ಬೆಂಗಳೂರು(ಮೇ.18): ರಾಜ್ಯದ ಎಲ್ಲ ಮಾದರಿ ಪದವಿ ಪೂರ್ವ ಕಾಲೇಜುಗಳಲ್ಲಿ 2022-23ನೇ ಸಾಲಿನ ಶೈಕ್ಷಣಿಕ ಸಾಲಿನ ಪ್ರವೇಶ ಪ್ರಕ್ರಿಯೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯು ವೇಳಾಪಟ್ಟಿ ಹಾಗೂ ಮಾರ್ಗಸೂಚಿ ಪ್ರಕಟಿಸಿದೆ.ಅದರಂತೆ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾದ ಮರು ದಿನದಿಂದಲೇ (ಮೇ 20) ಪ್ರಥಮ ಪಿಯುಸಿ ದಾಖಲಾತಿ ಹಾಗೂ ಜೂ.1ರಿಂದ ದ್ವಿತೀಯ ಪಿಯುಸಿ ದಾಖಲಾತಿ ಪ್ರಕ್ರಿಯೆ ಆರಂಭಿಸಲು ಅವಕಾಶ ಕಲ್ಪಿಸಿದೆ. ಎರಡೂ ತರಗತಿ ಮಕ್ಕಳಿಗೆ ಜೂ.9ರಿಂದ ಪಠ್ಯಕ್ರಮ ಬೋಧನಾ ಪ್ರಕ್ರಿಯೆ ಶುರುವಾಗಲಿದೆ.
ಕಳೆದ ವರ್ಷ ರಾಜ್ಯದ ವಿವಿಧ ಪಿಯು ಕಾಲೇಜುಗಳಲ್ಲಿ ಉದ್ಭವಿಸಿದ್ದ ಹಿಜಾಬ್, ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ಎಚ್ಚೆತ್ತ ಇಲಾಖೆಯು ಈ ಬಾರಿ ಹೈಕೋರ್ಚ್ ಆದೇಶದಂತೆ ಕಾಲೇಜು ಅಭಿವೃದ್ಧಿ ಸಮಿತಿಗಳು ನಿಗದಿಪಡಿಸಿರುವ ಸಮವಸ್ತ್ರ ತೊಟ್ಟು ತರಗತಿಗೆ ಬರಬೇಕು. ಸಮವಸ್ತ್ರ ನಿಗದಿಯಾಗದ ಕಾಲೇಜುಗಳಲ್ಲಿ ಸಮಾನತೆ ಮತ್ತು ಐಕ್ಯತೆಯನ್ನು ಕಾಪಾಡಿಕೊಂಡು ಹಾಗೂ ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ಬಾರದಂತಹ ಉಡುಪುಗಳನ್ನು ಧರಿಸಿ ವಿದ್ಯಾರ್ಥಿಗಳು ಕಾಲೇಜಿಗೆ ಹಾಜರಾಗಬೇಕೆಂದು ಸ್ಪಷ್ಟಸೂಚನೆ ನೀಡಿದೆ.
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?