ಸಂವಹನ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಅವರು ಗುರುವಾರ ಐಐಟಿ ಮದ್ರಾಸ್ನಲ್ಲಿ (IIT Madras) 5G ಕರೆಯನ್ನು(5G call) ಯಶಸ್ವಿಯಾಗಿ ಪರೀಕ್ಷಿಸಿದ್ದಾರೆ. ಸಂಪೂರ್ಣ ಎಂಡ್ ಟು ಎಂಡ್ ನೆಟ್ವರ್ಕ್ ಅನ್ನು ಭಾರತದಲ್ಲಿ ವಿನ್ಯಾಸಗೊಳಿಸಲಾಗಿದೆ ಮತ್ತು ಅಭಿವೃದ್ಧಿಪಡಿಸಲಾಗಿದೆ ಎಂದು ಸಚಿವರು ಹೇಳಿದರು. ಪರೀಕ್ಷಾ ಕರೆಯ ವಿಡಿಯೊವನ್ನು ಟ್ವೀಟ್ ಮಾಡಿರುವ ಸಚಿವರು ಅದಕ್ಕೆ “ಆತ್ಮನಿರ್ಭರ್ 5G” ಎಂದು ಶೀರ್ಷಿಕೆ ನೀಡಿದ್ದಾರೆ. ವಿಡಿಯೊದಲ್ಲಿ ವೈಷ್ಣವ್ ಸ್ಮಾರ್ಟ್ಫೋನ್ನಲ್ಲಿ ವಿಡಿಯೊ ಕರೆ ಮಾಡುತ್ತಿರುವುದು ಕಾಣಿಸುತ್ತದೆ. ನಮ್ಮ ಗೌರವಾನ್ವಿತ ಪ್ರಧಾನ ಮಂತ್ರಿಯವರ ಕನಸು ಸಾಕಾರವಾಗಿದೆ. ಭಾರತದಲ್ಲಿ 4G ಮತ್ತು 5G ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸುವುದು ಮತ್ತು ಜಗತ್ತಿಗೆ ತಯಾರಿಸುವುದು ಅವರ ಕನಸು. ಈ ಸಂಪೂರ್ಣ ತಂತ್ರಜ್ಞಾನದೊಂದಿದೆ ನಾವು ಜಗತ್ತನ್ನು ಗೆಲ್ಲಬೇಕು ಎಂದು ಸಚಿವರು ಹೇಳಿದ್ದಾರೆ.
ಭಾರತದಲ್ಲಿ 5G
ಈ ಹಿಂದೆ ಟೆಲಿಕಮ್ಯುನಿಕೇಷನ್ ಇಲಾಖೆಯು 2022ರಲ್ಲಿ ಭಾರತದಲ್ಲಿ 5G ಸೇವೆ ಆರಂಭಿಸುವುದಾಗಿ ಹೇಳಿತ್ತು. ಆರಂಭದಲ್ಲಿ ಭಾರತದ 13 ನಗರಗಳಲ್ಲಿ ಈ ಸೇವೆ ಲಭ್ಯವಾಗುವಂತೆ ಮಾಡಲಾಗುವುದು.ಆನಂತರ ಇತರ ನಗರಗಳಲ್ಲಿ ಸೇವೆ ನೀಡಲಾಗುವುದು ಎಂದು ಇಲಾಖೆ ಹೇಳಿತ್ತು. ಟೆಲಿಕಾಂ ಸಚಿವ ಅಶ್ವಿನಿ ವೈಷ್ಣವ್ ಅವರು ಜೂನ್ ಆರಂಭದಲ್ಲಿ ಏರ್ವೇವ್ಸ್ ಸೇರಿದಂತೆ 5G ತರಂಗಾಂತರದ ಹರಾಜನ್ನು ಸರ್ಕಾರ ನಡೆಸುವ ನಿರೀಕ್ಷೆಯಿದೆ ಎಂದು ಘೋಷಿಸಿದರು. ಹರಾಜಿನ ನಂತರ, ಸರ್ಕಾರವು ಅಂತಿಮವಾಗಿ ಈ ವರ್ಷದ ಆಗಸ್ಟ್ ಮತ್ತು ಸೆಪ್ಟೆಂಬರ್ನಲ್ಲಿ 13 ನಗರಗಳ ಜನರಿಗೆ 5G ಸೇವೆಗಳನ್ನು ಪ್ರಾರಂಭಿಸಬಹುದು ಎಂದು ಇಂಡಿಯಾ ಟುಡೇ ವರದಿ ಮಾಡಿದೆ.
ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ
ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?