ನಟ ಶಿವರಾಜ್ಕುಮಾರ್ (Shivarajkumar) ಅವರು ಇಂದು (ಮಾ.24) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಆಗಿದ್ದಾರೆ. ಬಳಿಕ ಕೆಲವು ವಿಚಾರಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ಜೇಮ್ಸ್ ಚಿತ್ರಕ್ಕೂ ದಿ ಕಾಶ್ಮೀರ್ ಫೈಲ್ಸ್ (The Kashmir Files) ಸಿನಿಮಾಗೂ ಯಾವುದೇ ಸಂಬಂಧವಿಲ್ಲ. ದಿ ಕಾಶ್ಮೀರ್ ಫೈಲ್ಸ್ ಚಿತ್ರದಿಂದ ಜೇಮ್ಸ್ (James Movie) ಸಿನಿಮಾಗೆ ತೊಂದರೆಯಿಲ್ಲ’ ಎಂದು ಅವರು ಹೇಳಿದ್ದಾರೆ. ‘ನಾನು ರಾಜಕಾರಣಿಯಾಗಿ ಈ ಮಾತನ್ನು ಹೇಳುತ್ತಿಲ್ಲ. ಒಬ್ಬ ನಟನಾಗಿ ನಾನು ಈ ಮಾತನ್ನು ಹೇಳುತ್ತಿದ್ದೇನೆ. ಕನ್ನಡ ಸಿನಿಮಾಗೆ ತೊಂದರೆ ಆದರೆ ನಾನು ಮುಂದಿರುತ್ತೇನೆ. ಒಳ್ಳೆಯ ಕಲೆಕ್ಷನ್ ಇದ್ದರೆ ಏಕೆ ಸಿನಿಮಾ ತೆಗೆಯಬೇಕು. ಸಮಸ್ಯೆ ಬಂದಾಗ ಹೋರಾಡಿ ಬಗೆಹರಿಸಿಕೊಳ್ಳಬೇಕಾಗಿದೆ. ನಮ್ಮ ಭಾಷೆ ವಿಚಾರ ಬಂದಾಗ ನಾವು ಮುಂದಿರಬೇಕು’ ಎಂದು ಶಿವರಾಜ್ಕುಮಾರ್ ಹೇಳಿದ್ದಾರೆ. ಪುನೀತ್ ರಾಜ್ಕುಮಾರ್ ನಟನೆಯ ‘ಜೇಮ್ಸ್’ ಸಿನಿಮಾ ಮಾ.17ರಂದು ತೆರೆಕಂಡಿತು. ನಾಲ್ಕು ದಿನಕ್ಕೆ 100 ಕೋಟಿ ರೂಪಾಯಿ ಕಲೆಕ್ಷನ್ ಮಾಡುವಲ್ಲಿ ಈ ಸಿನಿಮಾ ಯಶಸ್ವಿ ಆಯಿತು ಎಂದು ವರದಿ ಆಗಿದೆ. ಇಂಥ ಚಿತ್ರಕ್ಕೆ ಬೇರೆ ಭಾಷೆಯ ಸಿನಿಮಾಗಳಿಂದ ತೊಂದರೆ ಆಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist