ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಮ್ಗೆ ಮೊಟ್ಟೆ ಎಸೆಯೋಕೆ ಬರುತ್ತೆ: ಸಿದ್ದರಾಮಯ್ಯ

Twitter
Facebook
LinkedIn
WhatsApp
ನಮ್ಗೆ ಮೊಟ್ಟೆ ಎಸೆಯೋಕೆ ಬರುತ್ತೆ: ಸಿದ್ದರಾಮಯ್ಯ

ಮಡಿಕೇರಿ: ನಮಗೆ ಮೊಟ್ಟೆ ಎಸೆಯೋಕೆ ಬರಲ್ವಾ ನಾವು ಹೋರಾಟ ಮಾಡೋಕೆ ಶುರು ಮಾಡಿದರೆ ಸಿಎಂ ಎಲ್ಲೂ ಓಡಾಡೋಕೆ ಆಗಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಭೇಟಿಗೆ ಬಿಜೆಪಿ, ಹಿಂದೂಪರ ಸಂಘಟನೆ ವಿರೋಧ ವಿಚಾರವಾಗಿ ಪ್ರತಿಕ್ರಿಯಿಸಿದರು. ನಾನು ಬಂದು ಮಳೆ ಹಾನಿಯಾದ ಪ್ರದೇಶಗಳನ್ನು ನೋಡ್ತೀನಿ ಅಂತ ಕಾರ್ಯಕರ್ತರನ್ನು ಬಿಟ್ಟು ಪ್ರತಿಭಟನೆ ಮಾಡಿಸಿದ್ದಾರೆ. ಈ ಬಾರಿ ಕೊಡಗಿನಲ್ಲಿ ಎರಡೂ ಕಡೆ ಕಾಂಗ್ರೆಸ್ ಗೆಲ್ಲುತ್ತೆ ಅಂತ ಬಿಜೆಪಿ ಹತಾಶರಾಗಿ ಹೀಗೆ ಪ್ರತಿಭಟನೆ ಮಾಡಿದ್ದಾರೆ. ನಮಗೆ ಮೊಟ್ಟೆ ಎಸೆಯೋಕೆ ಬರಲ್ವಾ ನಾವು ಅದನ್ನೆಲ್ಲಾ ಮಾಡಿಕೊಂಡು ಬಂದಿರೋದು. ನಾವು ಹೋರಾಟ ಮಾಡೋಕೆ ಶುರು ಮಾಡಿದರೆ ಸಿಎಂ ಎಲ್ಲೂ ಓಡಾಡೋಕೆ ಆಗಲ್ಲ ಎಂದು ಎಚ್ಚರಿಕೆ ನೀಡಿದರು.

ನಮ್ಗೆ ಮೊಟ್ಟೆ ಎಸೆಯೋಕೆ ಬರುತ್ತೆ: ಸಿದ್ದರಾಮಯ್ಯ

ಮೊಟ್ಟೆ ಎಸೆತ ಹೇಡಿಗಳ ಕೃತ್ಯವಾಗಿದೆ. ಟಿಪ್ಪು ವಿಚಾರನೂ ಇಲ್ಲ, ಏನೂ ಇಲ್ಲ, ಟಿಪ್ಪು ಜಯಂತಿ ಆದ್ಮೇಲೆ ನಾನು ಕೊಡಗಿಗೆ ಬಂದಿಲ್ವಾ, ಕಳಪೆ ಕೆಲಸ ನನಗೆ ಗೊತ್ತಾಗದಿರಲಿ ಎಂದು ಈ ರೀತಿ ಪ್ರತಿಭಟನೆ ಮಾಡಿದ್ದಾರೆ. ಹತಾಶರಾಗಿ ಈ ರೀತಿ ಮಾಡುತ್ತಿದ್ದಾರೆ. ಇವರಿಗೆ ಸರ್ಕಾರ ನಡೆಸಲು ಬರುವುದೇ ಇಲ್ಲ ಎಂದು ಕಿಡಿಕಾರಿದರು.

ಈ ಕಾರ್ಯಕ್ರಕ್ಕೆ ಆಹ್ವಾನ ನೀಡಲು ಸ್ವತಃ ಸಿಎಂ ಬೊಮ್ಮಾಯಿ ಅವರೇ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿ ಜನೋತ್ಸವ ಸಮಾವೇಶಕ್ಕೆ ಆಗಮಿಸಬೇಕೆಂದು ಯಡಿಯೂರಪ್ಪ ಅವರಿಗೆ ಆಹ್ವಾನ ನೀಡಿದ್ದಾರೆ.ಮುಂದಿನ ವಿಧಾನಸಭೆ ಚುನಾವಣೆಯ ದೃಷ್ಟಿಯಿಂದ ಈ ಸಮಾವೇಶ ಮಾಡಲಾಗುತ್ತಿದ್ದು, ಈ ಕಾರ್ಯಕ್ರಮದಲ್ಲಿ ಕೇಂದ್ರದ ನಾಯಕರು ಭಾಗವಹಿಸುವ ಸಾಧ್ಯತೆಗಳಿವೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ವಾಡಿಕೆ ಮಳೆಗಿಂತ ಹೆಚ್ಚು ಮಳೆ ಬಿದ್ದಿದೆ. ಕರ್ನಾಟಕದಲ್ಲಿ 5 ಲಕ್ಷದ 23 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟ ಆಗಿದೆ. ಇವತ್ತಿನವರೆಗೆ ಸರ್ವೆ ಮಾಡಿ ಪರಿಹಾರ ಕೊಡುವ ಪ್ರಯತ್ನವನ್ನು ಸರ್ಕಾರ ಮಾಡಿಲ್ಲ. ರಾಜ್ಯ ಬಿಜೆಪಿ ಸರ್ಕಾರಕ್ಕೆ ಮಳೆಹಾನಿಯ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಕೊಡಗಿನ ಮಳೆಹಾನಿ ಆದ ಪ್ರದೇಶಗಳಿಗೆ ಭೇಟಿ ಕೊಟ್ಟು ಪರಿಶೀಲನೆ ಮಾಡಿದ್ದೇನೆ. 2018, 19, 20ರಲ್ಲಿ ಆದ ಮಳೆಯ ಹಾನಿಗೆ ಸರ್ಕಾರ ಇನ್ನೂ ಕೂಡ ಪರಿಹಾರ ನೀಡಿಲ್ಲ. ಸೇತುವೆ ತಡೆಗೋಡೆಗಳನ್ನು ತೀರಾ ಕಳಪೆಯಾಗಿ ಮಾಡಿದ್ದಾರೆ. ಅದಕ್ಕೆ ಅವೆಲ್ಲಾ ಹೀಗಾಗಿವೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ