ಚಿತ್ರರಂಗದ ಮಂದಿಗೆ ಈಗ ‘ಪ್ಯಾನ್ ಇಂಡಿಯಾ’ (Pan India) ಎಂಬ ಪದ ಸಿಕ್ಕಾಪಟ್ಟೆ ಆಕರ್ಷಕವಾಗಿ ಕಾಣುತ್ತಿದೆ. ದಕ್ಷಿಣ ಭಾರತದ ಸಿನಿಮಾಗಳು ಉತ್ತರ ಭಾರತದಲ್ಲಿ ಧೂಳೆಬ್ಬಿಸಲು ಆರಂಭಿಸಿದ ಬಳಿಕ ಈ ಪ್ಯಾನ್ ಇಂಡಿಯಾ ಎಂಬ ಪದ ಹೆಚ್ಚು ಚಾಲ್ತಿಗೆ ಬಂತು. ದಕ್ಷಿಣ ಭಾರತದ ನಟರಾದ ಯಶ್, ಪ್ರಭಾಸ್, ಅಲ್ಲು ಅರ್ಜುನ್ ಸೇರಿದಂತೆ ಕೆಲವೇ ಕೆಲವರಿಗೆ ಪ್ಯಾನ್ ಇಂಡಿಯಾ ಸ್ಟಾರ್ ಎಂಬ ಪಟ್ಟ ಸಿಕ್ಕಿದೆ. ಅದೇ ರೀತಿ ಕೆಲವು ನಟಿಯರಿಗೆ ಈ ಬಗೆಯ ಚಾರ್ಮ್ ಇದೆ. ಈಗ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಕೂಡ ಪ್ಯಾನ್ ಇಂಡಿಯಾ ನಟಿ ಆಗಬೇಕು ಎಂದು ಆಸೆ ವ್ಯಕ್ತಪಡಿಸಿದ್ದಾರೆ. ಹಾಗೆ ನೋಡಿದರೆ, ರಶ್ಮಿಕಾ ಅವರಿಗೆ ಈಗಾಗಲೇ ಅಂಥ ಒಂದು ಸ್ಥಾನ ಸಿಕ್ಕಿದೆ ಎನ್ನಬಹುದು. ಕಳೆದ ವರ್ಷ ಬಿಡುಗಡೆಯಾದ ‘ಪುಷ್ಪ’ ಚಿತ್ರ ಕೂಡ ಪ್ಯಾನ್ ಇಂಡಿಯಾ ಸಿನಿಮಾ (Pan India Movie) ಎಂದರೆ ತಪ್ಪಿಲ್ಲ. ಯಾಕೆಂದರೆ ಹಿಂದಿಗೆ ಡಬ್ ಆಗಿದ್ದ ಆ ಚಿತ್ರವು ಬಾಲಿವುಡ್ ಸಿನಿಮಾಗಳಿಗೆ ಪೈಪೋಟಿ ನೀಡಿ ನೂರಾರು ಕೋಟಿ ರೂಪಾಯಿ ಕಮಾಯಿ ಮಾಡಿತು. ‘ಪುಷ್ಪ’ ಚಿತ್ರದ ಗೆಲುವಿನಿಂದಾಗಿ ಉತ್ತರ ಭಾರತದಲ್ಲಿ ರಶ್ಮಿಕಾ ಅವರ ಖ್ಯಾತಿ ಹೆಚ್ಚಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist