ಶನಿವಾರ, ಮಾರ್ಚ್ 15, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕರ್ನಾಟಕದ 7 ಜಿಲ್ಲೆಗಳಲ್ಲಿ ಶನಿವಾರದವರೆಗೆ ಭಾರೀ ಮಳೆ..!

Twitter
Facebook
LinkedIn
WhatsApp
ಕರ್ನಾಟಕದ 7 ಜಿಲ್ಲೆಗಳಲ್ಲಿ ಶನಿವಾರದವರೆಗೆ ಭಾರೀ ಮಳೆ..!

ಬೆಂಗಳೂರು(ಜು.22):  ಬೆಂಗಳೂರು ನಗರ ಒಳಗೊಂಡಂತೆ ದಕ್ಷಿಣ ಒಳನಾಡಿನ ಏಳು ಜಿಲ್ಲೆಗಳಲ್ಲಿ ಶನಿವಾರ ಬೆಳಗ್ಗೆ 8.30ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ‘ಯೆಲ್ಲೋ ಅಲರ್ಚ್‌’ ನೀಡಲಾಗಿದೆ. ಬೆಂಗಳೂರು ಗ್ರಾಮಾಂತರ, ಮೈಸೂರು, ಮಲೆನಾಡಿನ ಜಿಲ್ಲೆಗಳಾದ ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಿಗೆ ಯಾವುದೇ ಅಲರ್ಟ್‌ ನೀಡಲಾಗಿಲ್ಲ. ಶನಿವಾರದಿಂದ ಸೋಮವಾರದ ತನಕ ರಾಜ್ಯದಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಗುರುವಾರ ಬೆಳಗ್ಗೆ 8.30ಕ್ಕೆ ಪೂರ್ಣಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ರಾಜ್ಯದ ಕರಾವಳಿಯ ಬಹುತೇಕ ಎಲ್ಲೆಡೆ, ದಕ್ಷಿಣ ಒಳನಾಡಿನ ಹಲವು ಕಡೆ ಮತ್ತು ಉತ್ತರ ಒಳನಾಡಿನ ಕೆಲವು ಕಡೆ ಮಳೆಯಾಗಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮುಂಗಾರು ದುರ್ಬಲವಾಗಿತ್ತು. ದಕ್ಷಿಣ ಒಳನಾಡಿನಲ್ಲಿ ವಾಡಿಕೆಯ ಮಳೆಯಾಗಿದೆ.

ಬೆಂಗಳೂರು ಗ್ರಾಮಾಂತರದ ವಗಟಾದಲ್ಲಿ 10.75 ಸೆಂ.ಮೀ, ಶಿವನಪುರ 9.35, ದೇವನಗೊಂದಿ 9.25, ಕೋಲಾರದ ಬಂಗಾರಪೇಟೆಯಲ್ಲಿ 9, ಬೆಂಗಳೂರು ನಗರ 8 ಸೆಂ.ಮೀ. ಮಳೆಯಾಗಿದೆ.

ಬುಧವಾರ ರಾತ್ರಿ ಸುರಿದದ್ದು ಜುಲೈನ 10 ವರ್ಷದ ಗರಿಷ್ಠ ಮಳೆ!

ಬೆಂಗಳೂರು ನಗರದಲ್ಲಿ ಬುಧವಾರ ತಡರಾತ್ರಿ ದಾಖಲೆಯ ಮಳೆ ಸುರಿದಿದ್ದು, ಭಾರತೀಯ ಹವಾಮಾನ ಕೇಂದ್ರದ ನಗರದ ಮಾಪನದಲ್ಲಿ 8.25 ಸೆಂ.ಮೀ. ಮಳೆ ದಾಖಲಾಗಿದ್ದು, ಕಳೆದ 10 ವರ್ಷದಲ್ಲಿ ಜುಲೈ ತಿಂಗಳಲ್ಲಿ ಒಂದು ದಿನದಲ್ಲಿ ದಾಖಲಾದ ಗರಿಷ್ಠ ಪ್ರಮಾಣದ ಮಳೆಯಾಗಿದೆ.

ಕಳೆದ ವರ್ಷದ ಜುಲೈ 26ರಂದು 5.98 ಸೆಂ.ಮೀ. ಮಳೆ ದಾಖಲಾಗಿತ್ತು. ಈ ದಾಖಲೆಯನ್ನು ಬುಧವಾರ ದಾಖಲೆ ಮುರಿದಿದೆ. 1998ರ ಜುಲೈ 18ರಂದು 12.35 ಸೆಂ.ಮೀ ಮಳೆ ಸುರಿದಿರುವುದು ಸಾರ್ವಕಾಲಿಕ ದಾಖಲೆಯಾಗಿದೆ. ಜುಲೈ ತಿಂಗಳಲ್ಲಿ ನಗರದಲ್ಲಿ ಸರಾಸರಿ 11.64 ಸೆಂ.ಮೀ ಮಳೆಯಾಗುತ್ತಿದ್ದರೆ, ಈ ವರ್ಷ ಈಗಾಗಲೇ 13.34 ಸೆಂ.ಮೀ. ಮಳೆಯಾಗಿದೆ.

ರಾತ್ರಿ 11 ಗಂಟೆಯ ಹೊತ್ತಿಗೆ ಪ್ರಾರಂಭಗೊಂಡ ಮಳೆ ರಾತ್ರಿ 2 ಗಂಟೆಯವರೆಗೂ ಸುರಿದಿದ್ದು, ಪ್ರಮುಖವಾಗಿ ಸಂಪಂಗಿರಾಮ ನಗರ (1) 8.5 ಸೆಂ.ಮೀ, ಸಂಪಂಗಿರಾಮ ನಗರ (2) 7.9, ಹಗದೂರು 7.5, ಚಾಮರಾಜಪೇಟೆ, ಕಾಟನ್‌ಪೇಟೆ ತಲಾ 6.5, ಪುಲಕೇಶಿ ನಗರ 6.45, ಹಂಪಿ ನಗರ, ಮಾರುತಿ ಮಂದಿರ ವಾರ್ಡ್‌ 5.9 ಸೆಂ.ಮೀ. ಮಳೆಯಾಗಿದೆ.

ಯೆಲ್ಲೋ ಅಲರ್ಟ್‌

ನಗರಕ್ಕೆ ಶನಿವಾರ ಬೆಳಗ್ಗೆ 8.30ರ ತನಕ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ. ನಗರದ ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27.9 ಮತ್ತು 20.5 ಡಿಗ್ರಿ ಸೆಲ್ಸಿಯಸ್‌ ದಾಖಲಾಗುವ ನಿರೀಕ್ಷೆಯಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist