ಮಂಗಳವಾರ, ಮೇ 14, 2024
ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಗುಜರಾತ್ vs ರಾಜಸ್ಥಾನ ಪ್ಲೇ ಅಫ್‌ ಪಂದ್ಯದ ಮೇಲೆ ವರುಣನ ವಕ್ರದೃಷ್ಠಿ..!

Twitter
Facebook
LinkedIn
WhatsApp
15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಗುಜರಾತ್ vs ರಾಜಸ್ಥಾನ ಪ್ಲೇ ಅಫ್‌ ಪಂದ್ಯದ ಮೇಲೆ ವರುಣನ ವಕ್ರದೃಷ್ಠಿ..!

ಕೋಲ್ಕತಾ(ಮೇ.24): ಬಹುನಿರೀಕ್ಷಿತ 15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ (Indian Premier League) ಮೊದಲ ಕ್ವಾಲಿಫೈಯರ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಅಂಕಪಟ್ಟಿಯಲ್ಲಿ ಮೊದಲೆರಡು ಸ್ಥಾನ ಪಡೆದ ಗುಜರಾತ್ ಟೈಟಾನ್ಸ್ (Gujarat Titans) ಹಾಗೂ ರಾಜಸ್ಥಾನ ರಾಯಲ್ಸ್‌ (Rajasthan Royals) ತಂಡಗಳು ಫೈನಲ್‌ಗಾಗಿ ಇಂದು ಇಲ್ಲಿನ ಈಡನ್‌ ಗಾರ್ಡನ್ಸ್‌ ಮೈದಾನದಲ್ಲಿ ಸೆಣಸಾಟ ನಡೆಸಲಿವೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಮಳೆಯ ಭೀತಿ ಎದುರಾಗಿದ್ದು, ಕ್ರಿಕೆಟ್ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿದೆ. ಕಳೆದೊಂದು ವಾರದಿಂದ ಪಶ್ಚಿಮ ಬಂಗಾಳದಲ್ಲಿ ಮಳೆಯ ಅಟ್ಟಹಾಸ ಜೋರಾಗಿದ್ದು, ಪ್ರತಿ ಗಂಟೆಗೆ 90 ಕಿಲೋ ಮೀಟರ್ ವೇಗದಲ್ಲಿ ಬಿರುಗಾಳಿ ಬೀಸುತ್ತಿದ್ದು, ಈಡನ್ ಗಾರ್ಡನ್ಸ್‌ ಮೈದಾನದ ಮಾಧ್ಯಮ ಗ್ಯಾಲರಿಗೆ ಅಳವಡಿಸಿದ್ದ ಗಾಜುಗಳು ಚೂರು ಚೂರಾಗಿವೆ. ಇದಷ್ಟು ಆದಷ್ಟು ಬೇಗ ರಿಪೇರಿ ಮಾಡಲಾಗಿದ್ದು, ಮಳೆಯಿಂದ ಪಿಚ್ ಒದ್ದೆಯಾಗದಂತೆ ಸಂಪೂರ್ಣವಾಗಿ ಮೈದಾನವನ್ನು ಕವರ್‌ ಮಾಡಲಾಗಿದೆ.

ಈಡನ್ ಗಾರ್ಡನ್ಸ್ (Eden Gardens) ಪಿಚ್ ಕ್ಯೂರೇಟರ್‌ ಪಿಚ್ ಕುರಿತಂತೆ ಮಾತನಾಡಿದ್ದು, ದಟ್ಟವಾದ ಕಪ್ಪು ಮೋಡಗಳು ಕವಿದಿವೆ. ಹೀಗಾಗಿ ನಾವು ಪಿಚ್ ಹಾಗೂ ಮೈದಾನವನ್ನು ಸಂಪೂರ್ಣವಾಗಿ ಕವರ್ ಮಾಡಿದ್ದೇವೆ. ದೊಡ್ಡ ದೊಡ್ಡ ಕಲ್ಲುಗಳು ಕವರ್ ಮೇಲೆ ಹೇರಲಾಗಿದ್ದು, ಗಾಳಿಯ ಒತ್ತಡವನ್ನು ತಡೆಯುವ ಸಾಮರ್ಥ್ಯವನ್ನು ಹೊಂದಿವೆ ಎಂದು ಪಿಚ್ ಕ್ಯೂರೇಟರ್ ಸುಜನ್ ಮುಖರ್ಜಿ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಮಾಹಿತಿ ನೀಡಿದ್ದಾರೆ.

8

ಪ್ಲೇ-ಆಫ್‌ನ ಒಟ್ಟು 4 ಪಂದ್ಯಗಳಿಗೆ ನಿಗದಿತ 200 ನಿಮಿಷಗಳ ಜೊತೆಗೆ ಹೆಚ್ಚುವರಿ 2 ಗಂಟೆಗಳ ಸಮಯಾವಕಾಶವನ್ನು ನೀಡಲಾಗಿದೆ. ಮೊದಲ 3 ಪಂದ್ಯಗಳು ಮಳೆಯಿಂದಾಗಿ ವಿಳಂಬಗೊಂಡರೆ ಓವರ್‌ ಕಡಿತಗೊಳಿಸದೆ ರಾತ್ರಿ 9.40ಕ್ಕೆ ಆರಂಭಿಸಲು ಗಡುವು ನೀಡಲಾಗಿದೆ. ಒಂದು ವೇಳೆ ತಲಾ 5 ಓವರ್‌ ಪಂದ್ಯ ನಡೆಸಲು ಅವಕಾಶ ಸಿಕ್ಕರೆ ಆ ಪಂದ್ಯವನ್ನು ಆರಂಭಿಸಲು ರಾತ್ರಿ 11.56ರ ವರೆಗೂ ಸಮಯವಿರಲಿದೆ. 5 ಓವರ್‌ ಪಂದ್ಯದಲ್ಲಿ ಟೈಮ್‌ ಔಟ್‌ ಇರುವುದಿಲ್ಲ. ಅಲ್ಲದೇ ಮಧ್ಯರಾತ್ರಿ 12.50ರೊಳಗೆ ಪಂದ್ಯ ಮುಗಿಯಬೇಕು.

IPL Playoffs ರದ್ದಾಗುವುದನ್ನು ತಡೆಯಲು ಬಿಸಿಸಿಐ ಮಾಸ್ಟರ್ ಪ್ಲಾನ್..!

5 ಓವರ್‌ ಪಂದ್ಯವೂ ಸಾಧ್ಯವಾಗದೆ ಇದ್ದಲ್ಲಿ ಸೂಪರ್‌ ಓವರ್‌ ನಡೆಯಲಿದೆ. ಸೂಪರ್‌ ಓವರ್‌ ಆರಂಭಿಸಲು ಮಧ್ಯರಾತ್ರಿ 12.50ರ ವರೆಗೂ ಸಮಯವಿರಲಿದೆ. ಮಳೆ ನಿಲ್ಲದೆ ಪಂದ್ಯ ನಡೆಸಲು ಸಾಧ್ಯವಾಗದೆ ಇದ್ದರೆ ಅಂಕಪಟ್ಟಿಯಲ್ಲಿ ಗಳಿಸಿದ ಸ್ಥಾನಗಳ ಮೇಲೆ ವಿಜೇತರ ನಿರ್ಧಾರವಾಗಲಿದೆ. ಕ್ವಾಲಿಫಯರ್‌-1 ಮಳೆಗೆ ಬಲಿಯಾದರೆ, ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದ ಗುಜರಾತ್‌ ನೇರವಾಗಿ ಫೈನಲ್‌ಗೇರಲಿದೆ. ರಾಜಸ್ಥಾನ ಕ್ವಾಲಿಫಯರ್‌-2ರಲ್ಲಿ ಆಡಬೇಕಾಗುತ್ತದೆ. ಎಲಿಮಿನೇಟರ್‌ ಪಂದ್ಯ ಮಳೆಗೆ ಆಹುತಿಯಾದರೆ, ಆರ್‌ಸಿಬಿ ಹೊರಬೀಳಲಿದ್ದು, 2ನೇ ಕ್ವಾಲಿಫಯರ್‌ ಪಂದ್ಯಕ್ಕೆ ಲಖನೌ ಪ್ರವೇಶ ಪಡೆಯಲಿದೆ

7

ಫೈನಲ್ ಪಂದ್ಯಕ್ಕೆ ಮೀಸಲು ದಿನ ನಿಗದಿ

ಮೇ 29ಕ್ಕೆ ನಿಗದಿಯಾಗಿರುವ ಫೈನಲ್‌ ಪಂದ್ಯ ರಾತ್ರಿ 8ಕ್ಕೆ ಆರಂಭಗೊಳ್ಳುವ ಕಾರಣ ಮಳೆಯಿಂದ ತಡವಾದರೆ ಓವರ್‌ ಕಡಿತವಿಲ್ಲದೆ ಪಂದ್ಯ ಆರಂಭಿಸಲು ರಾತ್ರಿ 10.10ರ ವರೆಗೂ ಅವಕಾಶವಿರಲಿದೆ. 5 ಓವರ್‌ ಪಂದ್ಯ ನಡೆಸಲು ಮಧ್ಯರಾತ್ರಿ 12.26ರ ವರೆಗೂ ಕಾಲಾವಕಾಶವಿರಲಿದ್ದು, ಮೇ 30 ಅನ್ನು ಮೀಸಲು ದಿನವಾಗಿಡಲಾಗಿದೆ. ಮೊದಲ ದಿನ ಪಂದ್ಯ ಅರ್ಧ ನಡೆದಿದ್ದರೆ, ಮೀಸಲು ದಿನದಂದು ಪಂದ್ಯ ಮುಂದುವರಿಯಲಿದೆ. ಕೇವಲ ಟಾಸ್‌ ಅಷ್ಟೇ ಆಗಿ ಪಂದ್ಯ ನಡೆಯದಿದ್ದರೆ, 2ನೇ ದಿನ ಹೊಸದಾಗಿ ಟಾಸ್‌ ಹಾಕಲಾಗುತ್ತದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ