ಹುಬ್ಬಳ್ಳಿ(ಮೇ.18): ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ(NWKRTC) ಮೇ.16ರಂದು ಒಂದೇ ದಿನ 6.14 ಕೋಟಿ ಆದಾಯ(Income) ಸಂಗ್ರಹವಾಗಿದೆ. ಇತ್ತೀಚಿನ ದಿನಗಳಲ್ಲಿ ಇದು ಅತಿ ಹೆಚ್ಚಿನ ಸಾರಿಗೆ ಆದಾಯವಾಗಿದೆ. ಈ ಹಿನ್ನೆಲೆಯಲ್ಲಿ ಸಂಸ್ಥೆಯ ವ್ಯಾಪ್ತಿಯ ಎಲ್ಲ ಘಟಕಗಳಲ್ಲಿ ಸಿಬ್ಬಂದಿಗಳಿಗೆ ಅಧಿಕಾರಿ ವರ್ಗ ಸಿಹಿ ಹಂಚಿ ಅಭಿನಂದನೆ ಸಲ್ಲಿಸಿದೆ.
ವಾಯವ್ಯ ಸಾರಿಗೆ ಸಂಸ್ಥೆಯೂ 6 ಜಿಲ್ಲೆಗಳ 9 ವಿಭಾಗಗಳನ್ನು ಹೊಂದಿದೆ. ಕೊರೋನಾದಿಂದಾಗಿ(Coronavirus) ಸಂಪೂರ್ಣ ಹಾನಿಗೊಳಲಾಗಿತ್ತು. ಸರ್ಕಾರದಿಂದ(Government of Karnataka) ಆರ್ಥಿಕ ನೆರವು ಪಡೆದು ಸಂಬಳ ನೀಡಿದ್ದುಂಟು. ಕೊರೋನಾ ಬಳಿಕ ಕಳೆದ ನಾಲ್ಕೈದು ತಿಂಗಳ ಹಿಂದೆಯೇ ಪೂರ್ಣ ಪ್ರಮಾಣದ ಸಾರಿಗೆ ಕಾರ್ಯಾಚರಣೆ ಆರಂಭಿಸಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಆದಾಯ ಸಂಗ್ರಹವಾಗಿರಲಿಲ್ಲ. ಮೇ ತಿಂಗಳಲ್ಲಿ ಸಂಸ್ಥೆಯ ಆದಾಯ ಸರಾಸರಿ ಪ್ರತಿ ದಿನಕ್ಕೆ 5.22 ಕೋಟಿ ಗಳಷ್ಟಾಗಿತ್ತು. ಆದರೆ ಮೇ 16ರಂದು 6.14 ಕೋಟಿ ಆದಾಯ ಸಂಗ್ರಹವಾಗಿದೆ. ಈ ಹಿನ್ನೆಲೆಯಲ್ಲಿ ಇದಕ್ಕೆ ಕಾರಣಿಭೂತರಾಗಿರುವ ಚಾಲನಾ ಸಿಬ್ಬಂದಿ, ತಾಂತ್ರಿಕ ಸಿಬ್ಬಂದಿಗಳಿಗೆ ಘಟಕ ವ್ಯವಸ್ಥಾಪಕರು ವಿಭಾಗದ ಅಧಿಕಾರಿಗಳಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಭರತ್.ಎಸ್ ಅಭಿನಂದನೆ ಸಲ್ಲಿಸಿದ್ದಾರೆ.
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?