ಬುಧವಾರ, ಮಾರ್ಚ್ 12, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರೈತ ಸಂಪರ್ಕ ಕೇಂದ್ರಗಳಲ್ಲಿ ಶೇ. 90 ರಷ್ಟು ಸಬ್ಸಿಡಿಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳ ಮಾಹಿತಿ ನಿಮಗೆ ಗೊತ್ತೇ?

Twitter
Facebook
LinkedIn
WhatsApp
ರೈತ ಸಂಪರ್ಕ ಕೇಂದ್ರಗಳಲ್ಲಿ ಶೇ. 90 ರಷ್ಟು ಸಬ್ಸಿಡಿಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳ ಮಾಹಿತಿ ನಿಮಗೆ ಗೊತ್ತೇ?

ರೈತರಿಗೆ  ಕೃಷಿ ಚಟುವಟಿಕೆಗಳಿಗೆ ಬೇಕಾಗುವ ಕೃಷಿ ಯಂತ್ರೋಪಕರಣಗಳು ಸಬ್ಸಿಡಿಯಲ್ಲಿ  ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆಯಿಂದಷ್ಟೇ ಅಲ್ಲ, ರೈತ ಸಂಪರ್ಕ ಕೇಂದ್ರಗಳಿಂದಲೂ ಸಿಗುತ್ತವೆ. ಹೌದು, ಒಂದೇ ಸೂರಿನಡಿಯಲ್ಲಿ ರೈತರಿಗೆ ಹಲವು ಸೌಲಭ್ಯಗಳು ಸಿಗಲೆಂದು ಸರ್ಕಾರವು ಹೋಬಳಿಗೊಂದು ರೈತ ಸಂಪರ್ಕ ಕೇಂದ್ರಗಳನ್ನು ಆರಂಭಿಸಿದೆ. ಈ ಕೇಂದ್ರಗಳಿಗೆ ಆರ್.ಎಸ್.ಕೆ (RSK) ಎಂದು ಸಹ ಕರೆಯಲಾಗುವುದು.
ಸಬ್ಸಿಡಿಯಲ್ಲಿ ಕೃಷಿ ಯಂತ್ರೋಪಕರಣಗಳನ್ನು ಪಡೆಯಲು  ರೈತರು ಜಿಲ್ಲಾ ಅಥವಾ ತಾಲೂಕು ಕೇಂದ್ರಗಳಿಗೆ ಅಲೆಯುವ ಅಗತ್ಯವಿಲ್ಲ. ಹತ್ತಿರದ ಹೋಬಳಿ ಕೇಂದ್ರಗಳಲ್ಲಿಯೇ ತಮಗೆ ಬೇಕಾಗುವ ಕೃಷಿ ಯಂತ್ರೋಪಕರಣಗಳನ್ನು ಸಬ್ಸಿಡಿಯಲ್ಲಿ ಪಡೆಯಬಹುದು.
ಬಿತ್ತನೆಯಿಂದ ಹಿಡಿದು ಬೆಳ ಕಟಾವುವರೆಗೂ ಬೇಕಾಗುವ ಎಲ್ಲಾ ಕೃಷಿ ಯಂತ್ರೋಪಕರಣಗಳು ಇಲ್ಲಿಸಿಗುತ್ತವೆ. ಕೃಷಿ ವಿಶ್ವವಿದ್ಯಾಲಯಗಳಿಂದ ಅಭಿವೃದ್ಧಿಪಡಿಸಿದ ಬೀಜಗಳು,  ಸುಧಾರಿತ ತಳಿಗಳು,  ಲಘು ಪೋಷಕಾಂಶಗಳು, ಜೈವಿಕ ಗೊಬ್ಬರಗಳನ್ನು ಶೇ. 70 ರಷ್ಟು ಸಬ್ಸಿಡಿಯಲ್ಲಿ ಪಡೆಯಬಹುದು. ಆಯಾ ಪ್ರದೇಶಕ್ಕನುಗುಣವಾಗಿ ಬೇಕಾಗುವ ಬೀಜಗಳು ಹಾಗೂ ಆಧುನಿಕ ಕೃಷಿ ಯಂತ್ರೋಪಕರಣಗಳು ಸಿಗುತ್ತವೆ.

ಯಾವ ರೈತರಿಗೆ ಎಷ್ಟು ಸಬ್ಸಿಡಿ  ಸಿಗುತ್ತದೆ.?
ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆಗೆ ಬೇಕಾಗುವ ಬೀಜಗಳು, ಕೃಷಿ ಯಂತ್ರೋಪಕರಣಗಳು ಸಬ್ಸಿಡಿಯಲ್ಲಿ ಸಿಗುತ್ತವೆ.  ರೈತರಿಗೆ ಸಾಮಾನ್ಯ ವರ್ಗದ ರೈತರಿಗೆ ಶೇ. 50 ರಷ್ಟು, ಪರಿಶಿಷ್ಟ  ಜಾತಿ ಮತ್ತು ಪರಿಶಿಷ್ಟ ಪಂಗಡದವರೆಗೆ ಶೇ. 90 ರಷ್ಟು ಸಹಾಯಧನ ಸಿಗುತ್ತದೆ.

*ಕೃಷಿ ಯಾಂತ್ರೀಕರಣ ಯೋಜನೆಯಡಿಯಲ್ಲಿ ಸಿಗುವ ಯಂತ್ರೋಪಕರಣಗಳು *
ಈ ಯೋಜನೆಯಡಿಯಲ್ಲಿ ರೈತರಿಗೆ ಸಣ್ಣ ಟ್ರ್ಯಾಕ್ಟರ್, ಪವರ್ ಟಿಲ್ಲರ್, ಭೂಮಿ ಸಿದ್ದತೆ ಉಪಕರಣಗಳು, ನಾಟಿ ಬಿತ್ತನೆ ಉಪಕರಣಗಳು, ಕುಯ್ಲು ಮತ್ತು ಒಕ್ಕಣೆ ಉಪಕರಣಗಳು, ಡೀಸೆಲ್ ಪಂಪ್ ಸೆಟ್, ಅಂತರ್ ಬೇಸಾಯ ಉಪಕರಣಗಳು ಸಿಗುತ್ತವೆ.  ಸಾಮಾನ್ಯ ವರ್ಗದವರೆಗೆ  ಗರಿಷ್ಟ ಒಂದು ಲಕ್ಷ ರೂಪಾಯಿಯವರೆಗೆ ಸಹಾಯಧನ ಸಿಗುತ್ತದೆ.ಅದೇ ರೀತಿ ಪರಿಶಿಷ್ಟ  ಜಾತಿ ಮತ್ತು ಪರಿಶಿಷ್ಟ ಪಂಗಡದವರೆಗೆ  ಗರಿಷ್ಟ 3 ಲಕ್ಷ ರೂಪಾಯಿಯವರೆ ಗೆಸಹಾಯಧನ ನೀಡಲಾಗುವುದು.

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿಯೂ ಸಿಗಲಿದೆ ಸಬ್ಸಿಡಿ
ರೈತರಲ್ಲಿ ನೀರಿನ ಮಿತ ಬಳಕೆ ಮಾಡುವಂತೆ ಪ್ರೋತ್ಸಾಹಿಸುವುದಕ್ಕಾಗಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಯನ್ನು ಆರಂಭಿಸಲಾಗಿದೆ. ಈ ಕಾರ್ಯಕ್ರಮದಡಿಯಲ್ಲಿ ಲಭ್ಯವಿರುವ ನೀರನ್ನು ಸಮರ್ಥಬಳಕೆ ಮಾಡುವಲ್ಲಿ ಅನುವಾಗುವಂತೆ ಸೂಕ್ಷ್ಮ ನೀರಾವರಿ ಘಟಕಗಳಾದ ತುಂತುರು ನೀರಾವರಿ ಘಟಕ ಮತ್ತು ಹನಿ ನೀರಾವರಿ ಘಟಕಗಳನ್ನು ಸಬ್ಸಿಡಿಯಲ್ಲಿ ನೀಡಲಾಗುವುದು. ರೈತರಿಗೆ 2 ಹೆಕ್ಟೇರ್  ಪ್ರದೇಶದವರಿಗೆ ಶೇ. 90 ರಷ್ಟು ಸಹಾಯಧನ  ನೀಡಲಾಗುವುದು.

ಪಿಎಂ ಕಿಸಾನ್ ಯೋಜನೆಯಡಿ ಬೇರೆ ರಾಜ್ಯದ ರೈತರಿಗೆ 6 ಸಾವಿರ ಜಮೆಯಾದರೆ ಕರ್ನಾಟಕದ ರೈತರಿಗೆ 10 ಸಾವಿರ ಜಮೆ- ಇಲ್ಲಿದೆ ಮಾಹಿತಿ
ನೀರು ದೊರೆಯುವ ಸ್ಥಳದಿಂದ ನೀರು ಹರಿಸುವ ಪೈಪುಗಳನ್ನು ನೀಡಲಾಗುವುದು. ಶೇ. 50 ರಿಂದ 75ರವರೆಗೆ ಪಿವಿಸಿ ಪೈಪ್ ಗಳಿಗೆ ಸಬ್ಸಿಡಿ ನೀಡಲಾಗುವುದು. ತುಂತುರು, ಹನಿ ನೀರಾವರಿ ಘಟಕಕ್ಕಾಗಿ ರೈತರಿಗೆ ಸಹಾಯಧನ ನೀಡಲಾಗುವುದು.

ಸಹಾಯಧನ ಪಡೆಯಲು ಬೇಕಾಗುವ  ದಾಖಲೆಗಳು
ರೈತ ಸಂಪರ್ಕ ಕೇಂದ್ರಗಳಿಂದ ರೈತರು ಸಬ್ಸಿಡಿಯಲ್ಲಿ ಬೀಜಗಳು, ಕೃಷಿ ಯಂತ್ರೋಪಕರಣಗಳನ್ನು  ಪಡೆಯಯಲು ಆಧಾರ್ ಕಾರ್ಡ್ ಹೊಂದಿರಬೇಕು. ಬ್ಯಾಂಕ್ ಪಾಸ್ ಬುಕ್ ಇರಬೇಕು. ಪರಿಶಿಷ್ಟ  ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹೊಂದಿರಬೇಕು. ಇತ್ತೀಚಿನ ಫೋಟೋ ಹಾಗೂ  ಜಮೀನಿನ ಪಹಣಿ ಸೇರಿದಂತೆ ಇನ್ನಿತರ ದಾಖಲೆಗಳನ್ನು ಹೊಂದಿರಬೇಕು.

ಎಲ್ಲಿ ಸಂಪರ್ಕಿಸಬೇಕು..?
ರೈತರು ಕೃಷಿ ಚಟುವಟಿಕೆಗಳಿಗೆ ಬೇಕಾಗುವ ಯಂತ್ರೋಪಕರಣಗಳನ್ನು ಸಬ್ಸಿಡಿಯಲ್ಲಿ ಪಡೆಯಲು ತಮ್ಮ ವ್ಯಾಪ್ತಿಯಲ್ಲಿರುವ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಬೇಕು. ಅಲ್ಲಿ ಲಭ್ಯತೆಯ ಆಧಾರದ ಮೇಲೆ ರೈತರಿಗೆ ಯಂತ್ರೋಪಕರಣಗಳನ್ನು ಸಬ್ಸಿಡಿಯಲ್ಲಿ ನೀಡಲಾಗುವುದು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist