ನವದೆಹಲಿ: ಇಸ್ಲಾಮಿ ಆಂದೋಲನ್ ಬಾಂಗ್ಲಾದೇಶ (ಐಎಬಿ), ಜಮಿಯತ್ ಉಲಾಮಾ-ಎ-ಇಸ್ಲಾಂ ಬಾಂಗ್ಲಾದೇಶ ಮತ್ತು ಇಸ್ಲಾಮಿ ಓಕ್ಯಾಜೋಟೆಯ ಹಲವಾರು ರಾಜಕೀಯ ಪಕ್ಷಗಳು ಮತ್ತು ಇಸ್ಲಾಮಿಸ್ಟ್ಗಳು ಶುಕ್ರವಾರ ಮಧ್ಯಾಹ್ನ ಪ್ರವಾದಿ ಮುಹಮ್ಮದ್ ಅವರ ಬಗ್ಗೆ ಬಿಜೆಪಿ ನಾಯಕರು ನೀಡಿರುವ ಹೇಳಿಕೆಗಳ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಸಿವೆ.
ಪ್ರತಿಭಟನೆಯಲ್ಲಿ ಭಾಗವಹಿಸಿದ ಈ ಸಂಘಟನೆಗಳು ಭಾರತೀಯ ಉತ್ಪನ್ನಗಳನ್ನು ಬಹಿಷ್ಕ್ರರಿಸುವಂತೆ ಎಲ್ಲರಿಗೂ ಕರೆ ನೀಡಿವೆ. ಇದೆ ವೇಳೆ ಪಾಕಿಸ್ತಾನ ಪರ ರಾಜಕೀಯ ಪಕ್ಷಗಳೂ ಪ್ರತಿಭಟನೆ ನಡೆಸಿದವು.
ಐಎಬಿ ಮುಖ್ಯಸ್ಥ ಮತ್ತು ಚಾರ್ಮೊನೈ ಪಿರ್, ಮತ್ತು ಸೈಯದ್ ರೆಜಾಲ್ ಕರೀಮ್ ಅವರು ಮುಂದಿನ ಸಾಮೂಹಿಕ ಪ್ರತಿಭಟನೆಯನ್ನು ಮುನ್ನಡೆಸಲಿದ್ದಾರೆ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.
ಬೈತುಲ್ ಮುಕರಮ್ನಲ್ಲಿರುವ ರಾಷ್ಟ್ರೀಯ ಮಸೀದಿಯ ದಕ್ಷಿಣ ಗೇಟ್ನಲ್ಲಿ ನಡೆದ ಪ್ರತಿಭಟನೆಯಲ್ಲಿ, ಐಎಬಿ ನಾಯಕರು ಢಾಕಾದಲ್ಲಿರುವ ಭಾರತೀಯ ಹೈಕಮಿಷನ್ ಕಡೆಗೆ ಸಾಮೂಹಿಕ ಮೆರವಣಿಗೆಯನ್ನು ನಡೆಸುವುದಾಗಿ ಹೇಳಿದ್ದಾರೆ.ಪ್ರವಾದಿಯವರ ಬಗ್ಗೆ ಹೇಳಿಕೆ ನೀಡಿದವರ ವಿರುದ್ಧ ಸಂಸತ್ತಿನಲ್ಲಿ ಪ್ರತಿಭಟನಾ ನಿರ್ಣಯ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?