ಕೋಲ್ಕತ್ತಾ : ಬಾಲಿವುಡ್ ನ ಖ್ಯಾತ ಸಂಗೀತಗಾರ ಕೆಕೆ ಅವರು ಸಂಗೀತ ಕಾರ್ಯಕ್ರಮವೊಂದರಲ್ಲಿ ಹಾಡುತ್ತಿರುವಾಗಲೇ ತೀವ್ರ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ.ಅವರಿಗೆ 53 ವರ್ಷ ವಯಸ್ಸಾಗಿತ್ತು. ಕೋಲ್ಕತ್ತಾದ ನಜ್ರುಲ್ ಮಂಜ್ನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಹಾಡುತ್ತಿದ್ದ ವೇಳೆ ಹೃದಯಾಘಾತಗೊಂಡು ಕುಸಿದು ಬಿದ್ದಿದ್ದಾರೆ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.ಕೆಕೆ ಎಂದೇ ಪ್ರಖ್ಯಾತಿ ಪಡೆದಿರುವ ಬಾಲಿವುಡ್ನ ಗಾಯಕ ಕೃಷ್ಣಕುಮಾರ್ ಕುನ್ನತ್ ತನ್ನ ಅದ್ಬುತ ಕಂಠದಿಂದಲೇ ಜನರನ್ನು ಮಂತ್ರಮುಗ್ದರನ್ನಾಗಿಸುತ್ತಿದ್ದರು.
1999 ರ ಮೊದಲ ಆಲ್ಬಂ ‘ಪಾಲ್’ ಭಾರಿ ಮೆಚ್ಚುಗೆಯನ್ನು ಗಳಿಸಿತ್ತು. ಬಳಿಕ 2000 ರ ದಶಕದ ಆರಂಭದಲ್ಲಿ ಹಿನ್ನೆಲೆ ಗಾಯನದಲ್ಲಿ ವೃತ್ತಿಜೀವನವನ್ನು ಆರಂಭಿಸಿದ ಕೆಕೆ ಹಲವಾರು ಜನಪ್ರಿಯ ಹಾಡುಗಳಿಂದ ಚಿತ್ರ ಪ್ರೀಯರ ಮನಗೆದ್ದಿದ್ದರು. ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ, ಮರಾಠಿ ಮತ್ತು ಬೆಂಗಾಲಿ ಭಾಷೆಗಳಲ್ಲಿ ಹಾಡುಗಳನ್ನು ಹಾಡಿದ್ದು.
ಕನ್ನಡದಲ್ಲಿ ಸಂಚಾರಿ, ಮಳೆ ಬರಲಿ ಮಂಜು ಇರಲಿ, ಲವ್, ಮನಸಾರೆ, ಪರಿಚಯ, ಬಹುಪರಾಕ್, ಯೋಗಿ, ಮದನ, ರೌಡಿ ಅಳಿಯ ಮುಂತಾದ ಚಿತ್ರಗಳಲ್ಲಿ ಹಾಡಿದ್ದಾರೆ.
ಕೆಕೆ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಬಾಲಿವುಡ್ ಚಿತ್ರರಂಗ, ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist