ಮಂಗಳೂರು: ನಗರದ ಮಣ್ಣಗುಡ್ಡ ಜಂಕ್ಷನ್ ಸಮೀಪ ಒಳರಸ್ತೆ ಕಾಂಕ್ರೀಟೀಕರಣ ನಡೆಯುತ್ತಿದ್ದಾಗ ಮಹಿಳೆಯೊಬ್ಬರು ಕಾಮಗಾರಿ ವಿರೋಧಿಸಿ ಕಾಂಕ್ರೀಟ್ ರಸ್ತೆಯಲ್ಲಿ ಹೊರಳಾಡಿ ಪ್ರತಿಭಟಿಸಿದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.
ಮಣ್ಣಗುಡ್ಡ ಗುರ್ಜಿ ಜಂಕ್ಷನ್ನಿಂದ ಉರ್ವ ಮಾರ್ಕೆಟ್ ರಸ್ತೆಯನ್ನು ಇತ್ತೀಚೆಗೆ ಕಾಂಕ್ರೀಟೀಕರಣಗೊಳಿಸಲಾಗಿದೆ. ಈ ಕಾಮಗಾರಿಯ ಬಳಿಕ ಒಳರಸ್ತೆಯಲ್ಲಿರುವ 4 ಮನೆಗಳಿಗೆ ಹೋಗಲು ಅನಾನುಕೂಲವಾಗುತ್ತಿದ್ದು, ಇದಕ್ಕಾಗಿ ಲೋಕೋಪಯೋಗಿ ಇಲಾಖೆಯಿಂದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಯೋಜನೆ ರೂಪಿಸಲಾಗಿತ್ತು. ಅದರಂತೆ ಮಂಗಳವಾರ ಬೆಳಗ್ಗೆ ಕಾಮಗಾರಿಗೆ ಕಾಂಕ್ರೀಟ್ ಲಾರಿ ಆಗಮಿಸಿದಾಗ ಮಹಿಳೆ ಏಕಾಏಕಿ ಕಾಂಕ್ರೀಟ್ ರಾಶಿಯಲ್ಲಿ ಹೊರಳಾಡಿ ಪ್ರತಿಭಟಿಸಿದ್ದಾರೆ.ಕಾಂಕ್ರೀಟ್ ರಸ್ತೆಯ ಕಾಮಗಾರಿ ಹಿನ್ನಲೆಯಲ್ಲಿ ಮಂಗಳವಾರ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಆದರೂ ಮಹಿಳೆ ಕಾಂಕ್ರೀಟ್ ರಾಶಿಯಲ್ಲಿ ಹೊರಳಾಡಿ ಪ್ರತಿಭಟಿಸಿದ್ದು, ಸುಮಾರು 1 ಗಂಟೆಗೂ ಅಧಿಕ ಕಾಲ ಗೊಂದಲ ವಾತಾವರಣ ಉಂಟಾಗಿತ್ತು. ಬಳಿಕ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದು, ಬಳಿಕ ಬಿಡುಗಡೆಗೊಳಿಸಿದ್ದಾರೆ. ಪೊಲೀಸ್ ಭದ್ರತೆಯಲ್ಲಿ ಕಾಮಗಾರಿಯನ್ನು ನಡೆಸಲಾಯಿತು.
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?