ಭಾನುವಾರ, ಫೆಬ್ರವರಿ 23, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

NIJ ಎಕ್ಸಲೆರೋ ಪ್ಲಸ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ, 53 ಸಾವಿರ ರೂ, 190 ಕಿ.ಮೀ ಮೈಲೇಜ್!

Twitter
Facebook
LinkedIn
WhatsApp
NIJ ಎಕ್ಸಲೆರೋ ಪ್ಲಸ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ, 53 ಸಾವಿರ ರೂ, 190 ಕಿ.ಮೀ ಮೈಲೇಜ್!

ನವದೆಹಲಿ(ಮಾ.20): ಭಾರತದಲ್ಲಿ ಅತೀ ಹೆಚ್ಚು ಮೈಲೇಜ್ ನೀಡಬಲ್ಲ ಎಲೆಕ್ಟ್ರಿಕ್ ಸ್ಕೂಟರ್ ಮಾರುಕಟ್ಟೆಗೆ ಬಿಡುಗಡೆಯಾಗುತ್ತಿದೆ. ಇದೀಗ NIJ ಆಟೋಮೇಟಿವ್ ಕಂಪನಿ ಇದೀಗ NIJ ಎಕ್ಸಲೆರೋ ಪ್ಲಸ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದೆ. ಇದರ ಬೆಲೆ 53,000 ರೂಪಾಯಿಂದ ಆರಂಭಗೊಳ್ಳುತ್ತಿದ್ದು, ಟಾಪ್ ಮಾಡೆಲ್ ಬೆಲೆ 98,000 ರೂಪಾಯಿ(ಎಕ್ಸ್ ಶೋ ರೂಂ).

ಕೈಗೆಟುಕವ ದರದಲ್ಲಿ NIJ ಆಟೋಮೇಟಿವ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದೆ. ಇದರ ಮತ್ತೊಂದು ವಿಶೇಷತೆ ಅಂದರೆ ಮೈಲೇಜ್. ಒಂದು ಬಾರಿ ಸಂಪೂರ್ಣ ಚಾರ್ಜ್ ಮಾಡಿದರೆ 190 ಕಿ.ಮೀ ಮೈಲೇಜ್ ನೀಡಲಿದೆ. ಇದು ಇಕೋ ಮೂಡ್‌ನಲ್ಲಿ ರೈಡ್ ಮಾಡಿದಾಗ ಈ ರೇಂಜ್ ಸಿಗಲಿದೆ. ಇನ್ನು ಸಿಟಿ ಮೂಡ್‌ನಲ್ಲಿ 140 ಕಿ.ಮೀ ಮೈಲೇಜ್ ಸಿಗಲಿದೆ ಎಂದು NIJ ಹೇಳಿದೆ.

NIJ ಎಕ್ಸಲೆರೋ ಪ್ಲಸ್ ಸ್ಕೂಟರ್‌ನಲ್ಲಿ ಮೂರು ವೇರಿಯೆಂಟ್ ಲಭ್ಯವಿದೆ. 1.5 Kw (48V), 1.5 Kw (60V) ಹಾಗೂ 3 Kw(48V) ಡ್ಯುಯೆಲ್ ಬ್ಯಾಟರಿ ಸೆಟ್ಅಪ್ ವೇರಿಯೆಂಟ್ ಲಭ್ಯವಿದೆ. ಇದೀಗ ಕಡಿಮೆ ಬೆಲೆ, ಗರಿಷ್ಠ ಮೈಲೇಜ್ ಸ್ಕೂಟರ್ ಭಾರತದ ಮಾರುಕಟ್ಟೆಯಲ್ಲಿ ಹೊಸ ಸಂಚನ ಸೃಷ್ಟಿಸುತ್ತಿದೆ. NIJ ಎಕ್ಸಲೆರೋ ಪ್ಲಸ್ ಸ್ಕೂಟರ್ ಬುಕಿಂಗ್ ಮಾಡಲು ಗ್ರಾಹಕರು ಆಸಕ್ತಿ ತೋರುತ್ತಿದ್ದಾರೆ.
ಭಾರತದಲ್ಲಿ ಈಗಾಗಲೇ ಎಲೆಕ್ಟ್ರಿಕ್ ಸ್ಕೂಟರ್ ಹಾಗೂ ಕಾರುಗಳ ಚಾರ್ಜಿಂಗ್ ಮಾಡಲು ಕೇಂದ್ರಗಳ ಸ್ಥಾಪನೆಯಾಗುತ್ತಿದೆ. ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸಲಾಗುತ್ತಿದೆ. ಈ ಮೂಲಕ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.

ಇ-ಸ್ಕೂಟರ್‌ ಚಾಜ್‌ರ್‍ ಮಾಡಲು 1000 ಕೇಂದ್ರ ಸ್ಥಾಪನೆಗೆ ಒಪ್ಪಂದ
ರಾಜ್ಯದಲ್ಲಿ ವಿದ್ಯುತ್‌ ದ್ವಿಚಕ್ರ ವಾಹನಗಳಿಗೆ ಒಂದು ಸಾವಿರ ತ್ವರಿತ ಚಾರ್ಜಿಂಗ್‌ ಸೌಲಭ್ಯ ಸ್ಥಾಪಿಸಲು ಎಥರ್‌ ಎನರ್ಜಿ ಮತ್ತು ಎಸ್ಕಾಂಗಳ ನಡುವೆ ಒಪ್ಪಂದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಸಹಿ ಮಾಡಲಾಯಿತು. ಚಾರ್ಜಿಂಗ್‌ ಸೌಲಭ್ಯಗಳಿಗೆ ಅಗತ್ಯ ತಾಂತ್ರಿಕ ಬೆಂಬಲವನ್ನು ಎಸ್ಕಾಂಗಳು ನೀಡಲಿದ್ದು, ಸರ್ಕಾರಿ ಸಂಸ್ಥೆಗಳು ಈ ಸೌಲಭ್ಯ ಸ್ಥಾಪನೆಗೆ ಸ್ಥಳಾವಕಾಶ ಒದಗಿಸಲು ಎಸ್ಕಾಂಗಳೊಂದಿಗೆ ಸಮನ್ವಯ ವಹಿಸಲಿವೆ. ಎಥರ್‌ ಎನರ್ಜಿ ಕಂಪನಿಯು ವಿದ್ಯುತ್‌ ದ್ವಿಚಕ್ರ ವಾಹನಗಳಿಗೆ ಉಚಿತವಾಗಿ ಚಾರ್ಜಿಂಗ್‌ ಸೌಲಭ್ಯ ಕಲ್ಪಿಸಲಿದೆ.
ಎಥರ್‌ ಎನರ್ಜಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ತರುಣ್‌ ಮೆಹ್ತಾ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್‌ ಈ ಒಪ್ಪಂದಕ್ಕೆ ಸಹಿ ಮಾಡಿದರು. ಶಾಸಕ ಅರವಿಂದ ಬೆಲ್ಲದ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್‌, ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ.ಕುಮಾರ ನಾಯಕ್‌ ಇತರರು ಉಪಸ್ಥಿತರಿದ್ದರು.

ಎಲೆಕ್ಟ್ರಿಕ್‌ ಸ್ಕೂಟರ್‌ ಬಳಿಕ ಓಲಾ ಬೈಕ್‌, ಕಾರುಗಳು ಮಾರುಕಟ್ಟೆಗೆ: ಭವೀಶ್‌
ಕೇವಲ 2 ದಿನಗಳಲ್ಲಿ ಆನ್‌ಲೈನ್‌ ಮುಖಾಂತರ ಭರ್ಜರಿ 1100 ಕೋಟಿ ರು. ಮೌಲ್ಯದ ಎಲೆಕ್ಟ್ರಿಕ್‌ ಸ್ಕೂಟರ್‌ಗಳ ಮಾರಾಟ ದಾಖಲಿಸಿದ ಬೆಂಗಳೂರಿನ ಓಲಾ ಕಂಪನಿ, ಮುಂದಿನ ದಿನಗಳಲ್ಲಿ ಎಲೆಕ್ಟ್ರಿಕ್‌ ಬೈಕ್‌ ಮತ್ತು ಕಾರು ಉತ್ಪಾದನಾ ಕ್ಷೇತ್ರಕ್ಕೂ ಲಗ್ಗೆ ಇಡಲು ಮುಂದಾಗಿದೆ. ಶೀಘ್ರವೇ ಎಲೆಕ್ಟ್ರಿಕ್‌ ಬೈಕ್‌ ಮತ್ತು ಇ-ಕಾರುಗಳನ್ನು ಉತ್ಪಾದಿಸಿ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಓಲಾ ಕಂಪನಿ ಸಿಇಒ ಭವೀಷ್‌ ಅಗರ್‌ವಾಲ್‌ ಹೇಳಿದ್ದಾರೆ. ಈ ಸಂಬಂಧ ಗುರುವಾರ ಬೆಳಗ್ಗೆ ಟ್ವೀಟರ್‌ನಲ್ಲಿ ತಮ್ಮ ಬ್ಲಾಗ್‌ ಪೋಸ್ಟ್‌ ಹಂಚಿಕೊಂಡಿರುವ ಭವೀಷ್‌ ಅವರು, ನಾವು ಈಗಾಗಲೇ ಅತ್ಯುತ್ತಮ ಗುಣಮಟ್ಟದ ಎಸ್‌-1 ಹೆಸರಿನ ಎಲೆಕ್ಟ್ರಿಕ್‌ ಸ್ಕೂಟರ್‌ ಅನ್ನು ನಿರ್ಮಾಣ ಮಾಡಿದ್ದೇವೆ. ಮುಂದಿನ ತ್ರೈಮಾಸಿಕಗಳಲ್ಲಿ ನಾವು ಹೆಚ್ಚು ಎಲೆಕ್ಟ್ರಿಕ್‌ ಸ್ಕೂಟರ್‌ಗಳ ಜತೆಗೆ ಬೈಕ್‌ ಮತ್ತು ಕಾರುಗಳನ್ನು ಉತ್ಪಾದಿಸುತ್ತೇವೆ. ಪರಿಸರಕ್ಕೆ ಹಾನಿಕಾರಕವಾದ ಸಾಂಪ್ರದಾಯಿಕ ವಾಹನಗಳು ಅಪ್ರಸ್ತುತವಾಗಿವೆ. ಆದರೆ ಓಲಾದ ಎಲೆಕ್ಟ್ರಿಕ್‌ ವಾಹನಗಳು ಸ್ಮಾರ್ಟ್‌ ಆಗಿವೆ ಎಂದು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist