ಶುಕ್ರವಾರ, ಮೇ 17, 2024
Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಲಿವ್ಇನ್‌ ರಿಲೇಷನ್‌ಶಿಪ್‌ನಲ್ಲಿ ಜನಿಸಿದ ಮಗುವಿಗೂ ತಂದೆಯ ಆಸ್ತಿ ಮೇಲೆ ಸಂಪೂರ್ಣ ಹಕ್ಕು: ಸುಪ್ರೀಂ

Twitter
Facebook
LinkedIn
WhatsApp
ಲಿವ್ಇನ್‌ ರಿಲೇಷನ್‌ಶಿಪ್‌ನಲ್ಲಿ ಜನಿಸಿದ ಮಗುವಿಗೂ ತಂದೆಯ ಆಸ್ತಿ ಮೇಲೆ ಸಂಪೂರ್ಣ ಹಕ್ಕು: ಸುಪ್ರೀಂ

ನವದೆಹಲಿ(ಜೂ.14): ಲಿವ್ ಇನ್ ರಿಲೇಶನ್ ಶಿಪ್ ನಿಂದ ಹುಟ್ಟುವ ಮಗುವಿನ ಭವಿಷ್ಯದ ಬಗ್ಗೆ ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಲಿವ್ ಇನ್ ರಿಲೇಶನ್ ಶಿಪ್ ಇಲ್ಲದೆ ಹುಟ್ಟುವ ಮಕ್ಕಳಿಗೂ ತಂದೆಯ ಆಸ್ತಿಯಲ್ಲಿ ಪಾಲು ನೀಡುವ ಹಕ್ಕು ಇರುತ್ತದೆ ಎಂದು ಸುಪ್ರೀಂ ಹೇಳಿದೆ. ದಂಪತಿ ದೀರ್ಘಕಾಲ ಒಟ್ಟಿಗೆ ಇದ್ದರೆ, ಈ ಸಂಬಂಧದಿಂದ ಜನಿಸಿದ ಮಗುವಿಗೆ ಅವರ ಆಸ್ತಿಯನ್ನು ಪಡೆಯಲು ಸಂಪೂರ್ಣ ಹಕ್ಕಿದೆ ಎಂದು ಸುಪ್ರೀಂ ಕೋರ್ಟ್ ಆದೇಶದಲ್ಲಿ ಹೇಳಿದೆ.

 

ಕೇರಳ ಹೈಕೋರ್ಟ್ ತೀರ್ಪನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ 

ಕೇರಳ ಹೈಕೋರ್ಟಿನ ತೀರ್ಪನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ಈ ತೀರ್ಪು ನೀಡಿದೆ. ತಂದೆ ಮತ್ತು ತಾಯಿ ಮದುವೆಯಾಗಿಲ್ಲ ಎಂಬ ಕಾರಣಕ್ಕೆ ಕೇರಳ ಹೈಕೋರ್ಟ್ ಮಗುವಿನ ತಂದೆಯ ಆಸ್ತಿಯ ಮೇಲಿನ ಹಕ್ಕನ್ನು ಕಸಿದುಕೊಂಡಿತ್ತು. ಮಗುವಿನ ಪೋಷಕರು ಮದುವೆಯಾಗದಿದ್ದರೂ, ಅವರು ದೀರ್ಘಕಾಲದವರೆಗೆ ಪತಿ-ಪತ್ನಿಯಂತೆ ಒಟ್ಟಿಗೆ ವಾಸಿಸುತ್ತಿದ್ದಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅಂತಹ ಪರಿಸ್ಥಿತಿಯಲ್ಲಿ, ಡಿಎನ್ಎ ಮಗು ತನ್ನದು ಎಂದು ಸಾಬೀತುಪಡಿಸಿದರೆ, ಆ ಮಗು ತಂದೆಯ ಆಸ್ತಿಗೆ ಅರ್ಹವಾಗುತ್ತದೆ ಎಂದಿದ್ದಾರೆ.

ಕೇರಳದ ವ್ಯಕ್ತಿಯೊಬ್ಬ ತನ್ನ ತಂದೆಯ ಆಸ್ತಿಗೆ ಹಕ್ಕು ಚಲಾಯಿಸಿದ ಘಟನೆ ನಡೆದಿದೆ. ತಂದೆ ಆಸ್ತಿ ಪಾಲು ಮಾಡಿದಾಗ ಅದರಿಂದ ವಂಚಿತರಾಗಿದ್ದೇನೆ ಎಂದ ಪ್ರಕರಣ ಕೇರಳ ಹೈಕೋರ್ಟ್ ಮೆಟ್ಟಿಲೇರಿತ್ತು. ತಾನು ಅಕ್ರಮ ಸಂತಾನ ಎಂದು ಹೇಳುವ ಮೂಲಕ ಆಸ್ತಿ ಹಕ್ಕುಗಳಿಂದ ಹೊರಹಾಕಲಾಗಿದೆ ಎಂದು ವ್ಯಕ್ತಿ ವಾದಿಸಿದ್ದರು. ಆದರೆ ಅವರ ವಿರುದ್ಧ ತೀರ್ಪು ನೀಡಿದ ಕೇರಳ ಹೈಕೋರ್ಟ್, ಯಾರ ಆಸ್ತಿಯ ಮೇಲೆ ಅವರು ಹಕ್ಕು ಹೊಂದಿದ್ದಾರೆಂದು ವಾದಿಸುತ್ತಿದ್ದಾರೋ ಅವರು ಮದುವೆಯಾಗಿಲ್ಲ ಎಂದು ಹೇಳಿದೆ. ಆದ್ದರಿಂದ, ಅವರು ಆಸ್ತಿಯ ಮೇಲೆ ಯಾವುದೇ ಹಕ್ಕನ್ನು ಪಡೆಯಲು ಸಾಧ್ಯವಿಲ್ಲ ಎಂದಿತ್ತು.


2010 ರಲ್ಲಿ, ಲಿವ್ ಇನ್ ರಿಲೇಶನ್ಶಿಪ್‌ಗೆ ಮಾನ್ಯತೆ ನೀಡಿದ್ದ ಸುಪ್ರೀಂ ಕೋರ್ಟ್‌

ಇದು 2010 ರಲ್ಲಿ, ಸುಪ್ರೀಂ ಕೋರ್ಟ್ ಲಿವ್-ಇನ್ ಸಂಬಂಧಗಳಿಗೆ ಕಾನೂನು ಮಾನ್ಯತೆ ನೀಡಿದಾಗ, ಕೌಟುಂಬಿಕ ಹಿಂಸಾಚಾರ ಕಾಯಿದೆ 2005ರ ಸೆಕ್ಷನ್ 2(ಎಫ್)ಗೆ ಸುಪ್ರೀಂ ಕೋರ್ಟ್ ಕೂಡ ಲಿಂಕ್ ಮಾಡಿತ್ತು. ವಾಸ್ತವವಾಗಿ, ಇದಕ್ಕೂ ಮೊದಲು, ಕೌಟುಂಬಿಕ ಹಿಂಸೆಯ ಅನೇಕ ಪ್ರಕರಣಗಳು ಲೈವ್-ಇನ್‌ನಲ್ಲಿ ಬರುತ್ತಲೇ ಇದ್ದವು, ಆದರೆ ಯಾವುದೇ ವಿಚಾರಣೆಯನ್ನು ಮಾಡಲಾಗಿಲ್ಲ. ಈಗ ಈ ಬಗ್ಗೆ ಎಫ್‌ಐಆರ್‌ ದಾಖಲಿಸಬಹುದು. ಲಿವ್ ಇನ್ ರಿಲೇಶನ್‌ಗಾಗಿ, ದಂಪತ ಪತಿ ಮತ್ತು ಹೆಂಡತಿಯಾಗಿ ಒಟ್ಟಿಗೆ ಇರಬೇಕಾಗುತ್ತದೆ, ಆದರೂ ಎಷ್ಟು ವರ್ಷಗಳು ಅಥವಾ ತಿಂಗಳುಗಳ ಕಾಲ ನಿಗದಿತ ಸಮಯವಿಲ್ಲ.

ನಾರಾಯಣ ದತ್ ತಿವಾರಿ ಮತ್ತು ರೋಹಿತ್ ಶೇಖರ್ ಪ್ರಕರಣದ ಚರ್ಚೆ

ನಾರಾಯಣ್ ದತ್ ತಿವಾರಿ ಮತ್ತು ರೋಹಿತ್ ಶೇಖರ್ ನಡುವೆ ಇಂತಹದೊಂದು ಪ್ರಕರಣ ಮುನ್ನೆಲೆಗೆ ಬಂದಿದೆ. ಉತ್ತರ ಪ್ರದೇಶ ಮತ್ತು ಉತ್ತರಾಖಂಡದ ಮುಖ್ಯಮಂತ್ರಿಯಾಗಿದ್ದ ದಿವಂಗತ ಕಾಂಗ್ರೆಸ್ ನಾಯಕ ನಾರಾಯಣ ದತ್ ತಿವಾರಿ ಅವರು ಕಾಂಗ್ರೆಸ್ ನಾಯಕಿ ಉಜ್ವಲಾ ಶರ್ಮಾ ಅವರೊಂದಿಗೆ ಸಂಬಂಧ ಹೊಂದಿದ್ದರು. ರೋಹಿತ್ ಶೇಖರ್ ಅವರ ಸಂಬಂಧದಿಂದ ಜನಿಸಿದರು. ತಿವಾರಿ ಆಸ್ತಿಯ ಮೇಲೆ ರೋಹಿತ್ ಹಕ್ಕು ಸಾಧಿಸಿದ್ದರು. ಆದರೆ ನಾರಾಯಣ್ ದತ್ ತಿವಾರಿ ಈ ಸಂಬಂಧ ನ್ಯಾಯಾಲಯದಲ್ಲಿ ನಿರಾಕರಿಸಿದ್ದರು. ಸುಪ್ರೀಂ ಕೋರ್ಟ್ ಡಿಎನ್ ಎ ಪರೀಕ್ಷೆ ನಡೆಸಿದ ಬಳಿಕ ರೋಹಿತ್ ಶೇಖರ್ ಹೇಳಿದ್ದು ಸತ್ಯ ಎಂಬುದು ಸಾಬೀತಾಗಿದೆ. ಅವರು ನಾರಾಯಣ್ ದತ್ ತಿವಾರಿ ಅವರ ಮಗ. ನ್ಯಾಯಾಲಯದ ಆದೇಶದ ನಂತರ, ನಾರಾಯಣ್ ದತ್ ತಿವಾರಿ ರೋಹಿತ್ ಮತ್ತು ಉಜ್ವಲಾ ಅವರನ್ನು ದತ್ತು ಪಡೆದರು. ಈ ವಿಷಯ ದೇಶದ ಮುಖ್ಯಾಂಶಗಳಲ್ಲಿತ್ತು.


Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ