ಬುಧವಾರ, ಮೇ 15, 2024
Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕುವೆಂಪು ವಿಶ್ವವಿದ್ಯಾಲಯದ ಪರೀಕ್ಷಾ ದಿನಾಂಕವನ್ನು ಮುಂದೂಡುವಂತೆ ಎನ್‌ಎಸ್‌ಯುಐ ಒತ್ತಾಯ

Twitter
Facebook
LinkedIn
WhatsApp
ಕುವೆಂಪು ವಿಶ್ವವಿದ್ಯಾಲಯದ ಪರೀಕ್ಷಾ ದಿನಾಂಕವನ್ನು ಮುಂದೂಡುವಂತೆ ಎನ್‌ಎಸ್‌ಯುಐ ಒತ್ತಾಯ

ಚಿಕ್ಕಮಗಳೂರು:  ಕುವೆಂಪು ವಿಶ್ವವಿದ್ಯಾಲಯದ ಪದವಿ ಕಾಲೇಜುಗಳಲ್ಲಿ ೪ ಮತ್ತು ೬ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಪರೀಕ್ಷಾ ದಿನಾಂಕವನ್ನು ಮುಂದೂಡುವಂತೆ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಮುಖಂಡರು ಹಾಗೂ ವಿದ್ಯಾರ್ಥಿಗಳು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಸಿ.ಕೆ.ಶ್ರೀಕಾಂತ್ ಪ್ರತಿಭಟನಾನಿರತರನ್ನುದ್ದೇಶಿಸಿ ಮಾತನಾಡಿ, ಕುವೆಂಪು ವಿಶ್ವವಿದ್ಯಾಲಯದ ಪದವಿ ಕಾಲೇಜುಗಳಲ್ಲಿ ೪ ಮತ್ತು ೬ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ ೮ ರಿಂದ ೨೨ ರವರೆಗೆ ಪರೀಕ್ಷಾ ದಿನಾಂಕವನ್ನು ನಿಗಧಿಪಡಿಸಲಾಗಿದೆ ಎಂದು ಹೇಳಿದ್ದಾರೆ.

ಕಾಲೇಜುಗಳು ಪ್ರಾರಂಭವಾಗಿ ಎರಡು ತಿಂಗಳಾಗಿದ್ದು, ಕಾಲೇಜುಗಳಲ್ಲಿ ಉಪನ್ಯಾಸಕರು ಪಾಠಗಳನ್ನು ಸಮಯದ ಅಭಾವದಿಂದ ಪೂರ್ಣವಾಗಿ ಮುಗಿಸಿರುವುದಿಲ್ಲ. ಪಾಠಗಳೇ ಪೂರ್ಣಗೊಂಡಿಲ್ಲದೇ ಇರುವಾಗ ಪರೀಕ್ಷೆ ದಿನಾಂಕವನ್ನು ನಿಗಧಿಪಡಿಸಿರುವುದರಿಂದ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುವುದಲ್ಲದೇ ಉತ್ತಮ ಫಲಿತಾಂಶಕ್ಕೂ ತೊಂದರೆಯಾಗುತ್ತದೆ ಎಂದಿದ್ದಾರೆ.

ಕಾಲೇಜಿನ ಪ್ರಿನ್ಸಿಪಾಲರನ್ನು ವಿಚಾರಿಸಿದಾಗ ಪಠ್ಯವನ್ನು ಪೂರ್ಣಗೊಳಿಸಲು ಕನಿಷ್ಠವೆಂದರೆ ಒಂದು ತಿಂಗಳ ಅವಧಿ ಬೇಕಾಗಿದೆ. ಈವರೆವಿಗೂ ಒಂದು ಇಂಟರ್‌ರ್ನಲ್ ಮುಗಿಸಲಾಗಿದೆ ಇನ್ನು ಒಂದು ಬಾಕಿ ಇದೆ. ಎಲ್ಲಾ ತರಗತಿಗಳನ್ನು ಆಗಸ್ಟ್ ೩೦ ರೊಳಗೆ ಮುಗಿಸುವಂತೆ ಕುವೆಂಪು ವಿಶ್ವವಿದ್ಯಾಲಯದಿಂದ ಆದೇಶ ಬಂದಿದೆ ಎಂದು ತಿಳಿಸಿದ್ದಾರೆ.

ಪಾಠಗಳು ಪೂರ್ಣ ಪ್ರಮಾಣದಲ್ಲಿ ನಡೆಯದೇ ಇರುವ ಕಾರಣ ೪ ಮತ್ತು ೬ನೇ ಸೆಮಿಸ್ಟರ್ ವಿದ್ಯಾರ್ಥಿಗಳ ಪರೀಕ್ಷೆಯನ್ನು ಒಂದು ತಿಂಗಳ ಅವಧಿಗೆ ಮುಂದೂಡಿ ವಿದ್ಯಾರ್ಥಿಗಳಿಗೆ ಹಾಗೂ ಉಪನ್ಯಾಸಕರಿಗೆ ಅನುಕೂಲ ಮಾಡಿಕೊಡುವಂತೆ ಆಗ್ರಹಿಸಿದ್ದಾರೆ.

ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಪರೀಕ್ಷಾ ದಿನಾಂಕವನ್ನು ಮುಂದೂಡಿ ವಿದ್ಯಾರ್ಥಿಗಳ ಪರೀಕ್ಷಾ ತಯಾರಿಗೆ ಅನುಕೂಲ ಕಲ್ಪಿಸಲಾಗಿದೆ ಆದ್ದರಿಂದ ತಾವು ಕೂಡ ಕುವೆಂಪು ವಿಶ್ವವಿದ್ಯಾಲಯ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷಾ ಅವಧಿಯನ್ನು ಮುಂದಿನ ಕನಿಷ್ಠ ಒಂದು ತಿಂಗಳ ಅವಧಿಗೆ ಮುಂದೂಡಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವಂತೆ ಮನವಿ ಮಾಡಿದ್ದಾರೆ.

ಪ್ರತಿಭಟನೆಯಲ್ಲಿ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಾಕೀರ್ ಹುಸೇನ್, ಜಿಲ್ಲಾ ಉಪಾಧ್ಯಕ್ಷರಾದ ದರ್ಶನ್, ಪ್ರಜ್ವಲ್, ಪ್ರಧಾನ ಕಾರ್ಯದರ್ಶಿಗಳಾದ ಉಮೇಶ್, ದೃವಕುಮಾರ್, ಹರ್ಷಿತ್, ತಾಲ್ಲೂಕು ಅಧ್ಯಕ್ಷರಾದ ಸುಮಂತ್ ಬಿ.ಟಿ, ಮೂಡಿಗೆರೆ ತಾಲ್ಲೂಕು ಅಧ್ಯಕ್ಷ ಅಫಾನ್, ತರೀಕೆರೆ ತಾಲ್ಲೂಕು ಅಧ್ಯಕ್ಷ ವೆಂಕಟೇಶ್, ಗೋಪಾಲ್, ಚೇತನ್, ಯೋಗೀಶ್, ಬಾಲಾಜಿ, ವಿನಯ್, ನಮಾನ್ ಗೌಡ, ಸುನೀಲ್ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ