ಮಂಗಳವಾರ, ಮೇ 7, 2024
ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!-ತಮ್ಮ ಭಾವಚಿತ್ರವನ್ನು ಅಳವಡಿಸಿ ಮತ ಹಾಕುವಂತೆ ಪೋಸ್ಟ್ ; ಆಪ್ತನ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ದೂರು ದಾಖಲು.!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಇಂದಿನ ಚಿನ್ನ ಬೆಳ್ಳಿಯ ದರದ ವಿವರ-ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಾಮಾಜಿಕ ಅಂತರ, ಸ್ವಚ್ಛತೆ, ಲಸಿಕೆಯ ಮೂಲಕ ಕರೋನವನ್ನು ಹೊಡೆದೋಡಿಸಬಹುದು: ವೇದವ್ಯಾಸ್ ಕಾಮತ್

Twitter
Facebook
LinkedIn
WhatsApp
ಸಾಮಾಜಿಕ ಅಂತರ, ಸ್ವಚ್ಛತೆ, ಲಸಿಕೆಯ ಮೂಲಕ ಕರೋನವನ್ನು ಹೊಡೆದೋಡಿಸಬಹುದು: ವೇದವ್ಯಾಸ್ ಕಾಮತ್

ಕೋವಿಡ್ ಸೋಂಕಿನಿಂದ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಸಾಮಾಜಿಕ ಅಂತರ, ಸ್ವಚ್ಛತೆ ಹಾಗೂ ಲಸಿಕೆ ಪಡೆಯುವ ಮೂಲಕ ರಕ್ಷಣೆ ಪಡೆಯಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದರು.

ಸಂಘ ನಿಕೇತನದಲ್ಲಿ ಹೆಲ್ಪಿಂಗ್ ಹ್ಯಾಂಡ್ ಫೌಂಡೇಶನ್ ವತಿಯಿಂದ ನಡೆದ ಮೊದಲ‌ ಹಂತದ ಉಚಿತ ಲಸಿಕೆ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಶಾಸಕ ಕಾಮತ್, ಅನೇಕ ಸೇವಾ ಸಂಸ್ಥೆಗಳು ಕೋವಿಡ್‌ ಸಂದರ್ಭದಲ್ಲಿ ಜನರಿಗೆ ಉಪಯುಕ್ತವಾಗುವ‌ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡು ಸಾಮಾಜಿಕ ಜವಬ್ದಾರಿಯನ್ನು ನಿಭಾಯಿಸಿದೆ. ಆಹಾರ ವಿತರಣೆ, ಮಾಸ್ಕ್, ಸ್ಯಾನಿಟೈಸರ್ ವಿತರಣೆ, ಔಷಧಿಗಳ ವಿತರಣೆ ಸೇರಿದಂತೆ ಜನರಿಗೆ ಸಹಕಾರಿಯಾಗುವ ಕೆಲಸದಲ್ಲಿ ಸೇವಾ‌ ಸಂಸ್ಥೆಗಳು ತೊಡಗಿಸಿಕೊಂಡಿವೆ. ಆ ಸಾಲಿನಲ್ಲಿ ಹೆಲ್ಪಿಂಗ್ ಹ್ಯಾಂಡ್ ಫೌಂಡೇಶನ್ ಸಂಸ್ಥೆಯ ಕೆಲಸ ಶ್ಲಾಘನೀಯ ಎಂದರು.

ಕೇಶವ ಸ್ಮೃತಿ ಸಂವರ್ಧನ ಸಮಿತಿಯ ಕಾರ್ಯದರ್ಶಿಗಳಾದ ರಘುವೀರ್ ಕಾಮತ್ ಮಾತನಾಡಿ, ಸಾಮಾಜಿಕ ಕಳಕಳಿಯುಳ್ಳ ಹೆಲ್ಪಿಂಗ್ ಹ್ಯಾಂಡ್ ಫೌಂಡೇಶನ್ ಸಂಸ್ಥೆಯ ಸದಸ್ಯರು ಆರ್ಥಿಕವಾಗಿ ಹಿಂದುಳಿದ ಜನರಿಗೆ ಉಚಿತ ಲಸಿಕೆ ವಿತರಿಸುವ ಮೂಲಕ ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿದಿದ್ದಾರೆ. ಅವರ ಕಾರ್ಯಕ್ಕೆ ಯಶಸ್ಸು ದಕ್ಕಲಿ ಎಂದು ಹಾರೈಸಿದರು.

ಬಳಿಕ ಮಾತನಾಡಿದ ಹೆಲ್ಪಿಂಗ್ ಹ್ಯಾಂಡ್ ಫೌಂಡೇಶನ್ ಅಧ್ಯಕ್ಷರಾದ ವರುಣ್ ರಾಜ್ ಅಂಬಟ್, ಕಳೆದ ಲಾಕ್ ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಒದಗಿಸುವ ನಿಟ್ಟಿನಲ್ಲಿ ಹೆಲ್ಪಿಂಗ್ ಹ್ಯಾಂಡ್ಸ್ ಫೌಂಡೇಶನ್ ಸ್ಥಾಪಿಸಲಾಗಿತ್ತು. ಇಂದು ಸದಸ್ಯರ ಸಂಖ್ಯೆಯಲ್ಲಿಯೂ ಕೂಡ ಹೆಚ್ಚಳವಾಗಿದೆ. ಈ ಬಾರಿಯ ಲಾಕ್ ಡೌನ್ ಸಂದರ್ಭದಲ್ಲಿ ಜನರಿಗೆ ಊಟದ‌ ವ್ಯವಸ್ಥೆ ಸೇರಿದಂತೆ ಅನೇಕ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದೇವೆ. ಆ ನಿಟ್ಟಿನಲ್ಲಿ ಕೋವಿಡ್ ಲಸಿಕೆ ಖರೀದಿಸಿ ಆರ್ಥಿಕವಾಗಿ ಹಿಂದುಳಿದ ಜನರಿಗೆ ಉಚಿತವಾಗಿ ಹಂಚಲು ತೀರ್ಮಾನಿಸಲಾಗಿತ್ತು. ಇಂದು 210 ಜನರಿಗೆ ಲಸಿಕೆ ನೀಡಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಸಂದೀಪ್ ಗರೋಡಿ, ಸ್ಥಳೀಯ ಮನಪಾ ಸದಸ್ಯರಾದ ಸಂಧ್ಯಾ ಮೋಹನ್ ಆಚಾರ್, ಅಡ್ವಕೇಟ್ ರಂಜಿನಿ ಕಾಮತ್ ಹಾಗೂ ಹೆಲ್ಪಿಂಗ್ ಹ್ಯಾಂಡ್ ಫೌಂಡೇಶನ್ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು