ಲಡಾಖ್: ಜಮ್ಮು ಮತ್ತು ಕಾಶ್ಮೀರದ ಲಡಾಖ್ ಜಿಲ್ಲೆಯಲ್ಲಿ ಸೇನಾ ವಾಹನವೊಂದು ನದಿಗೆ ಉರುಳಿ ಏಳು ಯೋಧರು ಮೃತಪಟ್ಟಿದ್ದಾರೆ. 19 ಯೋಧರು ಗಾಯಗೊಂಡಿದ್ದಾರೆ. ಇವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ.
ಲಡಾಖ್ ನ ತುರ್ಕು ಸೆಕ್ಟರ್ ನಲ್ಲಿ ಈ ದುರ್ಘಟನೆ ನಡೆದಿದ್ದು, ಗಂಭೀರವಾಗಿ ಗಾಯಗೊಂಡ ಸೈನಿಕರನ್ನು ಆಸ್ಪತ್ರೆಗಳಿಗೆ ವರ್ಗಾಯಿಸಲು ವಾಯುಪಡೆಯ ಸಹಾಯವನ್ನು ಕೋರಿದ್ದಾರೆ. ವಾಹನದಲ್ಲಿ 26 ಮಂದಿ ಇದ್ದು ಸೈನಿಕರ ಗುಂಪೊಂದು ಪರ್ತಾಪುರದಿಂದ ಹನೀಫ್ ಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಥಾಯ್ಸ್ ನಿಂದ 25 ಕಿ.ಮೀ ದೂರದಲ್ಲಿ ಈ ಅಪಘಾತ ಸಂಭವಿಸಿದೆ.ರಸ್ತೆಯಿಂದ 50-60 ಅಡಿ ಆಳದಲ್ಲಿರುವ ಶಿಯೋಕ್ ನದಿಗೆ ವಾಹನ ಉರುಳಿದೆ.ವಾಹನದಲ್ಲಿದ್ದ ಎಲ್ಲರನ್ನೂ ಪಾರ್ಥಪುರದ ಫೀಲ್ಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
ತಜ್ಞ ವೈದ್ಯರು ಸೇರಿದಂತೆ ನುರಿತ ತಂಡವನ್ನು ಪರ್ತಾಪುರಕ್ಕೆ ಕಳುಹಿಸಲಾಗಿದೆ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ ಎಂದು ಸೇನೆ ತಿಳಿಸಿದೆ.
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?