ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!
ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನೆಟ್ಟಿಬೈಲು ನಿವಾಸಿ ವಿನಾಯಕ ಭಟ್ (32) ಅವರು ತೀವ್ರ ಜ್ವರ ಬಾಧೆಯಿಂದ ಮೃತಪಟ್ಟಿದ್ದಾರೆ. ಅವರು ಸುಮಾರು ಹತ್ತು
ಬೆಂಗಳೂರು: ಕೊರೋನಾ ವೈರಸ್ ಸೋಂಕು ತಗುಲದಂತೆ ರಕ್ಷಣೆ ನೀಡುವ ‘ಕೋವಿರಕ್ಷಾ’ ಎಂಬ ಹೆಸರಿನ ಮುಲಾಮನ್ನು ಬೆಂಗಳೂರಿನ ನೂತನ್ ಲ್ಯಾಬ್ ಅಭಿವೃದ್ಧಿ ಮಾಡಿದ್ದು, ಇದರ ಬಳಕೆಗೆ ರಾಜ್ಯ ಆಯುಷ್ ಇಲಾಖೆ ಅನುಮೋದನೆ ನೀಡಿದೆ.
ಈ ಮುಲಾಮನ್ನು ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರದ ನೂತನ್ ಎಚ್ ಎಸ್ ಎಂಬ ಯುವಕ ಆವಿಷ್ಕಾರ ಮಾಡಿದ್ದಾರೆ. ಜೊತೆಗೆ ಈಗಾಗಲೇ ಐಐಎಸ್ಸಿಯ ಸಹಕಾರದ ಜೊತೆಗೆ ನ್ಯಾನೋ ಟೆಕ್ನಾಲಜಿ ಆಧಾರಿತ ನೂತನ್ ಲ್ಯಾಬ್ಸ್ ಎಂಬ ಸ್ಟಾರ್ಟ್ಅಪ್ ಪ್ರಾರಂಭ ಮಾಡಿದ್ದಾರೆ. ಅದರ ಮುಖೇನ ಹೊರಾಂಗಣ ವಾಯು ಶುದ್ಧೀಕರಣಕ್ಕೆ ಅನುಕೂಲವಾಗುವ ಸ್ಮಾಗ್ ಟವರ್, ಒಳಾಂಗಣ ವಾಯು ಶುದ್ಧೀಕರಣ, ವೈರಸ್ ಶುದ್ಧೀಕರಣ ಘಟಕವನ್ನು ಆರಂಭಿಸಿದ ಕೀರ್ತಿ ತಮ್ಮದಾಗಿಸಿಕೊಂಡಿದ್ದಾರೆ.
ಕೋವಿರಕ್ಷಾವನ್ನು ಐಐಎಸ್ಸಿ ಸಹಯೋಗದಲ್ಲಿ ಅಭಿವೃದ್ಧಿ ಮಾಡಲಾಗಿದ್ದು, ಇದನ್ನು ಮೂಗು, ಗಂಟಲು, ಮಾಸ್ಕ್ಗಳಿಗೆ ಹಚ್ಚಿಕೊಳ್ಳುವ ಮೂಲಕ ವೈರಸ್ ತಗುಲದಂತೆ ಎಚ್ಚರ ವಹಿಸಬಹುದಾಗಿದೆ. ಇದನ್ನು ಒಮ್ಮೆ ಹಚ್ಚಿಕೊಂಡರೆ ಸತತ ಮೂರು ಗಂಟೆಗಳ ಕಾಲ ಇದು ವೈರಸ್ನಿಂದ ರಕ್ಷಣೆ ಒದಗಿಸುತ್ತದೆ.
ಈ ಮುಲಾಮನ್ನು ಬೆಳ್ಳಿಯನ್ನು ಪ್ರಧಾನವಾಗಿರಿಸಿಕೊಂಡು ನೈಸರ್ಗಿಕ ಮತ್ತು ನ್ಯಾನೋ ತಂತ್ರಜ್ಞಾನ ಬಳಸಿ ತಯಾರಿಸಲಾಗಿದೆ. ಪ್ರತಿಯೊಬ್ಬರೂ ಈ ಉತ್ಪನ್ನಗಳನ್ನು ಬಳಕೆ ಮಾಡುವ ಮೂಲಕ ಸೋಂಕು ತಗುಲಿಸುವ ವೈರಾಣುಗಳಿಂದ ರಕ್ಷಣೆ ಪಡೆಯಬಹುದಾಗಿದೆ ಎಂದು ನೂತನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಮುಲಾಮನ್ನು ಕಳೆದ ಒಂದು ತಿಂಗಳಲ್ಲಿ 10 ಸಾವಿರಕ್ಕೂ ಅಧಿಕ ಜನರ ಮೇಲೆ ಪ್ರಯೋಗಿಸಲಾಗಿದೆ. ಇದಕ್ಕೆ ಉತ್ತಮ ಫಲಿತಾಂಶ ಸಹ ದೊರೆತಿದೆ. ಮಕ್ಕಳಿಗೂ ಇದನ್ನು ಬಳಕೆ ಮಾಡಬಹುದು. ಇದರ ಒಂದು ವಯಲ್ ಅನ್ನು 200 ಕ್ಕೂ ಅಧಿಕ ಬಾರಿ ಬಳಕೆ ಮಾಡಬಹುದು.
ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನೆಟ್ಟಿಬೈಲು ನಿವಾಸಿ ವಿನಾಯಕ ಭಟ್ (32) ಅವರು ತೀವ್ರ ಜ್ವರ ಬಾಧೆಯಿಂದ ಮೃತಪಟ್ಟಿದ್ದಾರೆ. ಅವರು ಸುಮಾರು ಹತ್ತು
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?