ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಲಗಿದ್ದ ಮಹಿಳೆಯೊಬ್ಬರ ಬೆನ್ನ ಮೇಲೆ ಹಾವೊಂದು ಹೆಡೆಯೆತ್ತಿ ನರ್ತನ! ಸಾವಿನ ದವಡೆಯಿಂದ ಮಹಿಳೆ ಪಾರು.

Twitter
Facebook
LinkedIn
WhatsApp
ಮಲಗಿದ್ದ ಮಹಿಳೆಯೊಬ್ಬರ ಬೆನ್ನ ಮೇಲೆ ಹಾವೊಂದು ಹೆಡೆಯೆತ್ತಿ ನರ್ತನ! ಸಾವಿನ ದವಡೆಯಿಂದ ಮಹಿಳೆ ಪಾರು.

ಕಲಬುರಗಿ: ಹಾವು ಅಂದ್ರೆ ಮಾರುದ್ದ ಓಡೋರೇ ಹೆಚ್ಚು. ಅಂತದ್ರಲ್ಲಿ ಹಾವೊಂದು ಮಲಗಿದ್ದ ಮಹಿಳೆಯ ಮೇಲೆ ಹೆಡೆ ಎತ್ತಿ ನಿಂತ್ರೆ ಹೆಂಗಿರಬೇಡ ಯೋಚಿಸಿ. ಇಂತಹ ಅಪರೂಪದ ಘಟನೆ ಇಂದು ಕಲಬುರಗಿಯಲ್ಲಿ ನಡೆದಿದೆ. ಹೊಲದಲ್ಲಿ ಮಲಗಿದ್ದ ಮಹಿಳೆಯೊಬ್ಬರ ಬೆನ್ನ ಮೇಲೆ ನಾಗರ ಹಾವೊಂದು ಹೆಡೆ ಎತ್ತಿ ನಿಂತಿದೆ. 

ಮಲಗಿದ್ದ ಮಹಿಳೆಯೊಬ್ಬರ ಬೆನ್ನ ಮೇಲೆ ಹಾವೊಂದು ಹೆಡೆಯೆತ್ತಿ ಸುಮಾರು ಒಂದು ಗಂಟೆ ಕಾಲ ಕುಳಿತಿದ್ದರೂ ಆಕೆಗೆ ಯಾವುದೇ ಹಾನಿ ಮಾಡದೆ ಇಳಿದು ಹೋದ ಕುತೂಹಲಕಾರಿ ಘಟನೆ ನಡೆದಿದೆ.
ಮಲ್ಲಾಬಾದ ಗ್ರಾಮದ ರೈತ ಮಹಿಳೆ ಭಾಗಮ್ಮ ಹಣಮಂತ ಬಡದಾಳ ಅವರು ತಮ್ಮದೇ ತೋಟದಲ್ಲಿ ಕೃಷಿ ಕೆಲಸ ಮುಗಿಸಿ ಊಟ ಮಾಡಿ, ಗಿಡವೊಂದರ ಕೆಳಗೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದಾಗ ಈ ಘಟನೆ ನಡೆದಿದೆ.

ಹಾವು ಮೈಮೇರಿದ್ದು ಗಮನಕ್ಕೆ ಬಂದ ಕೂಡಲೇ ಅವರು “ಹೇ ಮಲ್ಲಯ್ಯ, ಶ್ರೀಶೈಲ ಮಲ್ಲಯ್ಯ, ಸ್ವಾಮಿ ಕಾಪಾಡು ನನ್ನಪ್ಪ, ನೀ ಮಾಯವಾಗೋ ನನ್ನಪ್ಪ, ಹೇ ಮಲ್ಲಯ್ಯ’ ಎಂದು ದೇವರ ಜಪ ಮಾಡಿದ್ದರು. ಆಕೆಯ ಜಪ ಕೇಳಿಸಿತೋ ಎಂಬಂತೆ ಸುಮಾರು ಒಂದು ತಾಸು ಕಳೆದು ಹಾವು ಕೆಳಗಿಳಿದು ಹೋಯಿತು.

ವಿಷಯ ತಿಳಿದ ಜನ ಓಡೋಡಿ ಬಂದು ಈ ಅತ್ಯಪರೂಪದ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆಹಿಡಿಯುತ್ತಿದ್ದರು. ಜನರ ಗದ್ದಲಕ್ಕೂ ಹಾವು ಸರಿದಾಡಿರಲಿಲ್ಲ. ಭಾಗಮ್ಮ ಅವರ ಮನೆಯವರು ಕೂಡ ದೇವರನ್ನು ಸ್ಮರಿಸಲು ಹೇಳಿದ್ದರು.
ಭಾಗಮ್ಮಳ ಮಗ ನಾಗಪ್ಪ ಕಳೆದ ವರ್ಷ ಮೃತಪಟ್ಟಿದ್ದು, ಅವನ ಅಂತ್ಯಕ್ರಿಯೆಯನ್ನು ಅದೇ ತೋಟದಲ್ಲಿ ನೆರವೇರಿಸಲಾಗಿತ್ತು. ಆತನೇ ನಾಗರಹಾವಿನ ರೂಪದಲ್ಲಿ ಬಂದಿದ್ದಾನೆ ಎಂದು ಕುಟುಂಬದವರು ಹೇಳುತ್ತಿದ್ದಾರೆ.

ಮಲಗಿದ್ದ ಮಹಿಳೆಯೊಬ್ಬರ ಬೆನ್ನ ಮೇಲೆ ಹಾವೊಂದು ಹೆಡೆಯೆತ್ತಿ ನರ್ತನ! ಸಾವಿನ ದವಡೆಯಿಂದ ಮಹಿಳೆ ಪಾರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist