ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರ್ನಾಟಕದ ಗಡಿಯೊಳಗೆ ಮಹಾರಾಷ್ಟ್ರ ಸರ್ಕಾರ ನಾಮಫಲಕ: ಕನ್ನಡಿಗರ ಆಕ್ರೋಶ..!

Twitter
Facebook
LinkedIn
WhatsApp
ಕರ್ನಾಟಕದ ಗಡಿಯೊಳಗೆ ಮಹಾರಾಷ್ಟ್ರ ಸರ್ಕಾರ ನಾಮಫಲಕ: ಕನ್ನಡಿಗರ ಆಕ್ರೋಶ..!

ಸಂಕೇಶ್ವರ(ಜೂ.18):  ಮಹಾರಾಷ್ಟ್ರದಲ್ಲಿರುವ ಊರುಗಳ ಹೆಸರನ್ನು ಮರಾಠಿಯಲ್ಲಿ ಬರೆದು ಕರ್ನಾಟಕದ ಗಡಿಯಲ್ಲಿ ಹಾಕಿದ್ದ ನಾಮಫಲಕಗಳನ್ನು ಕನ್ನಡಪರ ಸಂಘಟನೆಗಳು ತೆರವುಗೊಳಿಸಿದ ಘಟನೆ ಬೆಳಗಾವಿ ಜಿಲ್ಲೆಯ ಸಂಕೇಶ್ವರ ಹತ್ತಿರವಿರುವ ರಾಷ್ಟ್ರೀಯ ಹೆದ್ದಾರಿ ಗಡಹಿಂಗ್ಲಜ್‌ ರಸ್ತೆಯ ಬ್ರಿಡ್ಜ್‌ ಬಳಿ ನಡೆದಿದೆ.

ಮಹಾರಾಷ್ಟ್ರ ಸರ್ಕಾರದ ಲೋಕೋಪಯೋಗಿ ಇಲಾಖೆ ರಾಜ್ಯದ ಗಡಿಯಲ್ಲಿ, ಅದೂ ಕನ್ನಡ ನೆಲದಲ್ಲಿ ಮರಾಠಿ ಭಾಷೆಯಲ್ಲಿ ಮಹಾರಾಷ್ಟ್ರ ಶಾಸನ ಹಾಗೂ ಮಹಾರಾಷ್ಟ್ರಕ್ಕೆ ಸೇರಿದ ಊರುಗಳ ಹೆಸರು, ಕಿಲೋಮೀಟರ್‌ಗಳನ್ನು ಬರೆದು, ರಸ್ತೆಯ ಮಾರ್ಗಸೂಚಿಯ ನಾಮಫಲಕ ಅಳವಡಿಸಿ ಉದ್ಧಟತನ ಪ್ರದರ್ಶಿಸಿತ್ತು. ಇದನ್ನು ಗಮನಿಸಿ ಕುಪಿತಗೊಂಡ ಕನ್ನಡ ಪರ ಸಂಘಟನೆಗಳು ನಾಮಫಲಕವನ್ನು ಗುರುವಾರ ತೆರವುಗೊಳಿಸಿತು.

ಇದುವರೆಗೆ ಇರದೇ ಇದ್ದ ಈ ನಾಮಫಲಕವು ಕಳೆದ ಮೂರು ದಿನಗಳ ಹಿಂದೆ ಪಟ್ಟಣದ ಹೊರವಲಯದ ರಾ.ಹೆ. ಗಡಹಿಂಗ್ಲಜ್‌ ರಸ್ತೆಯ ಬ್ರಿಡ್ಜ್‌ ಬಳಿ ಮಹಾರಾಷ್ಟ್ರ ಶಾಸನ ಎಂಬ ನಾಮಫಲಕ ಅಳವಡಿಕೆ ಮಾಡಲಾಗಿತ್ತು. ರಾಜ್ಯದ ಮೂರು ಕಿಮೀ ಒಳಗಡೆ ಈ ನಾಮ ಫಲಕವನ್ನು ಅಲ್ಲಿನ ಸರ್ಕಾರ ಅಳವಡಿಸಿತ್ತು. ಆದರೆ, ಇದನ್ನು ಗಮನಿಸದ ಬಗ್ಗೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ವಿರುದ್ಧ ಕನ್ನಡ ಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳಕ್ಕೆ ಆಗಮಿಸಿದ ಕನ್ನಡ ಪರ ಸಂಘಟನೆಯ ಮುಖಂಡರು ಮಹಾ ಸರ್ಕಾರದ ವಿರುದ್ಧ ಹಾಗೂ ನಿದ್ದೆಯಲ್ಲಿರುವ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳು ಕೂಗಿ ಕೂಡಲೇ ಮಹಾರಾಷ್ಟ್ರ ಶಾಸನ ಎಂಬ ನಾಮ ಫಲಕ ತೆರವುಗೊಳಿಸಬೇಕು ಎಂದು ಆಗ್ರಹಿಸಿದರು. ತಕ್ಷಣವೇ ಸ್ಥಳಕ್ಕೆ ಸಂಕೇಶ್ವರ ಪೊಲೀಸ್‌ ಇನ್ಸ್‌ಪೆಕ್ಟರ್‌ ಪ್ರಹ್ಲಾದ ಚನ್ನಗಿರಿ ಹಾಗೂ ಸಬ್‌ ಇನ್ಸ್‌ಪೆಕ್ಟರ್‌ ಗಣಪತಿ ಕೊಂಗನೊಳಿ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಆಗಮಿಸಿ, ಜೆಸಿಬಿ ಯಂತ್ರದ ಮೂಲಕ ನಾಮಫಲಕ ತೆರವುಗೊಳಿಸಿದರು.

ಈ ವೇಳೆ ಮಾತನಾಡಿದ ಕನ್ನಡ ಪರ ಹೋರಾಟಗಾರ ಸಂತೋಷ ಪಾಟೀಲ ಕನ್ನಡ ನೆಲದಲ್ಲಿ ಮಹಾರಾಷ್ಟ್ರ ಸರ್ಕಾರ ಫಲಕ ಅಳವಡಿಸಿದರೂ ಇಲ್ಲಿನ ಅಧಿಕಾರಿಗಳು ಮೌನ ವಹಿಸಿರುವುದು ನಾಚಿಕೆ ಪಡುವಂತಹ ಸಂಗತಿ. ಮೂರು ಕಿಮೀ ಒಳಗೆ ಗಡಿ ಪ್ರವೇಶಿಸಿ ಮಹಾರಾಷ್ಟ್ರ ಸರ್ಕಾರ ಎಂಬ ಫಲಕ ಅಳವಡಿಸಿದರೂ ಕ್ರಮ ಕೈಗೊಳ್ಳದಿರುವುದು ಆಕ್ಷೇಪಾರ್ಹವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕನ್ನಡ ಪರ ಹೋರಾಟಗಾರರಾದ ಸಂತೋಷ ಪಾಟೀಲ, ಪ್ರೀತಂ ಸುಮಾರೆ, ಲಕ್ಷ್ಮಣ ಬಾನೆ, ಸಂತೋಷ ಸತ್ಯನಾಯಿಕ, ಪಿಂಟೂ ಸೂರ್ಯವಂಶಿ, ಪ್ರದೀಪ್‌ ಕರದನ್ನವರ, ಮೋಶಿನ್‌ ಪಠಾಣ, ಮಹೇಶ ಬೋರಗಲ್ಲಿ ಸೇರಿದಂತೆ ಇತರರು ಇದ್ದರು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ