ಬ್ಯಾಡಗಿ(ಜೂ.03): ಮೆಣಸಿನಕಾಯಿ ಪಡೆದ ಪೇಟೆ ಕಾರ್ಯಕರ್ತರಿಗೆ (ದಲಾಲರಿಗೆ) ಹಣ ಮರುಪಾವತಿ ಮಾಡದೇ ಕಳೆದ 19 ತಿಂಗಳಿಂದ ಸತಾಯಿಸುತ್ತಿರುವ ಶಿಗ್ಗಾಂವಿ ತಾಲೂಕಿನ ಬಂಕಾಪುರ ಗ್ರಾಮದ ಮೈನುದ್ದೀನ್ ತರೀನ್ (ಎಸ್ವೈಟಿ ಸನ್ಸ್ ಅಂಗಡಿ ಮಾಲೀಕ)ನ ವಿರುದ್ಧ ಕಾನೂನು ಕ್ರಮ ಜರುಗಿಸಿ ಹಣ ಮರಳಿಸುವಂತೆ ವರ್ತಕರ ಸಂಘದ ಅಧ್ಯಕ್ಷ ಹಾಗೂ ಮಾಜಿ ಶಾಸಕ ಸುರೇಶಗೌಡ ಪಾಟೀಲ ನೇತೃತ್ವದಲ್ಲಿ ಸ್ಥಳೀಯ ವರ್ತಕರು ಪಿಎಸ್ಐ ಮಂಜುನಾಥ ಕುಪ್ಪೇಲೂರಗೆ ಮನವಿ ಸಲ್ಲಿಸಿದರು.
ಬಳಿಕ ಮಾತನಾಡಿದ ಸುರೇಶಗೌಡ ಪಾಟೀಲ, ಬಹಳಷ್ಟುದಿನಗಳಿಂದ ಸ್ಥಳೀಯ ದಲಾಲರು ಮೈನುದ್ದೀನ ಅವರಿಗೆ ಮೆಣಸಿನಕಾಯಿ ನೀಡುತ್ತಾ ಬಂದಿದ್ದಾರೆ. ಆದರೆ, ಸಂಘದ ನಿಯಮಾನುಸಾರ (21 ದಿನಗಳಲ್ಲಿ) ಮರು ಪಾವತಿ ಮಾಡದೇ ಸತಾಯಿಸುತ್ತಾ ಬಂದಿದ್ದು, ಇದರಿಂದ ಸಂಘದ ಸದಸ್ಯರು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ತಪ್ಪಿತಸ್ಥ ಮೈನುದ್ದೀನ್ ತರೀನ್ ಬಂಧಿಸಿ ಮರುಪಾವತಿಗೆ ಅಗತ್ಯ ಕ್ರಮ ಜರುಗಿಸುವಂತೆ ಆಗ್ರಹಿಸಿದರು.
ಮೆಣಸಿನಕಾಯಿ ನೀಡಿದ ದಲಾಲರು ಬಾಕಿ ಹಣ ಕೇಳಲು ಹೋದವರಿಗೆ ಮೈನುದ್ದೀನ್ ಕುಟುಂಬದವರು ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಮಾನಿಸಿದ್ದಲ್ಲದೇ ಜೀವ ಬೆದರಿಕೆ ಹಾಕುತ್ತಿದ್ದಾರೆ. ಕೂಡಲೇ ಮೈನುದ್ದೀನ್ ತರೀನ್ ಕುಟುಂಬದ ಎಲ್ಲ ಸದಸ್ಯರನ್ನೂ ಬಂಧಿಸಿ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿದರು.
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?