ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾರಕಕ್ಕೆರಿದ ಹಿಜಾಬ್ ವಿವಾದದ ಬಗ್ಗೆ ಗುರುವಾರ ವರದಿಗೆ ತೆರಳಿದ ಪತ್ರಕರ್ತರ ಮೇಲೆ ಅಲ್ಲಿನ ದ್ವಿತೀಯ ಪದವಿ ವಿದ್ಯಾರ್ಥಿನಿ ನೀಡಿದ ಪ್ರತಿ ದೂರಿನಂತೆ, ಉಪ್ಪಿನಂಗಡಿ ಠಾಣೆಯಲ್ಲಿ ಮೂವರು ಪತ್ರಕರ್ತರ ವಿರುದ್ದ ಜಾಮೀನು ರಹಿತ ಪ್ರಕರಣ ದಾಖಲಾಗಿದೆ.
ಗುರುವಾರ ಬೆಳಿಗ್ಗೆ ಹಿಜಾಬ್ ವಿಚಾರವಾಗಿ ಕಾಲೇಜ್ ಕ್ಯಾಂಪಸಿನಲ್ಲಿ ಪ್ರತಿಭಟನೆ, ಹೋರಾಟ ನಡೆಯುತ್ತಿದ್ದ ಹಿನ್ನಲೆಯಲ್ಲಿ ಕಾಲೇಜಿನ ಪ್ರಾಂಶುಪಾಲರಿಂದ ಮಾಹಿತಿ ಪಡೆಯುವ ಉದ್ದೇಶದಿಂದ ತೆರಳಿದ ಇಬ್ಬರು ಕನ್ನಡದ ದೃಶ್ಯ ಮಾಧ್ಯಮದ ವರದಿಗಾರರನ್ನು ತಡೆದು, ಅವರಿಗೆ ದಿಗ್ಬಂಧನ ವಿಧಿಸಿ, ಅವರ ಕ್ಯಾಮರ ಕಿತ್ತು ಅದರಲ್ಲಿದ್ದ ವಿಡೀಯೊ ಹಾಗೂ ಫೋಟೋಗಳನ್ನು ಡಿಲಿಟ್ ಮಾಡಿರುವ ಬಗ್ಗೆ ಹಾಗೂ 25 ವಿದ್ಯಾರ್ಥಿಗಳ ಗುಂಪೊಂದು ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಗುರುವಾರ ಪ್ರಕರಣ ದಾಖಲಾಗಿತ್ತು.
ಇದಾದ ಬಳಿಕ, ಘಟನೆ ಘಟಿಸಿದ ಬರೋಬ್ಬರಿ 30 ಘಂಟೆಗಳ ನಂತರ ಇದೇ ಘಟನೆಗೆ ಸಂಬಂಧಿಸಿದಂತೆ ದ್ವಿತೀಯ ಪದವಿ ವಿದ್ಯಾರ್ಥಿನಿ ನೀಡಿದ ಪ್ರತಿ ದೂರನ್ನು ಪೊಲೀಸರು ಸ್ವೀಕರಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದರಡಿ ಘಟನೆಯ ವರದಿಗೆ ತೆರಳಿದ ಇಬ್ಬರು ದೃಶ್ಯ ಮಾಧ್ಯಮದ ವರದಿಗಾರರು ಹಾಗೂ ಅವರ ನೆರವಿಗೆ ಧಾವಿಸಿದ ಇನ್ನೊರ್ವ ಪತ್ರಿಕಾ ವರದಿಗಾರನ ವಿರುದ್ದ ಪ್ರಕರಣ ದಾಖಲಾಗಿದೆ.
ಐಪಿಸಿ ಕಲಂ 447,354,504,506 ಜೊತೆಗೆ 34 ರಂತೆ ಪ್ರಕರಣ ದಾಖಲಾಗಿದೆ.
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?