ತುಮಕೂರು: ಹೃದಯಾಘಾತದಿಂದ ತುಮಕೂರು ಗುಪ್ತವಾರ್ತೆ ಡಿವೈಎಸ್ಪಿ ಶಿವಕುಮಾರ್ (DYSP Shivakumar) ತಡರಾತ್ರಿ ನಿಧನ (Death) ಹೊಂದಿದ್ದಾರೆ. ಜಿಲ್ಲೆಯ ನಿವಾಸದಲ್ಲಿ ಶಿವಕುಮಾರ್ ಕೊನೆಯುಸಿರೆಳೆದಿದ್ದಾರೆ. ಎಸ್ಪಿ ಕಚೇರಿ ಹಿಂಭಾಗದ ಕ್ವಾರ್ಟರ್ಸ್ನಲ್ಲಿ ಶಿವಕುಮಾರ್ ವಾಸವಾಗಿದ್ದರು. ಗುಪ್ತವಾರ್ತೆ ವಿಭಾಗದಲ್ಲಿ ಡಿವೈಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. 1994ರಲ್ಲಿ ಪೊಲೀಸ್ ಇಲಾಖೆಗೆ ಆಯ್ಕೆಯಾಗಿದ್ದರು. ಇನ್ನು ಶಿವಕುಮಾರ್ ಮೂಲತಃ ದಾವಣಗೆರೆ ಜಿಲ್ಲೆಯ ಜಗಳೂರು ಮೂಲದವರು. ಒಂದೂವರೆ ವರ್ಷದಿಂದ ತುಮಕೂರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಇವರ ಧರ್ಮಪತ್ನಿ ಶ್ರೀಮತಿ ವಿಜಯಲಕ್ಷ್ಮಿ. ಇವರಿಗೆ ಮೂರು ಜನ ಮಕ್ಕಳಿದ್ದು, ಇಬ್ಬರು ಹೆಣ್ಣು ಮಕ್ಕಳು ಮತ್ತು ಒಬ್ಬ ಗಂಡು ಮಗ. ಹಿರಿಯ ಮಗಳು ಇಂಜಿನಿಯರಿಂಗ್ ಪದವಿ ಮುಗಿಸಿದ್ದು, ಎರಡನೇ ಮಗಳು ಕವನ ಪ್ರಥಮ ವರ್ಷದ ಪಿಯುಸಿ ವ್ಯಾಸಂಗ ಮಾಡುತ್ತಿರುತ್ತಾರೆ. ಮಗ ಪ್ರತೀಕ್ 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾನೆ. ಮೃತರ ಅಂತ್ಯಸಂಸ್ಕಾರ ಅವರ ಸ್ವಂತ ಊರಾದ ಚಿತ್ರದುರ್ಗ ಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕ ಬನಹಳ್ಳಿ ಗ್ರಾಮದಲ್ಲಿ ನಡೆಯಲಿದೆ.
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?