ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ವಿಂಡೀಸ್‌ ಎದುರು 2ನೇ ಒಡಿಐ ಗೆದ್ದರೆ ವಿಶ್ವ ದಾಖಲೆ ನಿರ್ಮಿಸಲಿರುವ ಭಾರತ!

Twitter
Facebook
LinkedIn
WhatsApp
ವಿಂಡೀಸ್‌ ಎದುರು 2ನೇ ಒಡಿಐ ಗೆದ್ದರೆ ವಿಶ್ವ ದಾಖಲೆ ನಿರ್ಮಿಸಲಿರುವ ಭಾರತ! 
ಟ್ರಿನಿಡಾಡ್‌ (ಪೋರ್ಟ್‌ ಆಫ್‌ ಸ್ಪೇನ್‌): ಟೀಮ್ ಇಂಡಿಯಾ ಮತ್ತೊಂದು ವಿಶ್ವ ದಾಖಲೆಯ ಹೊಸ್ತಿಲಲ್ಲಿದೆ. ವೆಸ್ಟ್‌ ಇಂಡೀಸ್‌ ಪ್ರವಾಸದಲ್ಲಿರುವ ಭಾರತ ತಂಡ ಆತಿಥೇಯರ ಎದುರು ಮೂರು ಪಂದ್ಯಗಳ ಸರಣಿಯನ್ನಾಡುತ್ತಿದ್ದು, ಈಗಾಗಲೇ 1-0 ಅಂತರದ ಮುನ್ನಡೆಯಲ್ಲಿದೆ. ಭಾನುವಾರ (ಜುಲೈ 24) ಕ್ವೀನ್ಸ್‌ ಪಾರ್ಕ್‌ ಓವಲ್‌ ಕ್ರೀಡಾಂಗಣದಲ್ಲಿ ನಡೆಯಲಿರುವ ಸರಣಿಯ ಎರಡನೇ ಪಂದ್ಯದಲ್ಲಿ ಶಿಖರ್‌ ಧವನ್‌ ಸಾರಥ್ಯದ ಭಾರತ ತಂಡಕ್ಕೆ ಜಯ ಸಿಕ್ಕಿದ್ದೇ ಆದರೆ, ವೆಸ್ಟ್‌ ಇಂಡೀಸ್‌ ವಿರುದ್ಧ ಸತತ 12ನೇ ದ್ವಿಪಕ್ಷೀಯ ಏಕದಿನ ಕ್ರಿಕೆಟ್‌ ಸರಣಿ ಗೆದ್ದ ಐತಿಹಾಸಿಕ ಸಾಧನೆ ಮೆರೆಯಲಿದೆ. ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ ಸರಣಿಗಳಲ್ಲಿ ಒಂದೇ ತಂಡದ ಎದುರು ಸತತ ಸರಣಿಗಳನ್ನು ಗೆದ್ದ ವಿಶ್ವ ದಾಖಲೆ ಇದಾಗಲಿದೆ.
2007ರಿಂದ ಇಲ್ಲಿಯವರೆಗೆ ಭಾರತ ತಂಡ ವೆಸ್ಟ್‌ ಇಂಡೀಸ್‌ ಎದುರು ಸತತ 11 ಏಕದಿನ ಕ್ರಿಕೆಟ್‌ ಸರಣಿಗಳನ್ನು ಗೆದ್ದ ಸಾಧನೆ ಮಾಡಿದೆ. ಇನ್ನೊಂದು ಸರಣಿ ಗೆದ್ದರೆ ಸತತ 12ನೇ ಸರಣಿ ಜಯದೊಂದಿಗೆ ನೂತನ ವಿಶ್ವ ದಾಖಲೆ ನಿರ್ಮಿಸಲಿದೆ. ಸದ್ಯ 11 ಜಯದೊಂದಿಗೆ ಟೀಮ್ ಇಂಡಿಯಾ ಈ ದಾಖಲೆಯನ್ನು ಪಾಕಿಸ್ತಾನದ ಜೊತೆಗೆ ಹಂಚಿಕೊಂಡಿದೆ. ಪಾಕಿಸ್ತಾನ ತಂಡ ಜಿಂಬಾಬ್ವೆ ಎದುರು ಸತತ 11 ಒಡಿಐ ಸರಣಿಗಳನ್ನು ಗೆದ್ದ ದಾಖಲೆ ಹೊಂದಿದೆ.

ಇದೇ ಕ್ರೀಡಾಂಗಣದಲ್ಲಿ ನಡೆದ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಸೋಲಿನ ಆಘಾತದಿಂದ ಪಾರಾಗಿ ಕೇವಲ 3 ರನ್‌ಗಳ ಜಯ ದಾಖಲಿಸಿತ್ತು. ಪಂದ್ಯದಲ್ಲಿ ಶಿಖರ್‌ ಧವನ್‌ ಕೇವಲ 3 ರನ್‌ಗಳಿಂದ ಶತಕ ವಂಚಿತರಾದರೆ, ಯುವ ಬ್ಯಾಟರ್‌ಗಳಾದ ಶ್ರೇಯಸ್‌ ಅಯ್ಯರ್‌ ಮತ್ತು ಶುಭಮನ್‌ ಗಿಲ್‌ ಭರ್ಜರಿ ಅರ್ಧಶತಕ ಬಾರಿಸಿದ್ದರು. ಆದರೂ ಬೌಲಿಂಗ್‌ ವಿಭಾಗದಲ್ಲಿ ಆದ ಕೆಲ ಎಡವಟ್ಟುಗಳಿಂದ ಸೋಲಿನ ದವಡೆಗೆ ಸಿಲುಕಿತ್ತು. ಹೀಗಾಗಿ ದ್ವಿತೀಯ ಪಂದ್ಯದಲ್ಲಿ ಸುಧಾರಿತ ಪ್ರದರ್ಶನ ನೀಡುವತ್ತ ಟೀಮ್ ಇಂಡಿಯಾ ಎದುರು ನೋಡುತ್ತಿದೆ.


ನಿಕೋಲಸ್‌ ಪೂರನ್‌ ಸಾರಥ್ಯದ ವೆಸ್ಟ್ ಇಂಡೀಸ್‌ ತಂಡ ಇತ್ತೀಚೆಗೆ ಬಾಂಗ್ಲಾದೇಶ ಎದುರು 0-3 ಅಂತರದಲ್ಲಿ ವೈಟ್‌ವಾಶ್‌ ಸೋಲನುಭವಿಸಿದೆ. ಹೀಗಾಗಿ ಭಾರತ ತಂಡಕ್ಕೆ ಆಘಾತ ನೀಡಿ ತನ್ನ ಏಕದಿನ ಕ್ರಿಕೆಟ್‌ ಪ್ರದರ್ಶನವನ್ನು ಸುಧಾರಿಸಿಕೊಳ್ಳುವ ರಣತಂತ್ರ ಮಾಡಿದೆ. ವಿಂಡೀಸ್‌ನ ಬ್ಯಾಟಿಂಗ್‌ ವಿಭಾಗದ ಅತ್ಯಂತ ಅಪಾಯಕಾರಿ ಆಗಿದ್ದು, ಭಾರತ ತಂಡಕ್ಕೆ ಆಘಾತ ನೀಡಬೇಕಾದರೆ ಬೌಲರ್‌ಗಳ ಪ್ರದರ್ಶನ ಸುಧಾರಿಸಬೇಕಿದೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist