ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

India vs Pakistan: ಇದೇ ವಾರ ಭಾರತ-ಪಾಕ್ ಮತ್ತೆ ಮುಖಾಮುಖಿ..!

Twitter
Facebook
LinkedIn
WhatsApp
India vs Pakistan: ಇದೇ ವಾರ ಭಾರತ-ಪಾಕ್ ಮತ್ತೆ ಮುಖಾಮುಖಿ..!

ಏಷ್ಯಾಕಪ್​ನ 2ನೇ ಪಂದ್ಯದಲ್ಲಿ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿಯುವ ಮೂಲಕ ಟೀಮ್ ಇಂಡಿಯಾ ಶುಭಾರಂಭ ಮಾಡಿದೆ. ದುಬೈ ಇಂಟರ್​ನ್ಯಾಷನಲ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಯನ್ನು 5 ವಿಕೆಟ್​ಗಳಿಂದ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ ಏಷ್ಯಾಕಪ್ ಅಭಿಯಾನ ಆರಂಭಿಸಿದೆ. ಪಾಕಿಸ್ತಾನ ನೀಡಿದ 148 ರನ್‌ಗಳ ಸ್ಪರ್ಧಾತ್ಮಕ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 2 ಎಸೆತಗಳು ಬಾಕಿಯಿರುವಂತೆ ಗೆದ್ದು ಬೀಗಿತು. ಈ ಗೆಲುವಿನೊಂದಿಗೆ ಗ್ರೂಪ್ ಎ ಪಾಯಿಂಟ್ ಟೇಬಲ್​ನಲ್ಲಿ ಭಾರತ ತಂಡ ಅಗ್ರಸ್ಥಾನಕ್ಕೇರಿದೆ.

ನ್ನು ಭಾರತ ತಂಡವು ಆಗಸ್ಟ್ 31 ರಂದು ಹಾಂಗ್ ಕಾಂಗ್ ವಿರುದ್ದ ಆಡಲಿದೆ. ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಸೂಪರ್- 4 ಹಂತಕ್ಕೇರುವುದುನ್ನು ಖಚಿತ ಪಡಿಸಿಕೊಳ್ಳಲಿದೆ. ಮತ್ತೊಂದೆಡೆ ಪಾಕಿಸ್ತಾನ್ ಕೂಡ ಹಾಂಗ್ ಕಾಂಗ್ ವಿರುದ್ದ ಪಂದ್ಯವಾಡಲಿದ್ದು, ಈ ಪಂದ್ಯದಲ್ಲಿ ಪಾಕ್ ಕೂಡ ಗೆಲ್ಲುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಭಾರತ ಹಾಗೂ ಪಾಕಿಸ್ತಾನ್ ಸೂಪರ್​- 4 ಹಂತದಲ್ಲಿ ಮತ್ತೆ ಮುಖಾಮುಖಿಯಾಗಲಿದೆ.

ಉಭಯ ತಂಡಗಳು ಸೂಪರ್-4 ಹಂತಕ್ಕೇರಿದರೆ ಸೆಪ್ಟೆಂಬರ್ 3 ರಂದು ನಡೆಯಲಿರುವ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಅಂದರೆ ಮುಂದಿನ ಶನಿವಾರ ಮತ್ತೊಮ್ಮೆ ಇಂಡೋ-ಪಾಕ್ ಕ್ರಿಕೆಟ್ ಕದನವನ್ನು ವೀಕ್ಷಿಸುವ ಅವಕಾಶ ಕ್ರಿಕೆಟ್ ಪ್ರೇಮಿಗಳಿಗೆ ದೊರೆಯಲಿದೆ.

ಒಂದು ವೇಳೆ ಹಾಂಗ್​ ಕಾಂಗ್ ತಂಡವು ಮುಂದಿನ 2 ಪಂದ್ಯಗಳಲ್ಲಿ ಒಂದನ್ನು ಗೆದ್ದರೂ, ಸೂಪರ್- 4 ಹಂತಕ್ಕೇರಲು 2 ತಂಡಗಳ ನೆಟ್​ ರನ್​ ರೇಟ್ ಪರಿಗಣನೆಗೆ ಬರಲಿದೆ. ಹೀಗಾಗಿ ಹಾಂಗ್ ಕಾಂಗ್ ವಿರುದ್ದ ಪಾಕಿಸ್ತಾನ್ ಸೋತರೆ ಟೂರ್ನಿಯಿಂದಲೇ ಹೊರಬೀಳಬಹುದು.

ಸದ್ಯ ಪಾಕಿಸ್ತಾನ್ ವಿರುದ್ದ ಟಿ20 ವಿಶ್ವಕಪ್ ಸೋಲಿನ ಸೇಡನ್ನು ತೀರಿಸಿಕೊಂಡಿರುವ ಟೀಮ್ ಇಂಡಿಯಾ ಈ ಬಾರಿ ಏಷ್ಯಾಕಪ್​ ಗೆಲ್ಲುವ ಫೇವರೇಟ್ ತಂಡವಾಗಿ ಗುರುತಿಸಿಕೊಂಡಿದೆ. ಆದರೆ ಸೂಪರ್- 4 ಹಂತದಲ್ಲಿ ಭಾರತ-ಪಾಕ್ ಮುಖಾಮುಖಿಯಾದರೆ ಮುಂದಿನ ಹಂತ ಕೂಡ ರೋಚಕತೆಯಿಂದ ಕೂಡಿರಲಿದೆ. ಇನ್ನು ಸೂಪರ್-4 ಹಂತದ ಪಾಯಿಂಟ್ ಟೇಬಲ್​ನಲ್ಲಿ ಭಾರತ-ಪಾಕಿಸ್ತಾನ್ ಮೊದಲೆರಡು ಸ್ಥಾನಗಳನ್ನು ಪಡೆದುಕೊಂಡರೆ ಫೈನಲ್​ನಲ್ಲೂ ಮುಖಾಮುಖಿಯಾಗಬಹುದು. ಅದರಂತೆ ಈ ಬಾರಿಯ ಏಷ್ಯಾಕಪ್​ನಲ್ಲಿ ಭಾರತ-ಪಾಕಿಸ್ತಾನ್ ಮೂರು ಪಂದ್ಯಗಳನ್ನು ಆಡಲಿದೆಯಾ ಕಾದು ನೋಡಬೇಕಿದೆ.

ಏಷ್ಯಾಕಪ್ ಮುಂದಿನ ಪಂದ್ಯಗಳ ವೇಳಾಪಟ್ಟಿ ಹೀಗಿದೆ:

  1. ಆಗಸ್ಟ್ 30  – ಬಾಂಗ್ಲಾದೇಶ vs ಅಫ್ಘಾನಿಸ್ತಾನ- ಶಾರ್ಜಾ
  2. ಆಗಸ್ಟ್ 31  – ಭಾರತ vs ಹಾಂಗ್​ ಕಾಂಗ್- ದುಬೈ
  3. ಸೆಪ್ಟೆಂಬರ್ 1 – ಶ್ರೀಲಂಕಾ vs ಬಾಂಗ್ಲಾದೇಶ- ದುಬೈ
  4. ಸೆಪ್ಟೆಂಬರ್ 2 – ಪಾಕಿಸ್ತಾನ vs ಹಾಂಗ್​ ಕಾಂಗ್- ಶಾರ್ಜಾ

ಗ್ರೂಪ್​ ಸುತ್ತಿನಿಂದ ನಾಲ್ಕು ತಂಡಗಳು ಸೂಪರ್-4 ಗೆ ಅರ್ಹತೆ ಪಡೆಯಲಿದೆ. ಇದಾದ ಬಳಿಕ ಸೆಪ್ಟಂಬರ್ 3 ರಿಂದ ಸೂಪರ್-4 ಪಂದ್ಯಗಳು ಶುರುವಾಗಲಿದೆ.

ಸೂಪರ್- 4 ವೇಳಾಪಟ್ಟಿ:

  1. ಸೆಪ್ಟೆಂಬರ್ 3 – B1 vs B2- ಶಾರ್ಜಾ
  2. ಸೆಪ್ಟೆಂಬರ್ 4 – A1 vs A2- ದುಬೈ
  3. ಸೆಪ್ಟೆಂಬರ್ 6 – A1 vs B1- ದುಬೈ
  4. ಸೆಪ್ಟೆಂಬರ್ 7 – A2 vs B2- ದುಬೈ
  5. ಸೆಪ್ಟೆಂಬರ್ 8 – A1 vs B2- ದುಬೈ
  6. ಸೆಪ್ಟೆಂಬರ್ 9 – B1 vs- A2- ದುಬೈ
  7. ಸೆಪ್ಟೆಂಬರ್ 11 – ಫೈನಲ್ ಪಂದ್ಯ- ದುಬೈ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ