ಪಲ್ಟಿಯಾದ ಗ್ಯಾಸ್ ಟ್ಯಾಂಕರ್; ತಪ್ಪಿದ ಅನಾಹುತ
ಪಲ್ಟಿಯಾದ ಗ್ಯಾಸ್ ಟ್ಯಾಂಕರ್; ತಪ್ಪಿದ ಅನಾಹುತ Twitter Facebook LinkedIn WhatsApp ಬಂಟ್ವಾಳ: ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಡಿವೈಡರ್ ಗೆ ಬಿದ್ದ ಘಟನೆ ರಾ.ಹೆ.75ರ ತುಂಬೆ ಸಮೀಪದ ಕಡೆಗೋಳಿಯಲ್ಲಿ ಮೇ.31ರ ಶುಕ್ರವಾರ ಬೆಳಗ್ಗೆ ನಡೆದಿದೆ.
ಬೆಂಗಳೂರು: ತಮ್ಮ ಅಂಗಡಿಯಲ್ಲಿ ಕಳ್ಳತನ ಮಾಡಿದ್ದನೆಂದು 51 ವರ್ಷದ ವ್ಯಕ್ತಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ತಂದೆ ಮತ್ತು ಮಗನನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಕರುಣಾಕರನ್ ಮತ್ತು ಆತನ ಪುತ್ರ ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಮೃತ ಅಮರನಾಥ್ ಬಿಹಾರ ಮೂಲದವರಾಗಿದ್ದು, ಯಲಹಂಕದ ಮಾರುತಿ ನಗರದಲ್ಲಿ ವಾಸಿಸುತ್ತಿದ್ದು, ಮೇಸ್ತ್ರಿ ವೃತ್ತಿ ಮಾಡಿಕೊಂಡಿದ್ದರು.
ಕರುಣಾಕರನ್ ಬಾಗಲೂರಿನ ದ್ವಾರಕಾನಗರದಲ್ಲಿ ಫ್ಯಾಬ್ರಿಕೇಶನ್ ಮತ್ತು ಇಂಜಿನಿಯರಿಂಗ್ ವರ್ಕ್ ಶಾಪ್ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಎರಡು ಬಾರಿ ಅಂಗಡಿಯಲ್ಲಿ ಕಬ್ಬಿಣದ ವಸ್ತುಗಳು ಕಳವು ಆಗಿತ್ತು. ಸಿಸಿಟಿವಿ ಪರೀಕ್ಷಿಸಿದಾಗ ಒಬ್ಬನೇ ವ್ಯಕ್ತಿ ಎರಡು ಸಂದರ್ಭಗಳಲ್ಲಿ ಕಳ್ಳತನ ಮಾಡಿರುವುದು ಗೊತ್ತಾಗಿತ್ತು. ಆತನನ್ನು ಹಿಡಿಯಲು ಯೋಜಿಸಿ ಸಿಸಿಟಿವಿ ದೃಶ್ಯಾವಳಿಗಳ ಮೇಲೆ ನಿಗಾ ಇರಿಸಿದ್ದರು.
ಶನಿವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಅಮರನಾಥ ಮತ್ತೆ ಕಳ್ಳತನಕ್ಕೆ ಯತ್ನಿಸಿದ್ದಾನೆ. ಅಂಗಡಿಯ ಪಕ್ಕದಲ್ಲಿದ್ದ ಕರುಣಾಕರನ್ ಮತ್ತು ಆತನ ಮಗ ಮತ್ತೊಬ್ಬ ಕೆಲಸಗಾರನೊಂದಿಗೆ ಧಾವಿಸಿ ಆತನನ್ನು ಹಿಡಿದಿದ್ದಾರೆ. ಆತನನ್ನು ಪೊಲೀಸರಿಗೆ ಒಪ್ಪಿಸುವ ಬದಲು, ಮೂವರು ಅಮರನಾಥ್ ಗೆ ಕಬ್ಬಿಣದ ರಾಡ್ ಗಳಿಂದ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ನಂತರ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಆತ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ತಂದೆ ಮತ್ತು ಮಗನನ್ನು ವಿಚಾರಣೆಗೆ ಒಳಪಡಿಸಿದಾಗ ಅವರು ಅಮರನಾಥ್ ಮೇಲೆ ಹಲ್ಲೆ ನಡೆಸಿ ಸಾವಿಗೆ ಕಾರಣವಾದುದನ್ನು ಒಪ್ಪಿಕೊಂಡಿದ್ದಾರೆ. ಪರಾರಿಯಾಗಿರುವ ಕಾರ್ಮಿಕನನ್ನು ಹಿಡಿಯಲು ಪ್ರಯತ್ನಗಳು ನಡೆಯುತ್ತಿರುವಾಗ ಇಬ್ಬರನ್ನು ಕೊಲೆಗಾಗಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಲ್ಟಿಯಾದ ಗ್ಯಾಸ್ ಟ್ಯಾಂಕರ್; ತಪ್ಪಿದ ಅನಾಹುತ Twitter Facebook LinkedIn WhatsApp ಬಂಟ್ವಾಳ: ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಡಿವೈಡರ್ ಗೆ ಬಿದ್ದ ಘಟನೆ ರಾ.ಹೆ.75ರ ತುಂಬೆ ಸಮೀಪದ ಕಡೆಗೋಳಿಯಲ್ಲಿ ಮೇ.31ರ ಶುಕ್ರವಾರ ಬೆಳಗ್ಗೆ ನಡೆದಿದೆ.
ಬೆಳ್ತಂಗಡಿ: ಮನೆಯೊಳಗೆ ಮಂಚದಡಿಯಲ್ಲಿತ್ತು12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ..! Twitter Facebook LinkedIn WhatsApp ಮಂಗಳೂರು, ಮೇ 28: ಮನೆಯೊಳಗೆ ಬಂದ 12 ಅಡಿ ಉದ್ದದ ಬೃಹತ್ ಗಾತ್ರ ಕಾಳಿಂಗ ಸರ್ಪವೊಂದನ್ನು (King
Pears: ಪಿಯರ್ಸ್ ಹಣ್ಣು ಮಾರುಕಟ್ಟೆಯಲ್ಲಿ ಎಷ್ಟು ಫೇಮಸೋ ಅಷ್ಟೇ ಆರೋಗ್ಯಕ್ಕೂ; ಇಲ್ಲಿದೆ ಮಾಹಿತಿ