್ತು ಅಲ್ಲಿ ಸಿಲುಕಿರುವ ಭಾರತದ ವಿದ್ಯಾರ್ಥಿಗಳು, ಅವರ ರಕ್ಷಣಾ ಕಾರ್ಯಾಚರಣೆ ಬಗ್ಗೆ ಪರಿಶೀಲನೆ, ಚರ್ಚೆ ನಡೆಸಿದ್ದು, ಮುಂದೆ ಭಾರತ ಸರ್ಕಾರ (Government Of India) ಕೈಗೊಳ್ಳಬೇಕಾಗಿರುವ ಕ್ರಮಗಳ ಕುರಿತು ಮಾರ್ಗದರ್ಶನ ಮಾಡಿದ್ದಾರೆ. ಉಕ್ರೇನ್ನಲ್ಲಿರುವ ಭಾರತದ ವಿದ್ಯಾರ್ಥಿಗಳ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದ್ದರೂ ಇನ್ನೂ ಸಾವಿರಾರು ಮಂದಿ ಅಲ್ಲಿಯೇ ಸಿಲುಕಿದ್ದಾರೆ. ಇನ್ನು ತಾಯ್ನಾಡಿಗೆ ತೆರಳಲು ಪೋಲ್ಯಾಂಡ್, ರೊಮೇನಿಯಾ ಗಡಿಗಳಿಗೆ ಬರುವ ಭಾರತೀಯರ ಮೇಲೆ ಕೂಡ ರಷ್ಯಾ ಸೈನಿಕರು ಕ್ರೌರ್ಯ ತೋರುತ್ತಿದ್ದಾರೆ. ಅದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ತುರ್ತು ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ, ಉಕ್ರೇನ್ನಿಂದ ಭಾರತೀಯರನ್ನು ಆದಷ್ಟು ತ್ವರಿತವಾಗಿ ಸ್ವದೇಶಕ್ಕೆ ಕರೆತರುವ ಸಲುವಾಗಿ, ಕೇಂದ್ರ ಸಚಿವರಾದ ಹರ್ದೀಪ್ ಸಿಂಗ್ ಪುರಿ, ಜ್ಯೋತಿರಾದಿತ್ಯ ಸಿಂಧ್ಯಾ, ಕಿರಣ್ ರಿಜಿಜು, ಜನರಲ್ ವಿ.ಕೆ.ಸಿಂಗ್ ಶೀಘ್ರದಲ್ಲೇ ಉಕ್ರೇನ್ಗೆ ತೆರಳಲಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?