ಸಪ್ತ ಸಾಗರದಾಚೆ ಸಖತ್ ಸೌಂಡ್ ಮಾಡಿದ್ದ ಕೆಜಿಎಫ್-2 ಚಿತ್ರದ ಬಳಿಕ ರಾಕಿಂಗ್ ಸ್ಟಾರ್ ಯಶ್ ಯಾವ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಪ್ರಶ್ನೆಗೆ ಸದ್ಯ ಸಿಗುತ್ತಿರುವ ಉತ್ತರ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾದಲ್ಲಿ. ಅದು ಕೂಡ ಮಾಸ್ ಚಿತ್ರ ನಿರ್ದೇಶಕ ನರ್ತನ್ ಡೈರೆಕ್ಷನ್ನಲ್ಲಿ ಎಂಬುದು ವಿಶೇಷ. ಸ್ಯಾಂಡಲ್ವುಡ್ನಲ್ಲಿ ಮಫ್ತಿ ಹೆಸರಿನ ಬ್ಲಾಕ್ ಬ್ಲಸ್ಟರ್ ಚಿತ್ರ ನೀಡಿದ್ದ ನರ್ತನ್ ಈಗಾಗಲೇ ಯಶ್ಗಾಗಿ ಕಥೆ ರೆಡಿ ಮಾಡಿದ್ದಾರೆ. ಹೊಸ ಸಿನಿಮಾದ ಚಿತ್ರಕಥೆಗೆ ರಾಕಿ ಭಾಯ್ ಕೂಡ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಹೀಗಾಗಿ ಶೀಘ್ರದಲ್ಲೇ ಈ ಚಿತ್ರದ ಮುಹೂರ್ತ ಕೂಡ ಜರುಗಲಿದೆ ಎಂಬ ಮಾತುಗಳು ಗಾಂಧಿನಗರದಿಂದ ಕೇಳಿ ಬರುತ್ತಿದೆ. ಇದರ ಜೊತೆಗೆ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿರುವುದು ಖ್ಯಾತ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ ಎಂಬ ಮಾತುಗಳಿವೆ. ಅಂದರೆ ಸೂಪರ್ ಡೂಪರ್ ಹಿಟ್ ಚಿತ್ರದ ನೀಡಿದ ಯಶ್, ಬ್ಲಾಕ್ ಬ್ಲಸ್ಟರ್ ಚಿತ್ರ ನಿರ್ದೇಶಿಸಿದ ನರ್ತನ್ ಹಾಗೂ ಕೆವಿಎನ್ ಚಿತ್ರ ನಿರ್ಮಾಣ ಸಂಸ್ಥೆ ಕೈ ಜೋಡಿಸಲಿದೆ ಎನ್ನಲಾಗುತ್ತಿದೆ.
ಇದರ ಬೆನ್ನಲ್ಲೇ ರಾಕಿಂಗ್ ಸ್ಟಾರ್ಗೆ ನಾಯಕಿಯಾಗಿ ಯಾರು ಕಾಣಿಸಿಕೊಳ್ಳಲಿದ್ದಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಕೆಜಿಎಫ್ ಚಿತ್ರದ ಬಳಿಕ ಯಶ್ ಕಾಣಿಸಿಕೊಳ್ಳುವ ಚಿತ್ರವಾಗಿರುವುದರಿಂದ ಈ ಸಿನಿಮಾ ಮೇಲೆ ನಿರೀಕ್ಷೆಗಳು ಹೆಚ್ಚಿವೆ. ಅದರಲ್ಲೂ ಈ ಸಿನಿಮಾ ಕೂಡ ಪ್ಯಾನ್ ಇಂಡಿಯಾ ಚಿತ್ರವಾಗಿರುವುದರಿಂದ ನಿರೀಕ್ಷೆಗಳು ಮುಗಿಲೆತ್ತರಕ್ಕೇರಲಿದೆ. ಹೀಗಾಗಿಯೇ ಹೊಸ ಚಿತ್ರದಲ್ಲಿ ಸೌತ್ ಸುಂದರಿ ಪೂಜಾ ಹೆಗ್ಡೆ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿಯೊಂದು ಟಾಲಿವುಡ್ನಿಂದ ಕೇಳಿ ಬಂದಿದೆ.
ಮೂಲತಃ ಕರ್ನಾಟಕದವರೇ ಆಗಿದ್ದರೂ, ಇದೂವರೆಗೂ ಒಂದೇ ಒಂದು ಕನ್ನಡ ಸಿನಿಮಾದಲ್ಲಿ ಕಾಣಿಸಿಕೊಂಡಿಲ್ಲ. ಹೀಗಾಗಿ ಯಶ್-ಪೂಜಾ ಜೋಡಿಯ ಮೋಡಿಯನ್ನು ವೀಕ್ಷಿಸಲು ಸ್ಯಾಂಡಲ್ವುಡ್ ಸಿನಿಪ್ರಿಯರು ಕಾದು ಕುಳಿತಿದ್ದಾರೆ.
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?