ಸುಬ್ರಹ್ಮಣ್ಯ: ಚಲಿಸುತ್ತಿದ್ದ ಬಸ್ ಮೇಲೆಯೇ ರಸ್ತೆ ಬದಿಯ ಮರವೊಂದು ಮುರಿದು ಬಿದ್ದ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಗುಂಡ್ಯ ರಸ್ತೆಯ ಅನಿಲ ಎಂಬಲ್ಲಿ ಜೂ.12 ರಂದು ನಡೆದಿದೆ. ಸುಬ್ರಹ್ಮಣ್ಯ ದಿಂದ ಬೆಂಗಳೂರಿಗೆ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಸರ್ಕಾರಿ ಬಸ್ ನ ಮೇಲೆ ಮರ ಬಿದ್ದಿದ್ದು ಅದೃಷ್ಟವಶಾತ್ ಪ್ರಯಾಣಿಕರು ಸಂಭಾವ್ಯ ಅಪಾಯದಿಂದ ಪಾರಾಗಿದ್ದಾರೆ.
ಈಗಾಗಲೇ ವಿಪರಿತ ಮಳೆಯೂ ಸುರಿಯುತ್ತಿದ್ದು ಈ ಮಳೆಗೆ ಅಪಾಯಕಾರಿಯಾಗಿರುವ ಮರಗಳು ಉರುಳಿದೆ ಎಂದು ಹೇಳಲಾಗುತ್ತಿದೆ.ಎಚ್ಚೆತ್ತುಕೊಳ್ಳದ ಅರಣ್ಯ ಇಲಾಖೆ:ಈ ರಸ್ತೆಯಲ್ಲಿ ಆಗಾಗ ರಸ್ತೆ ಬದಿಯ ಮರಗಳು ಬೀಳುತ್ತಿದ್ದರೂ ಅರಣ್ಯ ಇಲಾಖೆ ಮಾತ್ರ ಇನ್ನೂ ಎಚ್ಚೆತ್ತುಕೊಳ್ಳಲಿಲ್ಲ, ಈಗಾಗಲೇ ಅಪಾಯಕಾರಿ ಮರಗಳೆಂದು ಗುರುತಿಸಿದ್ದರೂ ಅಂತಹ ಮರಗಳನ್ನು ತೆರವುಗೊಳಿಸಲು ಕಾನೂನಿನ ಕುಂಟು ನೆಪ ಹೇಳುತ್ತಿರುವ ಅರಣ್ಯ ಇಲಾಖಾ ಅಧಿಕಾರಿಗಳು ಅಪಾಯ ಸಂಭವಿಸಿದಾಗ ಸ್ಥಳಕ್ಕೆ ಭೇಟಿ ನೀಡುವ ಕೆಲಸ ಮಾತ್ರ ಮಾಡುತ್ತಾರೆ.
ಇನ್ನಾದರೂ ರಸ್ತೆ ಬದಿಯ ಮರ ತೆರವುಗೊಳಿಸುವಲ್ಲಿ ಅರಣ್ಯ ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ನಡೆಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?