ಸೋಮವಾರ, ಮೇ 20, 2024
ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!-Gold Rate: ಇಂದಿನ ಚಿನ್ನಾಭರಣದ ಬೆಲೆ ಹೇಗಿದೆ; ಖರೀದಿಗೆ ಸೂಕ್ತವೇ.?-ಆರ್ಸಿಬಿ ಗೆ ಕಪ್ ಗೆಲ್ಲಲು ಮುಂದಿನ ಪಂದ್ಯ ಯಾವಾಗ; ಎದುರಾಳಿ ತಂಡ ಯಾವುದು.?-ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ; ಇರಾನ್ ಮಾದ್ಯಮ ವರದಿ-ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ-ಅಭಿಷೇಕ್ ಶರ್ಮರಿಂದ ಕೊಹ್ಲಿ ದಾಖಲೆ ಉಡಿಸ್; ಹೈದರಾಬಾದಿಗೆ ಭರ್ಜರಿ ಗೆಲುವು..!-ಗಗನೇಕ್ಕೇರುತ್ತಿದೆ ಚಿಕನ್ ದರ; ಮೊಟ್ಟೆ ಬೆಲೆಯೂ ಏರಿಕೆ.!-ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆದರಿಕೆ ಕರೆ ಹಿನ್ನೆಲೆ ರಾಜ್ಯದ ಆರ್‌ಎಸ್‌ಎಸ್ ಕಚೇರಿಗಳಿಗೂ ಹೆಚ್ಚಿನ ಭದ್ರತೆ

Twitter
Facebook
LinkedIn
WhatsApp
ಬೆದರಿಕೆ ಕರೆ ಹಿನ್ನೆಲೆ ರಾಜ್ಯದ ಆರ್‌ಎಸ್‌ಎಸ್ ಕಚೇರಿಗಳಿಗೂ ಹೆಚ್ಚಿನ ಭದ್ರತೆ
 

ಬೆಂಗಳೂರು: ರಾಜ್ಯದ ಆರ್‌ಎಸ್‌ಎಸ್ ಕಚೇರಿಗಳ ಮೇಲೆ ದಾಳಿ ಬೆದರಿಕೆ ಸಂದೇಶ ಬಂದಿರುವ ಹಿನ್ನೆಲೆಯಲ್ಲಿ ಎಲ್ಲಾ ಆರ್‌ಎಸ್‌ಎಸ್ ಕಚೇರಿಗಳಿಗೆ ಸೂಕ್ತ ಪೊಲೀಸ್ ರಕ್ಷಣೆ ಒದಗಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಮಂಗಳವಾರ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಗೃಹ ಸಚಿವ, ಆಯಾಯ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಇರುವ ಆರ್‌ಎಸ್‌ಎಸ್ ಕಚೇರಿಗಳಿಗೆ ಸೂಕ್ತ ಭದ್ರತೆ ನೀಡುವಂತೆ ರಾಜ್ಯ ಪೊಲೀಸ್ ವಿಭಾಗಕ್ಕೆ ತುರ್ತು ನಿರ್ದೇಶನ ನೀಡಲಾಗಿದೆ ಎಂದಿದ್ದಾರೆ.

ಉತ್ತರ ಪ್ರದೇಶದ 2 ಹಾಗೂ ಕರ್ನಾಟಕದ 4 ಆರ್‌ಎಸ್‌ಎಸ್ ಕಚೇರಿಗಳನ್ನು ಧ್ವಂಸಗೊಳಿಸುವುದಾಗಿ ವಾಟ್ಸಪ್ ಸಂದೇಶವನ್ನು ತಮಿಳು ನಾಡಿನಿಂದ ವ್ಯಕ್ತಿಯೊಬ್ಬ ಉತ್ತರ ಪ್ರದೇಶದ ವ್ಯಕ್ತಿಗೆ ಕಳುಹಿಸಿದ್ದಾನೆ. ಇದಕ್ಕೆ ಸಂಬಂಧಿಸಿದಂತೆ ಮೊಕದ್ದಮೆ ದಾಖಲು ಮಾಡಲಾಗಿದೆ ಎಂದು ಹೇಳಿದ್ದಾರೆ.

 

ವಾಟ್ಸಪ್ ಸಂದೇಶ ಕಳುಹಿಸಿದ ವ್ಯಕ್ತಿಯನ್ನು ಈಗಾಗಲೇ ಗುರುತಿಸಲಾಗಿದೆ. ಆರೋಪಿ ಸೆಂಥಿಲ್‌ನನ್ನು ತಮಿಳು ನಾಡಿನಲ್ಲಿ ಬಂಧಿಸಲಾಗಿದೆ. ಈ ರೀತಿಯಾಗಿ ಬೆದರಿಕೆ ಕರೆ ಅಥವಾ ಸಂದೇಶಗಳನ್ನು ಕಳುಹಿಸುವ ದುಷ್ಕರ್ಮಿಗಳ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ ಆರಗ ಜ್ಞಾನೇಂದ್ರ ಮಾಧ್ಯಮ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ಭಯೋತ್ಪದನೆ ಚಟುವಟಿಕೆಗಳಲ್ಲಿ ತೊಡಗಿದ್ದ ಎನ್ನಲಾದ ಜಮ್ಮು ಕಾಶ್ಮೀರದ ನಿವಾಸಿಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ರಾಜ್ಯದ ಪೊಲೀಸರೂ ಈ ಕುರಿತು ತನಿಖೆ ಆರಂಭಿಸಿದ್ದಾರೆ ಎಂದಿದ್ದಾರೆ. ನಗರದಲ್ಲಿ ನೆಲೆಸಿದ್ದ ಶಂಕಿತ ಉಗ್ರರಿಗೆ ಆಶ್ರಯ ನೀಡಿದ್ದ ವ್ಯಕ್ತಿಗಳು ಹಾಗೂ ಸಂಸ್ಥೆಗಳ ಬಗ್ಗೆ ತನಿಖೆ ನಡೆಯುತ್ತಿದ್ದು, ಕರ್ನಾಟಕ ರಾಜ್ಯ ಪೊಲೀಸರು ಜಮ್ಮು ಕಾಶ್ಮೀರ ರಾಜ್ಯದ ಪೋಲೀಸರ ಜತೆ ಸಮನ್ವಯ ಸಾಧಿಸಿ ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ಬಂಧಿಸಲಾದ ಶಂಕಿತ ಉಗ್ರನಿಗೆ ನೆಲೆಸಲು ಅವಕಾಶ ಮಾಡಿಕೊಟ್ಟಿದ್ದಲ್ಲದೆ ಮೊಬೈಲ್ ಫೋನ್ ಪಡೆಯಲು ಹಾಗೂ ಇತರ ದಾಖಲೆಗಳನ್ನು ಪಡೆಯಲು ಸ್ಥಳೀಯರೂ ಸಹಾಯ ಮಾಡಿದ್ದಾರೆ ಎಂಬುದರ ಬಗ್ಗೆಯೂ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಮೊಕದ್ದಮೆ ದಾಖಲಿಸಿ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಜಮ್ಮು ಕಾಶ್ಮೀರದ ಉಗ್ರನನ್ನು ಪತ್ತೆ ಹಚ್ಚಲು ರಾಜ್ಯದ ಪೊಲೀಸರು ಸಕರಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ರಾಜ್ಯದ ಪೊಲೀಸರು ಜಮ್ಮು ಕಾಶ್ಮೀರದ ಪೊಲೀಸರೊಂದಿಗೆ ಸಂಪರ್ಕ ಹೊಂದಿದ್ದರು. ಈ ಬಗ್ಗೆ ತನಿಖೆ ಮುಂದುವರಿದಿದೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ