ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಯಾದಗಿರಿ: ಅಂದು ಅನಾಥ ಭಿಕ್ಷುಕಿ ಇಂದು SSLC ಫಲಿತಾಂಶದಲ್ಲಿ ಸಾಧಕಿ...!

Twitter
Facebook
LinkedIn
WhatsApp
9

ಯಾದಗಿರಿ(ಮೇ.25): ಆ ವಿದ್ಯಾರ್ಥಿನಿ ಹೆತ್ತವರಿಲ್ಲದ ನೋವಿನಲ್ಲಿಯು ಅನಾಥಳಾದರು ಓದಿನಲ್ಲಿ ಸಾಧನೆ ಮಾಡಿ ಈಗ ಕೀರ್ತಿ ತರುವ ಕಾರ್ಯ ಮಾಡಿದ್ದಾಳೆ. ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಚಂಡರಕಿ ಗ್ರಾಮದ ನರಸಮ್ಮ ಹಾಗೂ ನರಸಿಂಹ ದಂಪತಿಗಳ ಪುತ್ರಿ ಎನ್.ಸೋನು ಬೆಂಗಳೂರಿನಲ್ಲಿ ಎಸ್ಎಸ್ಎಲ್‌ಸಿ ಓದಿ ಉತ್ತಮ ಸಾಧನೆ ಮಾಡಿದ್ದಾಳೆ.

ಹೆತ್ತವರಿಲ್ಲದ ನೋವಿನಲ್ಲಿಯೂ ಸೋನು ಸಾಧನೆ

ಸೋನು ತಾಯಿ ನರಸಮ್ಮ ನಿಧನರಾದ ನಂತರ ಸೋನು ತಮ್ಮ ತಂದೆ ನರಸಿಂಹ ಅವರ ಜೊತೆ ಬೆಂಗಳೂರಿಗೆ ವಲಸೆ ಹೋಗುತ್ತಾಳೆ. ತಂದೆ ಕೂಲಿ ಕೆಲಸ ಮಾಡಲು ಹೋದರೆ ಸೋನು ಬೆಂಗಳೂರಿನ ಸಹಕಾರ ನಗರದಲ್ಲಿರುವ ಗುಂಡಾಂಜನೇಯ ದೇವಸ್ಥಾನದಲ್ಲಿ ಭೀಕ್ಷೆ ಬೇಡುತ್ತಿದ್ದಳು. ಇದನ್ನು ಅರಿತ ಸ್ಪರ್ಶಾ ಟ್ರಸ್ಟ್ ಸಿಬ್ಬಂದಿ ರೂಪಾ ಮಹಾಜನ್ ಅವರು ಬಾಲಕಿಯನ್ನು ರಕ್ಷಣೆ ಮಾಡಿ ಕರೆದುಕೊಂಡು ಬರುತ್ತಾರೆ. 2013 ರಲ್ಲಿ ಬಾಲಕಿಯನ್ನು ರಕ್ಷಣೆ ಮಾಡಿ ಸ್ಪರ್ಶಾ ಟ್ರಸ್ಟ್ ಗೆ ಕರೆದುಕೊಂಡು ಬರುತ್ತಾರೆ. ಈ ವೇಳೆ ಸೋನು ತಂದೆ ನರಸಿಂಹ ನಂತರ ಅನಾರೋಗ್ಯ ತಪ್ಪಿದ ನಂತರ ತಾನು ಕೂಡ ಗುಂಡಾಂಜನೇಯ ದೇವಸ್ಥಾನದಲ್ಲಿ ಭೀಕ್ಷೆ ಬೇಡುತ್ತಾನೆ. ಆದರೆ, ಸೋನು ತನ್ನ ತಂದೆ ಭಿಕ್ಷಾಟನೆ ಇಲ್ಲವೇ ಕೂಲಿ ಕೆಲಸಕ್ಕೆ ದುಡುತ್ತಾರೆಂಬ ಭಯದಲ್ಲಿ ಇದ್ದಳು.ಆದರೆ, ಶಿಕ್ಷಣದಲ್ಲಿ ಉನ್ನತ ಗುರಿ ಮುಟ್ಟುವ ಕನಸು ಕಟ್ಟಿಕೊಂಡಿದ್ದಳು. ಸ್ಪರ್ಶಾ ಟ್ರಸ್ಟ್ ಅನಾಥಳಾಗಿದ್ದ ನೋವು ದೂರ ಮಾಡಿದ್ದು ಸೋನು ಸಾಧನೆಗೆ ಸಾಕ್ಷಿಯಾಗಿದೆ.

ಸೋನುಗೆ ನೆರವಾದ ಸ್ಪರ್ಶಾ ಟ್ರಸ್ಟ್

ಸ್ಪರ್ಶಾ ಟ್ರಸ್ಟ್ ಸೋನುಳನ್ನು ಕರೆದುಕೊಂಡು ಹೋಗಿ ಬೆಂಗಳೂರಿನ ಸಂಜೀವಿನಿ ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 3 ನೇ ತರಗತಿಗೆ ಸೇರಿಸಿದ್ದು, 7 ನೇ ತರಗತಿಯವರೆಗೆ ಅಧ್ಯಯನ ಮಾಡಿಸಿದ್ದಾರೆ‌. ನಂತರ ಸೋನು ಓದಿನಲ್ಲಿ ಆಸಕ್ತಿ ವಹಿಸಿರುವದನ್ನು ಅರಿತ ನಂತರ ಸೋನುಳನ್ನು ಹೆಸರಘಟ್ಟದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರವೇಶ ಕೊಡಿಸಿದ್ದು, ಈ ಶಾಲೆಯಲ್ಲಿಯೇ 8 ರಿಂದ 10 ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಾಳೆ‌.

ಎಸ್ಎಸ್ಎಲ್‌ಸಿಯಲ್ಲಿ 625 ಕ್ಕೆ 602 ಅಂಕ ಪಡೆದ ಸೋನು..!

ಸೋನು ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಒಟ್ಟು 625 ಕ್ಕೆ 602 ಅಂಕ ಪಡೆದು ಉತ್ತಮ ಸಾಧನೆ ಮಾಡಿದ್ದಾರೆ. ಸ್ಪರ್ಶಾ ಟ್ರಸ್ಟ್‌ ನ ಸಿಬ್ಬಂದಿಗಳಾದ ರೂಪಾ ಮಹಾಜನ್, ಹುಲಿಶ್ ಅವರು ವಿದ್ಯಾರ್ಥಿನಿ ಇಂಗ್ಲಿಷ್ ತರಬೇತಿ ಸೇರಿದಂತೆ ಮೊದಲಾದ ವಿಷಯ ಕುರಿತು ತರಬೇತಿ ನೀಡಿದ್ದಾರೆ. ನಾನು ಬೆಂಗಳೂರಿನ ಗುಂಡಾಂಜನೇಯ ದೇವಸ್ಥಾನದಲ್ಲಿ ಭೀಕ್ಷೆ ಬೇಡುತ್ತಿದ್ದೆ ಅಂದು ಜೀವನ ನಡೆಸುವದು ಕಷ್ಟವಾಗಿತ್ತು. ಈ ವೇಳೆ ಸ್ಪರ್ಶಾ ಟ್ರಸ್ಟ್ ಸಿಬ್ಬಂದಿ ವರ್ಗದವರು ನನ್ನನ್ನು ನೋಡಿ ಸ್ಪರ್ಶಾ ಟ್ರಸ್ಟ್ ಕಚೇರಿಗೆ ಕರೆದುಕೊಂಡು ಹೋಗಿ ನಂತರ ಉತ್ತಮ ಶಿಕ್ಷಣ ಕೊಡಿಸಿದ್ದಾರೆ. ತಂದೆ-ತಾಯಿ ಯಾರು ಇಲ್ಲ. ನಾನು ಸಾಫ್ಟ್‌ವೇರ್ ಇಂಜಿನಿಯರ್ ಆಗಬೇಕೆಂಬ ಗುರಿಯನ್ನು ಹೊಂದಿದ್ದಾಳೆ.

ಸೋನು ಸಾಧನೆ ವಿದ್ಯಾರ್ಥಿಗಳಿಗೆ ಪ್ರೇರಣೆ

ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಚಂಡರಕಿ ಗ್ರಾಮದ ವಿದ್ಯಾರ್ಥಿನಿ ಸೋನು ಮಾಡಿದ ಸಾಧನೆ ಜಿಲ್ಲೆಗೆ ಕೀರ್ತಿ ತರುವ ಕೆಲಸವಾಗಿದ್ದು, ಗ್ರಾಮಸ್ಥರು ಬಾಲಕಿಯ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸ್ಪರ್ಶಾ ಟ್ರಸ್ಟ್ ನ ಸಂಸ್ಥಾಪಕ ಗೋಪಿನಾಥ ಅವರು ಮಾತನಾಡಿ, ಬಾಲಕಿ ಸೋನು ಅವರನ್ನು ಟ್ರಸ್ಟ್ ಸಿಬ್ಬಂದಿ ಗುಂಡಾಂಜನೇಯ ದೇವಸ್ಥಾನದಲ್ಲಿ ರಕ್ಷಣೆ ಮಾಡಿ ನಂತರ ಆಕೆಗೆ ಸೂಕ್ತ ತರಬೇತಿ ನೀಡಿ ಉತ್ತಮ ಕೊಡಿಸಲಾಗಿದೆ. ವಿದ್ಯಾರ್ಥಿನಿ ಸಾಧನೆ ಖುಷಿ ತಂದಿದೆ. ಆಕೆ ಓದುವರೆಗೂ ವ್ಯಾಸಂಗ ಮಾಡಿಸಲಾಗುತ್ತನೆ ಎಂದರು. ಹೆತ್ತವರಿಲ್ಲದ ನೋವಿನಲ್ಲಿಯೂ ಸೋನು ಸಾಧನೆ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗಿದ್ದಾಳೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ