ಪಂಜಾಬಿನ ಚುನಾವಣಾ ಫಲಿತಾಂಶದ ಮುನ್ನ ಬಂದಿರುವ ಸಮೀಕ್ಷೆಗಳು ಆಮ್ ಆದ್ಮಿ ಪಕ್ಷ ಅಧಿಕಾರಕ್ಕೇರುವ ಭವಿಷ್ಯ ನುಡಿದಿದೆ.
ಒಂದು ವೇಳೆ ಆಮ್ ಆದ್ಮಿ ಪಕ್ಷ ಪಂಜಾಬಿನಲ್ಲಿ ಅಧಿಕಾರಕ್ಕೇರಿದರೆ, ಭಯ ಗೊಂಡಿರುವ ಪಕ್ಷ ಬಿಜೆಪಿಯಲ್ಲ, ಕಾಂಗ್ರೆಸ್ ಎಂದರೆ ಆಶ್ಚರ್ಯಪಡಬೇಡಿ!
ಯಾಕೆಂದರೆ ಬಿಜೆಪಿಯ ಅಧಿಕಾರ ವಿರೋಧಿ ಅಲೆಯ ಲಾಭಪಡೆಯುವ ವಿರೋಧಪಕ್ಷವಾಗಿ ದೇಶಾದ್ಯಂತ ಆಮ್ ಆದ್ಮಿ ಪಕ್ಷ ಬೆಳೆಯಬಹುದು ಎಂಬುದು ರಾಜಕೀಯ ವಿಶ್ಲೇಷಕರ ಸ್ಪಷ್ಟ ನುಡಿ.
ಒಂದು ಪೂರ್ಣಪ್ರಮಾಣದ ರಾಜ್ಯದಲ್ಲಿ ಒಂದು ವೇಳೆ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೇರಿದರೆ, ಅದು ದೇಶಾದ್ಯಂತ ಬದಲಿ ವಿರೋಧಪಕ್ಷವಾಗಿ ಆಗ ವಿರೋಧ ಪಕ್ಷದ ನಾಯಕನಾಗಿ ಬೆಳೆಯಬಹುದು ಎಂಬುದು ರಾಜಕೀಯ ವಿಶ್ಲೇಷಕರ ಅಂಬೋಣ.
ಈಗ ವಿರೋಧ ಪಕ್ಷದ ನಾಯಕನಾಗಿ ಕಾಂಗ್ರೆಸ್ ದೇಶಾದ್ಯಂತ ಕಾರ್ಯನಿರ್ವಹಿಸುತ್ತಿದೆ. ಆ ಸ್ಥಾನವನ್ನು ಆಮ್ ಆದ್ಮಿ ಪಕ್ಷ ತುಂಬಬಹುದು. ಕಾಂಗ್ರೆಸ್ನ ಜೊತೆಗಿರುವ ಬಿಜೆಪಿ ವಿರೋಧಿ ಮತಗಳು ಆಮ್ ಆದ್ಮಿಯ ಕಡೆಗೆ ಒಲವು ತೋರಿಸಬಹುದು ಎಂಬುದು ರಾಜಕೀಯ ವಿಶ್ಲೇಷಕರ ಮಾತು.
ಸಮರ್ಥರನ್ನು ಪಕ್ಷದಿಂದ ದೂರ ಇರಿಸುವ ಹಾಗೂ ತನ್ನ ಬೆಂಬಲಿಗರಿಗೆ ಮನೆ ಹಾಕುವ ಸಂಸ್ಕೃತಿ ಇರುವ ಕಾಂಗ್ರೆಸ್ ಪಕ್ಷ ದೇಶಾದ್ಯಂತ ತನ್ನ ನೆಲೆಯನ್ನು ಕಳೆದುಕೊಳ್ಳುತ್ತಿರುವುದು ಸ್ಪಷ್ಟವಾಗುತ್ತಿದೆ. ಈ ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಆಮ್ ಆದ್ಮಿ ಪಕ್ಷ ತುಂಬಬಹುದೇ ಎಂಬುದು ಈಗ ಕುತೂಹಲದ ಸಂಗತಿ. ಪಂಜಾಬಿನ ಚುನಾವಣೆಯ ಫಲಿತಾಂಶ ಈ ಕುತೂಹಲಕ್ಕೆ ಸಮರ್ಪಕವಾದ ಉತ್ತರ ನೀಡಲಿದೆ ಎಂಬುದು ರಾಜಕೀಯ ವಿಶ್ಲೇಷಕರ ಸ್ಪಷ್ಟ ನುಡಿ. ಏನಾಗುತ್ತದೆ ಎಂಬುದನ್ನು ಕಾದು ನೋಡೋಣ.
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?