ಮಂಗಳವಾರ, ಮೇ 7, 2024
ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!-ತಮ್ಮ ಭಾವಚಿತ್ರವನ್ನು ಅಳವಡಿಸಿ ಮತ ಹಾಕುವಂತೆ ಪೋಸ್ಟ್ ; ಆಪ್ತನ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ದೂರು ದಾಖಲು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಯಡಿಯೂರಪ್ಪ ಸಮರ್ಥರಲ್ಲ. ರಾಜ್ಯ ಬಿಜೆಪಿಗೆ ಪರ್ಯಾಯ ನಾಯಕತ್ವದ ಅಗತ್ಯ ಇದೆ: ಎಚ್ ವಿಶ್ವನಾಥ್.

Twitter
Facebook
LinkedIn
WhatsApp
ಯಡಿಯೂರಪ್ಪ ಸಮರ್ಥರಲ್ಲ. ರಾಜ್ಯ ಬಿಜೆಪಿಗೆ ಪರ್ಯಾಯ ನಾಯಕತ್ವದ ಅಗತ್ಯ ಇದೆ: ಎಚ್ ವಿಶ್ವನಾಥ್.

ಬೆಂಗಳೂರು: ಕರ್ನಾಟಕ ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಕುಸಿಯುತ್ತಿದ್ದು, ಪರ್ಯಾಯ ನಾಯಕತ್ವ ಬೇಕಾಗಿದೆ ಎಂದು ಬಿಜೆಪಿಯ ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ನುಡಿದಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಗಾರಪ್ಪ ಅವರ ಕಾಲದಲ್ಲಿ ಕ್ಲಾಸಿಕ್‌ ಕಂಪ್ಯೂಟರ್‌, ರಾಮಕೃಷ್ಣ ಹೆಗಡೆ ಅವರ ಕಾಲದಲ್ಲಿ ಬಾಟ್ನಿಂಗ್‌ ಹಗರಣದಿಂದ ನಾಯಕತ್ವವೇ ಕುಸಿದು ಹೋಯಿತು. ಇಲ್ಲಿಯೂ ನಾಯಕತ್ವ ಕುಸಿಯುತ್ತಿದೆ. ಇದರಿಂದ ಪಕ್ಷಕ್ಕೆ ಪ್ರಯೋಜನ ಇಲ್ಲ. ಅವರ ಮಾರ್ಗದರ್ಶನದಲ್ಲಿ ಪರ್ಯಾಯ ನಾಯಕತ್ವ ಕೊಡಿ. ವೀರಶೈವರಿಗೇ ಕೊಡಿ ಎಂದು ಆಗ್ರಹಿಸಿದರು.

ನಿಜವಾಗಿಯೂ ರಾಜ್ಯ ಬಿಜೆಪಿಯ ಆಂತರಿಕ ಕಲಹ ಕಡಿಮೆಯಾಗಿದೆಯ?

ನಾನು ಪಕ್ಷದ ಕಾರ್ಯಕ್ರಮಗಳ ಬಗ್ಗೆ ಮಾತನಾಡಿಲ್ಲ. ನಾನು ಮಾತನಾಡಿರುವುದು ಪಕ್ಷದ ನೈತಿಕತೆ, ಪಾರದರ್ಶಕತೆ, ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ. ನನ್ನ ಮೇಲೆ ಕ್ರಮ ತೆಗೆದುಕೊಳ್ಳಿ. ಆದರೆ, ಯಾರ ಮೇಲೆ ಕ್ರಮ ತೆಗೆದುಕೊಳ್ಳುವುದು ಎಂಬುದು ಬಹಳ ಮುಖ್ಯ. ಸತ್ಯ ಹೇಳುವವರ ಮೇಲೆ ಕ್ರಮ ತೆಗೆದುಕೊಳ್ಳುವುದಲ್ಲ. ಜನಾಭಿಪ್ರಾಯ ಯಾರಿಂದ ಕುಸಿಯುತ್ತಿದೆ ಎಂಬುದನ್ನು ನೀವು ನೋಡಬೇಕು ಎಂದು ತಿಳಿಸಿದರು.

ಮುಖ್ಯಮಂತ್ರಿ ಸರಿಯಿಲ್ಲ ಬದಲಾಯಿಸಿ ಎಂದ ವಿಶ್ವನಾಥ್. ಸರಿ ವಿಶ್ವನಾಥ್ ಇಲ್ಲ ಎಂದ ರೇಣುಕಾಚಾರ್ಯ.


ನೀವು ಬಿಜೆಪಿಯವರೇ ಎಂದು ರೇಣುಕಾಚಾರ್ಯ ಕೇಳುತ್ತಾನೆ. ನಾನು ಶುದ್ಧ ಬಿಜೆಪಿಯವ, ನೀನು ಮಿಕ್ಸಡ್‌ ಬಿಜೆಪಿ. ಕೆಜೆಪಿಯಿಂದ ಬಂದವನು ನೀನು. ಹಿಂದೆ ಇದೇ ಯಡಿಯೂರಪ್ಪರ ವಿರುದ್ಧ ನನ್ನನ್ನು ಸಚಿವ ಮಾಡಲಿಲ್ಲ ಎಂದು ಹೈದರಾಬಾದ್‌ಗೆ ಓಡಿ ಹೋಗಿದ್ರಲ್ಲ? ನಂತರ ನಿಮ್ಮನ್ನು ಯಾಕೆ ಸಚಿವ ಸ್ಥಾನದಿಂದ ತೆಗೆದರು? ಜಯಲಕ್ಷ್ಮೀ ನರ್ಸ್‌ ಕಥೆ ಏನಾಯ್ತು ಎಂದು ರೇಣುಕಾಚಾರ್ಯ ವಿರುದ್ಧ ಹರಿಹಾಯ್ದರು.
ಹಾಲಪ್ಪ ತನ್ನ ಸ್ನೇಹಿತನ ಮನೆಗೆ ಊಟಕ್ಕೆ ಹೋಗಿ, ಆತನ ಹೆಂಡತಿಯನ್ನು ಅತ್ಯಾಚಾರ ಮಾಡಲು ಪ್ರಯತ್ನಿಸಿ ಸಚಿವ ಸ್ಥಾನ ಕಳೆದುಕೊಂಡೆ. ನನ್ನ ಮೇಲೆ ಮಾತನಾಡುತ್ತೀರಾ ಎಂದು ಹಾಲಪ್ಪ ವಿರುದ್ಧ ಹರಿಹಾಯ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು