ಮಂಗಳವಾರ, ಮೇ 14, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Heavy Rain in India: ವರುಣನ ಆರ್ಭಟಕ್ಕೆ ಐದು ರಾಜ್ಯಗಳು ತತ್ತರ

Twitter
Facebook
LinkedIn
WhatsApp
Heavy Rain in India: ವರುಣನ ಆರ್ಭಟಕ್ಕೆ ಐದು ರಾಜ್ಯಗಳು ತತ್ತರ

ನವದೆಹಲಿ (ಜು.14): ಕೃಷಿ ಚಟುವಟಿಕೆಯ ಜೀವನಾಡಿಯಾದ ಮುಂಗಾರು ಮಳೆ, ದೇಶದ ಉತ್ತರ, ಪೂರ್ವದ ರಾಜ್ಯಗಳಲ್ಲಿ ಭಾರೀ ಪ್ರಮಾಣದ ಮಳೆ ಸುರಿಸುತ್ತಿದ್ದ, 5 ರಾಜ್ಯಗಳಲ್ಲಿ ಭಾರೀ ಸಾವು, ನೋವು, ಅಪಾರ ಪ್ರಮಾಣದ ಸಾರ್ವಜನಿಕ ಅಸ್ತಿಪಾಸ್ತಿ ಹಾನಿಗೆ ಕಾರಣವಾಗಿದೆ. ಮಹಾರಾಷ್ಟ್ರ, ಗುಜರಾತ್‌, ತೆಲಂಗಾಣ, ಆಂಧ್ರಪ್ರದೇಶ ಹಾಗೂ ಒಡಿಶಾ ರಾಜ್ಯಗಳಲ್ಲಿ ಧಾರಾಕಾರ ಮಳೆ ಬುಧವಾರವೂ ಮುಂದುವರೆದಿದ್ದು, ಹಲವೆಡೆ ಭೂಕುಸಿತ, ಬೆಳೆಹಾನಿ, ಪ್ರಾಣಹಾನಿಗೆ ಕಾರಣವಾಗಿದೆ. ಕಳೆದ 24 ಗಂಟೆಗಳಲ್ಲಿ ಗುಜರಾತ್‌ನಲ್ಲಿ 14 ಹಾಗೂ ಮಹಾರಾಷ್ಟ್ರದಲ್ಲಿ ಮೂವರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ. ಹಲವಾರು ಹೆದ್ದಾರಿಗಳು ಜಲಾವೃತವಾಗಿದ್ದು, ಸಂಚಾರಕ್ಕೆ ಅಡ್ಡಿಯಾಗಿದೆ.

ಗುಜರಾತ್‌ನಲ್ಲಿ 14 ಸಾವು: ಗುಜರಾತ್‌ ಹಾಗೂ ಕಛ್‌- ಸೌರಾಷ್ಟ್ರದಲ್ಲೂ ಭೀಕರ ಮಳೆಯಿಂದಾಗಿ ಕಳೆದ 24 ಗಂಟೆಗಳಲ್ಲಿ 14 ಜನರು ಮೃತಪಟ್ಟಿದ್ದಾರೆ. 31,000ಕ್ಕೂ ಹೆಚ್ಚಿನ ಜನರನ್ನು ಸುರಕ್ಷಿತ ಸ್ಥಾನಗಳಿಗೆ ಸ್ಥಳಾಂತರಗೊಳಿಸಲಾಗಿದೆ. ಕಛ್‌, ನವಸಾರಿ, ಡಾಂಗ್‌ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳು ಸಂಪೂರ್ಣವಾಗಿ ಜಲಾವೃತವಾಗಿವೆ. 51 ರಾಜ್ಯ ಹೆದ್ದಾರಿಗಳು ಹಾಗೂ 400ಕ್ಕೂ ಹೆಚ್ಚು ಪಂಚಾಯಿತಿ ರಸ್ತೆಗಳಿಗೆ ಹಾನಿಯಾಗಿದೆ. ಮುಂದಿನ 24 ಗಂಟೆಗಳ ಕಾಲ ಗುಜರಾತಿನಲ್ಲಿ ರೆಡ್‌ ಅಲರ್ಚ್‌ ಘೋಷಿಸಲಾಗಿದೆ.

ಮಹಾರಾಷ್ಟ್ರದಲ್ಲಿ 3 ಸಾವು: ಮಹಾರಾಷ್ಟ್ರದ ನಾಸಿಕ್‌ನಲ್ಲಿ ಎಡೆಬಿಡದೇ ಸುರಿಯುತ್ತಿರುವ ಭಾರೀ ಮಳೆಗೆ ಕಳೆದ 24 ಗಂಟೆಗಳಲ್ಲಿ ಸುಮಾರು 6 ಜನರು ಕೊಚ್ಚಿ ಹೋಗಿದ್ದಾರೆ. ಅವರಲ್ಲಿ ಒಬ್ಬ ವ್ಯಕ್ತಿಯ ಶವ ಈವರೆಗೆ ಪತ್ತೆಯಾಗಿದೆ. ಗೋಂಡಿಯಾ ಜಿಲ್ಲೆಯಲ್ಲೂ 4 ಜನರು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದು, ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಪ್ರಸಿದ್ಧ ಕಪಾಲೇಶ್ವರ ದೇವಾಲಯದ ಬಳಿಯಲ್ಲಿ ರಸ್ತೆ ಕುಸಿದಿದೆ. ಪಾಲ್ಘಾರ್‌ನಲ್ಲೂ ಭೂಕುಸಿತ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಇನ್ನಿಬ್ಬರು ಗಾಯಗೊಂಡಿದ್ದಾರೆ. ಚಂದ್ರಪುರ ಜಿಲ್ಲೆಯಲ್ಲಿ ಜಲಾವೃತವಾಗಿದ್ದ ಸೇತುವೆಯ ಮಧ್ಯದಲ್ಲಿ ಮಧ್ಯಪ್ರದೇಶದಿಂದ ಹೈದರಾಬಾದಿನತ್ತ ಸಾಗುವ ಬಸ್‌ ಸಿಲುಕಿಕೊಂಡಿದ್ದು, ಮಕ್ಕಳು ಸೇರಿದಂತೆ ಸುಮಾರು 35 ಪ್ರಯಾಣಿಕರು ಸಂಕಷ್ಟಕ್ಕೀಡಾಗಿದ್ದರು. ಸಮಯಪಜ್ಞೆಯಿಂದ ಮೆರೆದ ಪೊಲೀಸರು ಪ್ರಯಾಣಿಕರನ್ನು ರಕ್ಷಿಸಿದ್ದಾರೆ.

ಜಲಾಶಯ ಭರ್ತಿ: ಕಳೆದ 6 ದಿನಗಳಿಂದ ವರುಣನ ಆರ್ಭಟಕ್ಕೆ ತೆಲಂಗಾಣ ಕೂಡಾ ತತ್ತರಿಸಿದೆ. ಹೈದರಾಬಾದ್‌, ಕೆರಾಮೇರಿ, ಆಸೀಫಾಬಾದ್‌ನಲ್ಲಿ 20.04 ಸೆ.ಮೀ. ಭಾರೀ ಮಳೆಯಾಗಿದೆ. ಇದರಿಂದ ಭಾರೀ ಪ್ರಮಾಣದಲ್ಲಿ ಬೆಳೆಹಾನಿಯಾಗಿದ್ದು, ಪ್ರವಾಹದ ಸಾಧ್ಯತೆ ಹೆಚ್ಚಿದೆ. ಜಲಾಶಯಗಳು ಭರ್ತಿಯಾಗಿದ್ದು, ಶ್ರೀರಾಮ್‌ ಸಾಗರ, ಯೆಲ್ಲಾಂಪಲ್ಲಿ ಹಾಗೂ ಕಾದ್ದಂ ಜಲಾಶಯದ ಗೇಟ್‌ಗಳನ್ನು ತೆರೆಯಲಾಗಿದೆ. ಈ ಹಿನ್ನೆಲೆಯಲ್ಲಿ ತೆಲಂಗಾಣ ಸರ್ಕಾರ ಜು. 16ರವರೆಗೆ ಶಿಕ್ಷಣ ಸಂಸ್ಥೆಗಳಿಗೆ ನೀಡಿದ ರಜೆಯನ್ನು ಮುಂದುವರೆಸಿದೆ.

ಆಂಧ್ರದಲ್ಲಿ ಪ್ರವಾಹ ಭೀತಿ: ಆಂಧ್ರ ಪ್ರದೇಶದಲ್ಲೂ ಮುಂದಿನ 2 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಐಎಂಡಿ ಅಂದಾಜಿಸಿದೆ. ಈ ಹಿನ್ನೆಲೆಯಲ್ಲಿ ಭಾರೀ ಮಳೆ ಹಾಗೂ ಪ್ರವಾಹ ಉಂಟಾಗುವ ಸಾಧ್ಯತೆಯಿರುವ 4 ಜಿಲ್ಲೆಗಳಾದ ಎಲೂರು, ಅಲ್ಲುರಿ ಸೀತಾರಾಮ ರಾಜು, ಪೂರ್ವ ಗೋದಾವರಿ ಹಾಗೂ ಡಾ. ಬಿ.ಆರ್‌. ಅಂಬೇಡ್ಕರ್‌ ಕೊನಸೀಮಾಗಳಿಗೆ ಮುಖ್ಯಮಂತ್ರಿ ಜಗನ್‌ಮೋಹನ ರೆಡ್ಡಿ ತಲಾ 2 ಕೋಟಿ ರು. ಬಿಡುಗಡೆ ಮಾಡಿದ್ದಾರೆ. ಪ್ರಾಣಹಾನಿಯನ್ನು ತಪ್ಪಿಸಲು ರಾಜ್ಯ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ.

ಒಡಿಶಾದಲ್ಲಿ ಭೂಕುಸಿತ: ಒಡಿಶಾದಲ್ಲೂ ಮಳೆಯಿಂದಾಗಿ ಭೂಕುಸಿತವಾಗಿದ್ದು, 10 ಮನೆಗಳು ಧ್ವಂಸವಾಗಿವೆ. ಮಲ್ಕಾನ್‌ಗಿರಿ ಹಾಗೂ ಕಾಳಹಂದಿ ಜಿಲ್ಲೆಗಳಲ್ಲಿ ರಸ್ತೆಗಳು ಜಲಾವೃತವಾಗಿವೆ. 9 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಚ್‌ ಘೋಷಿಸಲಾಗಿದೆ. ಉಳಿದೆಡೆ ಯೆಲ್ಲೊ ಅಲರ್ಚ್‌ ಘೋಷಿಸಲಾಗಿದೆ. ಕೆಳಮಟ್ಟದ ಪ್ರದೇಶಗಳು ಜಲಾವೃತವಾಗಿದ್ದು, ಬೆಳೆಹಾನಿ ಸಂಭವಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ