ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಸಾವಿಗೆ ಕಾರಣವಾಗಿದ್ದ (murder) ಒಬ್ಬ ವ್ಯಕ್ತಿಗೆ ಬೆಂಗಳೂರಿನ ಸಿವಿಲ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ನಗರದ ಆಡುಗೋಡಿಯ ಬಳಿ (Adugodi police) ಲಕ್ಷ್ಮಣ ರಾವ್ ನಗರದ ನಿವಾಸಿ ಅಬ್ದುಲ್ ವಾಸಿಂ ಶಿಕ್ಷೆಗೆ ಗುರಿಯಾದ ವ್ಯಕ್ತಿ. ಈತನ ಮೇಲಿನ ಆರೋಪ ಋಜುವಾದ ಹಿನ್ನೆಲೆಯಲ್ಲಿ ನಗರದ 60ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ವಿದ್ಯಾಧರ್ ಶಿರಹಟ್ಟಿ ಅಪರಾಧಿಗೆ ಜೀವಾವಧಿ ಶಿಕ್ಷೆ (life imprisonment) ಮತ್ತು 10 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ.ಏನಿದು ಪ್ರಕರಣ: ಬೆಂಗಳೂರು ಆಡುಗೋಡಿಯ ನಿವಾಸಿಗಳಾದ ಪರಮೇಶ್ (39) ಹಾಗೂ ಆರೋಪಿ ಅಬ್ದುಲ್ ವಾಸೀಂ ಮಧ್ಯೆ ಸಣ್ಣಪುಟ್ಟ ವಿಚಾರಕ್ಕೆ ಜಗಳ ನಡೆಯುತ್ತಿತ್ತು. 2020ರ ಜುಲೈ 20ರಂದು ಮಧ್ಯಾಹ್ನ ಪರಮೇಶ್ ಬಳಿ ಅಬ್ದುಲ್ ವಾಸಿಂ ಬೀಡಿ ಕೇಳಿದ್ದ. ಅದಕ್ಕೆ ತನ್ನ ಬಳಿ ಬೀಡಿ ಇಲ್ಲ ಎಂದು ಹೇಳಿದ್ದ. ಅದಕ್ಕೆ ವಾಸಿಂ ಜಗಳ ಮಾಡಿ ಹೋಗಿದ್ದ. ಅದಾದ ಮೇಲೆ ಅರ್ಧ ಗಂಟೆಗೆಲ್ಲಾ ವಾಪಸಾಗಿ ಪರಮೇಶ್ ಮನೆಗೆ ನುಗ್ಗಿ, ಹಲ್ಲೆಗೆ ಮುಂದಾಗಿದ್ದ. ಆತನನ್ನು ರಸ್ತೆಗೆ ಎಳೆದು ಸ್ಕ್ರೂ ಡ್ರೈವರ್ನಿಂದ ಕಿವಿ ಮತ್ತು ಕುತ್ತಿಗೆ ಭಾಗದಲ್ಲಿ ಇರಿದಿದ್ದ ವಾಸಿಂ. ಘಟನೆಯಲ್ಲಿ ಪರಮೇಶ್ ಮೃತಪಟ್ಟಿದ್ದರು.
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?