ಫಿಲ್ಲೌರ್(ಪಂಜಾಬ್): ಲೂಧಿಯಾನ-ಜಲಂಧರ್ ಮುಖ್ಯ ರಸ್ತೆಯ ಲಾಡೋವಾಲ್ ಟೋಲ್ ಪ್ಲಾಜಾ ಬಳಿ ಬುಧವಾರ ಮುಂಜಾನೆ ಶಸ್ತ್ರಸಜ್ಜಿತ ದರೋಡೆಕೋರರು ಪಿಆರ್ಟಿಸಿ ಬಸ್ನಲ್ಲಿ ದರೋಡೆ ಮಾಡಿದ್ದಾರೆ.
ವರದಿಯ ಪ್ರಕಾರ, ಚಾಲಕ ಲೂಧಿಯಾನದಿಂದ ಜಲಂಧರ್ಗೆ ತೆರಳುತ್ತಿದ್ದ ಬಸ್ ಅನ್ನು ಟೋಲ್ ಪ್ಲಾಜಾ ಬಳಿ ನಿಲುಗಡೆ ಮಾಡಿದ್ದರು.
ಈ ವೇಳೆ ದ್ವಿಚಕ್ರವಾಹನಗಳಲ್ಲಿ ಬಂದ ಮೂವರು ದರೋಡೆಕೋರರು ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಕಂಡಕ್ಟರ್ ಹಣ ಕೊಡಲು ನಿರಾಕರಿಸಿದಾಗ ದರೋಡೆಕೋರರಲ್ಲಿ ಒಬ್ಬ ಪಿಸ್ತೂಲ್ ತೆಗೆದುಕೊಂಡು ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಬಸ್ ಕಂಡಕ್ಟರ್ ಹೇಳಿದ್ದಾರೆ. ದರೋಡೆಕೋರರು ಬಸ್ ಕಂಡಕ್ಟರ್ ಹಾಗೂ ಪ್ರಯಾಣಿಕರನ್ನು ದರೋಡೆ ಮಾಡಿ ಪರಾರಿಯಾಗಿದ್ದಾರೆ.
ಘಟನೆಯಿಂದ ರೊಚ್ಚಿಗೆದ್ದ ಜನರು ಮುಖ್ಯರಸ್ತೆಯಲ್ಲಿ ಸಂಚಾರ ತಡೆ ನಡೆಸಿದರು. ಮಾಹಿತಿ ಪಡೆದ ತಕ್ಷಣ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?