ಭಾನುವಾರ, ಮೇ 12, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಾಲಿವುಡ್‌ ನಟಿ ಜಾಕ್ವೆಲಿನ್ ಫೆರ್ನಾಂಡಿಸ್‌ಗೆ ಇಡಿ ಕಂಟಕ: ದಿಲ್ಲಿ ಕೋರ್ಟ್‌ ಸಮನ್ಸ್

Twitter
Facebook
LinkedIn
WhatsApp
ಬಾಲಿವುಡ್‌ ನಟಿ ಜಾಕ್ವೆಲಿನ್ ಫೆರ್ನಾಂಡಿಸ್‌ಗೆ ಇಡಿ ಕಂಟಕ: ದಿಲ್ಲಿ ಕೋರ್ಟ್‌ ಸಮನ್ಸ್

ಹೊಸ ದಿಲ್ಲಿ: 200 ಕೋಟಿ ರೂಪಾಯಿಗೂ ಅಧಿಕ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಬಾಲಿವುಡ್ ಖ್ಯಾತ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ದೆಹಲಿಯ ಪಟಿಯಾಲ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಸೆಪ್ಟಂಬರ್ 26ರಂದು ಕೋರ್ಟ್ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಸುಕೇಶ್ ಚಂದ್ರಶೇಖರ್‌ಗೆ ಸಂಬಂಧಿಸಿದ ಬಹುಕೋಟಿ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಕ್ವೆಲಿನ್ ಫರ್ನಾಂಡೀಸ್ ಅವರನ್ನು ಆರೋಪಿ ಎಂದು ಹೆಸರಿಸಿ ಜಾರಿ ನಿರ್ದೇಶನಾಲಯ (ಇಡಿ) ಆರೋಪಟ್ಟಿ ಸಲ್ಲಿಸಿದೆ. .

ಬೆಂಗಳೂರು ಮೂಲದ ಸುಕೇಶ್‌ ಚಂದ್ರಶೇಖರ್‌ ನಡೆಸಿರುವ 200 ಕೋಟಿ ರೂಪಾಯಿಗೂ ಅಧಿಕ ವಂಚನೆ ಪ್ರಕರಣದಲ್ಲಿ ಜಾಕ್ವೆಲಿನ್‌ 10 ಕೋಟಿ ಮೌಲ್ಯದ ಉಡುಗೊರೆ ನೀಡಿರುವುದು ತನಿಖೆಯಲ್ಲಿ ಪತ್ತೆಯಾಗಿತ್ತು.  ಸುಕೇಶ್ ಚಂದ್ರಶೇಖರ್, ರಾನ್‌ಬಾಕ್ಸಿಯ ಮಾಜಿ ಪ್ರವರ್ತಕ ಅದಿತಿ ಸಿಂಗ್ ಮತ್ತು ಶಿವಿಂದರ್ ಸಿಂಗ್ ಅವರಿಗೆ ವಂಚನೆ ಮಾಡಿದ ಆರೋಪದ ಮೇರೆಗೆ ದೆಹಲಿ ಪೊಲೀಸರು  ಸುಕೇಶನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಚಂದ್ರಶೇಖರ್ ಹೊರತುಪಡಿಸಿ ಇಡಿ ಈ ಪ್ರಕರಣದಲ್ಲಿ ಅವರ ಪತ್ನಿ ಲೀನಾ ಮರಿಯಾ ಪಾಲ್, ಪಿಂಕಿ ಇರಾನಿ ಸೇರಿದಂತೆ ಎಂಟು ಜನರನ್ನು ಬಂಧಿಸಿದ್ದು ದೆಹಲಿ ನ್ಯಾಯಾಲಯಕ್ಕೆ ಎರಡು ಚಾರ್ಜ್ ಶೀಟ್‌ಗಳನ್ನು ಸಲ್ಲಿಸಿದೆ

ಬಾಲಿವುಡ್‌ ನಟಿ ಜಾಕ್ವೆಲಿನ್ ಫೆರ್ನಾಂಡಿಸ್‌ಗೆ ಇಡಿ ಕಂಟಕ: ದಿಲ್ಲಿ ಕೋರ್ಟ್‌ ಸಮನ್ಸ್

ಈ ಪ್ರಕರಣದ ವಿಚಾರಣೆ ನಡೆಸಿದ ದಿಲ್ಲಿ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪ್ರವೀಣ್ ಸಿಂಗ್ ಅವರು ಬುಧವಾರ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಸಮನ್ಸ್ ಜಾರಿ ಮಾಡಿದ್ದಾರೆ. ಇಡಿ ಸಲ್ಲಿಸಿದ್ದ ಹೆಚ್ಚುವರಿ ಚಾರ್ಜ್‌ ಶೀಟ್‌ ಅನ್ನು ಪರಿಗಣನೆಗೆ ತೆಗದುಕೊಂಡು ನ್ಯಾಯಾಲಯ ಈ ಕ್ರಮ ಕೈಗೊಂಡಿದೆ. ಹೊಸ ಆರೋಪಿ ಎಂದು ಸೇರ್ಪಡೆಯಾಗಿರುವ ಜಾಕ್ವೆಲಿನ್ ಫೆರ್ನಾಂಡಿಸ್‌ಗೆ ಸೆಪ್ಟೆಂಬರ್ 26 ರಂದು ಇಡಿ ಎದುರು ಖುದ್ದು ಹಾಜರಾಗುವಂತೆ ಕೋರ್ಟ್‌ ತಾಕೀತು ಮಾಡಿದೆ.

ಇನ್ನು ಈ ಪ್ರಕರಣದ ಚಾರ್ಜ್‌ ಶೀಟ್‌ ಪ್ರತಿಯನ್ನು ಪ್ರಕರಣದ ಎಲ್ಲಾ ಆರೋಪಿಗಳಿಗೆ ನೀಡುವಂತೆಯೂ ಇಡಿಗೆ ನ್ಯಾಯಾಲಯ ತಾಕೀತು ಮಾಡಿದೆ. ಇದೇ ವೇಳೆ ನ್ಯಾಯಾಲಯದ ಗಮನ ಸೆಳೆದ ದಿಲ್ಲಿ ಪೊಲೀಸ್ ಪರ ವಕೀಲರು, ಇದೇ ಪ್ರಕರಣ ಸಂಬಂಧ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಆಗಸ್ಟ್ 29ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿತ್ತು. ಆದರೆ, ಅವರು ವಿಚಾರಣೆಗೆ ಬರಲಿಲ್ಲ. ಹೀಗಾಗಿ, ಮತ್ತೆ ಸಮನ್ಸ್ ಜಾರಿ ಮಾಡಿದ್ದೇವೆ ಎಂದು ಮಾಹಿತಿ ನೀಡಿದರು.

ಈ ವೇಳೆ ನ್ಯಾಯಾಲಯಕ್ಕೆ ಭರವಸೆ ನೀಡಿದ ಜಾಕ್ವೆಲಿನ್ ಫೆರ್ನಾಂಡಿಸ್ ಪರ ವಕೀಲರು, ತಮ್ಮ ಕಕ್ಷೀದಾರರು ನ್ಯಾಯಾಲಯದ ಆದೇಶದ ಅನ್ವಯ ವಿಚಾರಣೆಗೆ ಹಾಜರಾಗುತ್ತಾರೆ, ತನಿಖೆ ಎದುರಿಸುತ್ತಾರೆ ಹಾಗೂ ಇಡಿಗೆ ಸ್ಪಂದಿಸುತ್ತಾರೆ ಎಂದು ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ