ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಶಿವ, ಪಾರ್ವತಿ ವೇಷ ಧರಿಸಿ ಹಣದುಬ್ಬರದ ಬಗ್ಗೆ ನಾಟಕ- ಶಿವ ವೇಷಧಾರಿಯ ಬಂಧನ

Twitter
Facebook
LinkedIn
WhatsApp
ಶಿವ, ಪಾರ್ವತಿ ವೇಷ ಧರಿಸಿ ಹಣದುಬ್ಬರದ ಬಗ್ಗೆ ನಾಟಕ- ಶಿವ ವೇಷಧಾರಿಯ ಬಂಧನ

ದಿಸ್ಪುರ್: ನಿರ್ದೇಶಕಿ ಲೀನಾ ಮಣಿಮೇಕಲೈ ಅವರ ಕಾಳಿ ಸಾಕ್ಷ್ಯಚಿತ್ರದ ಪೋಸ್ಟರ್‌ಗೆ ದೇಶವ್ಯಾಪಿ ಆಕ್ರೋಶ ವ್ಯಕ್ತವಾಗಿದೆ. ಇದರ ನಡುವೆಯೇ ಶಿವ-ಪಾರ್ವತಿಯ ವೇಷ ಧರಿಸಿ ಬೀದಿ ನಾಟಕದ ಮೂಲಕ ಪ್ರತಿಭಟನೆ ನಡೆಸಿರುವ ಕಲಾವಿದರ ಮೇಲೆ ಕೇಸ್ ದಾಖಲಾಗಿದೆ. ಈಶ್ವರ ಪಾತ್ರಧಾರಿಯ ಬಂಧನವೂ ಆಗಿದೆ.

ಅಸ್ಸಾಂನ ನಾಗಾಂವ್‌ನಲ್ಲಿ ಇಬ್ಬರು ಶಿವ ಹಾಗೂ ಪಾರ್ವತಿ ದೇವಿಯ ವೇಷ ಧರಿಸಿ ದೇಶದ ಹಣದುಬ್ಬರದ ಬಗ್ಗೆ ನಾಟಕವಾಡಿದ್ದಾರೆ. ಇದು ಹಿಂದೂ ಸನಾತನ ಧರ್ಮದವರ ಭಾವನೆಗೆ ಧಕ್ಕೆ ಉಂಟುಮಾಡಿದೆ ಎಂದು ನಾಗಾಂವ್ ಜಿಲ್ಲೆಯ ಹಿಂದೂ ಪರಿಷತ್ ಹಾಗೂ ಭಜರಂಗದಳ ಆರೋಪಿಸಿ, ತೀವ್ರವಾಗಿ ಖಂಡಿಸಿದೆ.

ಶನಿವಾರ ಸಂಜೆ ನಾಟಕ ಕಲಾವಿದರಾದ ಬಿರಿಂಚಿ ಬೋರಾ ಮತ್ತು ಕರಿಷ್ಮಾ, ಶಿವ ಮತ್ತು ಪಾರ್ವತಿ ವೇಷ ಧರಿಸಿ, ರಸ್ತೆಗಿಳಿದು ಇಂಧನ, ಆಹಾರ ಪದಾರ್ಥ ಹಾಗೂ ಇತರ ವಸ್ತುಗಳ ಬೆಲೆ ಏರಿಕೆಯನ್ನು ಪ್ರತಿಭಟಿಸಿದ್ದಾರೆ. ಇಬ್ಬರೂ ಬೈಕ್‌ನಲ್ಲಿ ನಾಗಾಂವ್‌ನ ಕಾಲೇಜು ಚೌಕ್‌ಗೆ ಆಗಮಿಸಿ, ವಾಹನದಲ್ಲಿ ಇಂಧನ ಖಾಲಿಯಾಗುತ್ತಿರುವ ಬಗ್ಗೆ ನಾಟಕವಾಡಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿಯವರನ್ನು ತರಾಟೆಗೆ ತೆಗೆದುಕೊಂಡ ಶಿವ ವೇಷಧಾರಿ, ಸರ್ಕಾರ ಕೇವಲ ಬಂಡವಾಳಶಾಹಿಗಳ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿದೆ. ಸಾಮಾನ್ಯ ಜನರ ಸಮಸ್ಯೆಗಳ ಬಗ್ಗೆ ಕಾಳಜಿ ವಹಿಸುತ್ತಿಲ್ಲ ಎಂದು ಹೇಳಿದ್ದಾರೆ. ಇದನ್ನು ಸ್ಥಳದಲ್ಲಿ ನೆರೆದವರು ಕುತೂಹಲದಿಂದ ನೋಡಿದ್ದಾರೆ ಹಾಗೂ ಪಾತ್ರಧಾರಿಗಳು ಏರುತ್ತಿರುವ ಹಣದುಬ್ಬರವನ್ನು ಪ್ರತಿಭಟಿಸುವಂತೆ ಒತ್ತಾಯಿಸಿದ್ದಾರೆ.

ಇದಾದ ಬಳಿಕ ಬಡಾ ಬಜಾರ್ ಪ್ರದೇಶಕ್ಕೂ ಆಗಮಿಸಿದ ಕಲಾವಿದರು ಇದೇ ರೀತಿ ಬೀದಿ ನಾಟಕ ಪ್ರದರ್ಶಿಸಿದರು. ಇದು ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ಗಮನಕ್ಕೆ ಬಂದಿದ್ದು, ಅವರಿಬ್ಬರೂ ಹಿಂದೂ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಕಿಡಿಕಾರಿದ್ದಾರೆ. 

ಶಿವ-ಪಾರ್ವತಿ ಪಾತ್ರಧಾರಿಗಳಾದ ಬಿರಿಂಚಿ ಬೋರಾ ಹಾಗೂ ಕರೀಶ್ಮಾ ವಿರುದ್ಧ ನಾಗೋನ್ ಸದರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಇದರ ಬೆನ್ನಲ್ಲೇ ಶಿವ ಪಾತ್ರಧಾರಿ ಬೋರಾನನ್ನು ಬಂಧಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist