ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

CWG 2022: ಭಾರತಕ್ಕೆ ಮತ್ತೊಂದು ಪದಕ: ಲಾಂಗ್​ಜಂಪ್​ನಲ್ಲಿ ಬೆಳ್ಳಿ ಗೆದ್ದು ದಾಖಲೆ ಬರೆದ ಮುರಳಿ ಶ್ರೀಶಂಕರ್

Twitter
Facebook
LinkedIn
WhatsApp
CWG 2022: ಭಾರತಕ್ಕೆ ಮತ್ತೊಂದು ಪದಕ: ಲಾಂಗ್​ಜಂಪ್​ನಲ್ಲಿ ಬೆಳ್ಳಿ ಗೆದ್ದು ದಾಖಲೆ ಬರೆದ ಮುರಳಿ ಶ್ರೀಶಂಕರ್

ಕಾಮನ್​ವೆಲ್ತ್  ಗೇಮ್ಸ್ 2022 ರಲ್ಲಿ ಭಾರತದ ಪದಕಗಳ ಸಂಖ್ಯೆ 20ಕ್ಕೇರಿದೆ. ಭಾರತೀಯ ಕಾಲಮಾನದ ಪ್ರಕಾರ ಗುರುವಾರ ರಾತ್ರಿ ಕೂಡ ಭಾರತ ಎರಡು ಪದಕಗಳನ್ನು ಬಾಜಿಕೊಂಡಿತು. ಕಾಮನ್​ವೆಲ್ತ್ ಗೇಮ್ಸ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪ್ಯಾರಾ ಪವರ್ ಲಿಫ್ಟಿಂಗ್​​ನಲ್ಲಿ ಭಾರತದ ಸುಧೀರ್ ಚಿನ್ನದ ಪದಕಕ್ಕೆ ಕೊರಳೊಡ್ಡಿದರೆ ಲಾಂಗ್​ಜಂಪ್​ನಲ್ಲಿ ಮುರಳಿ ಶ್ರೀಶಂಕರ್ (Murali Sreeshankar) ಬೆಳ್ಳಿ ಗೆದ್ದ ಸಾಧನೆ ಮಾಡಿದ್ದಾರೆ. ವಿಶೇಷ ಎಂದರೆ ಕಾಮನ್​ವೆಲ್ತ್ ಗೇಮ್ಸ್ ಇತಿಹಾಸದಲ್ಲಿ ಬೆಳ್ಳಿ ಗೆದ್ದ ಮೊದಲ ಪುರುಷ ಲಾಂಗ್​ಜಂಪರ್ ಶ್ರೀಶಂಕರ್ ಆಗಿದ್ದಾರೆ. 8.08ಮೀ ಜಿಗಿತದ ಮೂಲಕ ಭಾರತಕ್ಕೆ (India) ಐತಿಹಾಸಿಕ ಬೆಳ್ಳಿ ಗೆದ್ದುಕೊಟ್ಟರು. ಈ ಮೂಲಕ ಸುರೇಶ್ ಬಾಬು ಬಳಿಕ ಪದಕ ಗೆದ್ದ ಭಾರತದ ಎರಡನೇ ಪುರುಷ ಲಾಂಗ್​ಜಂಪರ್ ಎನಿಸಿಕೊಂಡಿದ್ದಾರೆ. ಸುರೇಶ್ ಅವರು 1978ರ ಕಾಮನ್​ವೆಲ್ತ್ ಗೇಮ್ಸ್​ನಲ್ಲಿ ಕಂಚು ಗೆದ್ದಿದ್ದರು.

ಸುಧೀರ್​ಗೆ ಚಿನ್ನ:

ಕಾಮನ್​ವೆಲ್ತ್ ಗೇಮ್ಸ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪ್ಯಾರಾ ಪವರ್ ಲಿಫ್ಟಿಂಗ್​​ನಲ್ಲಿ ಭಾರತದ ಸುಧೀರ್ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ. ಗುರುವಾರ ತಡರಾತ್ರಿ ನಡೆದ ಪುರುಷರ ಹೆವಿವೇಯ್ಟ್ ವಿಭಾಗದಲ್ಲಿ ಸುಧೀರ್ 134.5 ಅಂಕಗಳೊಂದಿಗೆ ಕಾಮನ್​​ವೆಲ್ತ್ ಗೇಮ್ಸ್​ನಲ್ಲಿ ಇತಿಹಾಸ ನಿರ್ಮಿಸಿದರು. ಸುಧೀರ್ ತಮ್ಮ ಮೊದಲ ಪ್ರಯತ್ನದಲ್ಲಿ 208 ಕೆ.ಜಿ ಭಾರ ಎತ್ತಿದರು. ಹೀಗೆ 132 ಕ್ಕೂ ಹೆಚ್ಚು ಅಂಕಗಳನ್ನು ಗಳಿಸುವ ಮೂಲಕ ಮೊದಲ ಸ್ಥಾನವನ್ನು ಗಳಿಸಿದರು.

ಇನ್ನು ಪುರುಷರ ವೆಲ್ಟರ್ ವೇಟ್ ವಿಭಾಗದಲ್ಲಿ ಬಾಕ್ಸರ್ ರೋಹಿತ್ ಟೋಕಾಸ್ ಸೆಮಿಫೈನಲ್ ಪ್ರವೇಶಿಸಿದ್ದಾರೆ. ಹಾಲಿ ಚಾಂಪಿಯನ್ ಮಣಿಕಾ ಬಾತ್ರಾ 4-0 ಅಂತರದ ಮೇಲುಗೈ ಸಾಧಿಸುವ ಮೂಲಕ ಮಹಿಳೆಯರ ಸಿಂಗಲ್ಸ್​ 16ರ ಸುತ್ತಿಗೆ ಪ್ರವೇಶಿಸಿದ್ದಾರೆ. ಪ್ಯಾಡ್ಲರ್‌ಗಳಾದ ಶ್ರೀಜಾ ಅಕುಲಾ ಮತ್ತು ರೀತ್ ಟೆನ್ನಿಸನ್ ಅವರು ತಮ್ಮ ಪಂದ್ಯಗಳಲ್ಲಿ ಜಯಗಳಿಸುವುದರೊಂದಿಗೆ 16ರ ಮಹಿಳಾ ಸಿಂಗಲ್ಸ್ ಸುತ್ತಿಗೆ ಪ್ರವೇಶಿಸಿದರು.ಟೆಬಲ್​ ಟೆನಿಸ್ ಪುರಷರ​ ಡಬಲ್ಸ್​ ವಿಭಾಗದಲ್ಲಿ ಅಲ್ಲೆನ್ ಜೋಯಲ್ ಮತ್ತು ವ್ಯಾನ್ ಲ್ಯಾಂಗ್ ಜೋನಾಥನ್ ವಿರುದ್ಧ ಭಾರತ ತಂಡದ ಆಟಗಾರರಾದ ಶರತ್​ ಮತ್ತು ಸಾಥಿಯಾನ್​ ಭರ್ಜರಿ ಗೆಲುವು ಸಾಧಿಸುವ ಮೂಲಕ 16ರ ಸುತ್ತಿಗೆ ಪ್ರವೇಶಿಸಿದರು.

ಇತ್ತ ಭಾರತೀಯ ಪುರುಷರ ಹಾಕಿ ತಂಡವು ಸೆಮಿಫೈನಲ್‌ಗೆ ಭರ್ಜರಿ ಗೆಲುವಿನೊಂದಿಗೆ ಪ್ರವೇಶಿಸಿತು. ಸ್ಟಾರ್ ಡಿಫೆಂಡರ್ ಹರ್ಮನ್‌ಪ್ರೀತ್ ಸಿಂಗ್ ಅವರ ಅಮೋಘ ಹ್ಯಾಟ್ರಿಕ್ ಹಿನ್ನಲೆಯಲ್ಲಿ ಭಾರತ ತನ್ನ ಕೊನೆಯ ಪೂಲ್ ಬಿ ಪಂದ್ಯದಲ್ಲಿ ವೇಲ್ಸ್ ತಂಡವನ್ನು 4-1 ಗೋಲುಗಳಿಂದ ಸೋಲಿಸಿತು. ಪೂಲ್ ಹಂತದಲ್ಲಿ 4 ಪಂದ್ಯಗಳಲ್ಲಿ ಟೀಂ ಇಂಡಿಯಾ ಒಟ್ಟು 3 ಪಂದ್ಯಗಳನ್ನು ಗೆದ್ದಿದ್ದರೆ, 1 ಡ್ರಾ ಆಗಿತ್ತು.

ಭಾರತದ ಅನುಭವಿ ಡಿಫೆಂಡರ್ ಹರ್ಮನ್‌ಪ್ರೀತ್ ಪಂದ್ಯಾವಳಿಯಲ್ಲಿ ತಮ್ಮ ಎರಡನೇ ಹ್ಯಾಟ್ರಿಕ್ ಅನ್ನು ಪೂರ್ಣಗೊಳಿಸಿದ್ದು ಮಾತ್ರವಲ್ಲದೆ, ಪೆನಾಲ್ಟಿ ಕಾರ್ನರ್‌ನಲ್ಲಿ ತಮ್ಮ ಪ್ರಬಲ ಡ್ರ್ಯಾಗ್–ಫ್ಲಿಕ್ ಆಧಾರದ ಮೇಲೆ 3 ಪ್ರಚಂಡ ಗೋಲುಗಳನ್ನು ಗಳಿಸುವ ಮೂಲಕ ದಾಖಲೆ ಮಾಡಿದರು. ಒಟ್ಟು 9 ಗೋಲುಗಳೊಂದಿಗೆ, ಅವರು ಕಾಮನ್​ವೆಲ್ತ್ ಗೇಮ್ಸ್​ನಲ್ಲಿ ಅತಿ ಹೆಚ್ಚು ಗೋಲು ಗಳಿಸಿದ ಭಾರತೀಯರಾಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist