ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಶಿವಮೊಗ್ಗ ಮಹಾನಗರ ಪಾಲಿಕೆಯಿಂದ 543 ಆಶ್ರಯ ನಿವೇಶನ ರದ್ದು

Twitter
Facebook
LinkedIn
WhatsApp
ಶಿವಮೊಗ್ಗ ಮಹಾನಗರ ಪಾಲಿಕೆಯಿಂದ 543 ಆಶ್ರಯ ನಿವೇಶನ ರದ್ದು

ಶಿವಮೊಗ್ಗ: 1997ರಲ್ಲಿ ಹಂಚಿಕೆಯಾಗಿ ಎರಡು ದಶಕಗಳು ಕಳೆದರೂ ನಿವೇಶನ ಪಡೆದವರು ಮನೆ ನಿರ್ಮಿಸಿಕೊಳ್ಳದ ಕಾರಣ ಬೊಮ್ಮನಕಟ್ಟೆಯಲ್ಲಿ ವಿವಿಧ ವಸತಿ ಯೋಜನೆಗಳಡಿ ಮಂಜೂರಾಗಿದ್ದ 543 ಖಾಲಿ ನಿವೇಶನಗಳನ್ನು ಶಿವಮೊಗ್ಗ ಮಹಾನಗರ ಪಾಲಿಕೆ ರದ್ದುಗೊಳಿಸಿದೆ.

ರಾಜೀವ್ ಗಾಂಧಿ ಹೌಸಿಂಗ್ ಕಾರ್ಪೊರೇಷನ್ ಲಿಮಿಟೆಡ್‌ನ ವಸತಿ ಯೋಜನೆಗಳ ಅಡಿಯಲ್ಲಿ ಸಿಟಿ ಕಾರ್ಪೊರೇಶನ್‌ನಿಂದ ಈ ನಿವೇಶನಗಳನ್ನು ನೀಡಲಾಗಿತ್ತು. ಎರಡು ದಶಕಗಳಿಂದ ಅರ್ಹ ಫಲಾನುಭವಿಗಳಿಗೆ ಒಟ್ಟು 6,000 ನಿವೇಶನಗಳನ್ನು ಹಂಚಿಕೆ ಮಾಡಲಾಗಿತ್ತು ಎಂದು ಪಾಲಿಕೆ ಆಯುಕ್ತ ಮಾಯಣ್ಣ ಗೌಡ ತಿಳಿಸಿದ್ದಾರೆ.

“ಹಲವು ಫಲಾನುಭವಿಗಳು ಮನೆಗಳನ್ನು ನಿರ್ಮಿಸಿಕೊಂಡಿದ್ದಾರೆ. ಆದರೆ ಇನ್ನೂ ಹಲವು ನಿವೇಶನಗಗಳು ಖಾಲಿ ಇದ್ದವು. ಅವರಿಗೆ ಮನೆ ನಿರ್ಮಿಸಿಕೊಳ್ಳದಿದ್ದರೆ ನಿವೇಶನಗಳನ್ನು ರದ್ದುಗೊಳಿಸುವ ಎಚ್ಚರಿಕೆ ನೀಡಿದ ನಂತರ ಕೆಲವು ಫಲಾನುಭವಿಗಳು ಮನೆ ನಿರ್ಮಿಸಲು ಮುಂದೆ ಬಂದಿದ್ದಾರೆ. ಆದರೆ, 543 ನಿವೇಶನಗಳ ಮಾಲೀಕರು ಇನ್ನೂ ಮನೆಗಳನ್ನು ನಿರ್ಮಿಸಿಲ್ಲ.  ಅವರಲ್ಲಿ ಹಲವರು ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಇನ್ನು ಕೆಲವರು ಎಲ್ಲಿದ್ದಾರೆ ಎಂಬುದು ಪತ್ತೆಯಾಗದ ಕಾರಣ ಅವರ ನಿವೇಶನ ರದ್ದುಗೊಳಿಸಲಾಗಿದೆ ಎಂದು ಆಯುಕ್ತರು ಹೇಳಿದ್ದಾರೆ.

ಶಿವಮೊಗ್ಗ ಮಹಾನಗರ ಪಾಲಿಕೆಯಿಂದ 543 ಆಶ್ರಯ ನಿವೇಶನ ರದ್ದು

ಹಲವು ಫಲಾನುಭವಿಗಳು ಮನೆಗಳನ್ನು ನಿರ್ಮಿಸುವಲ್ಲಿ ವಿಫಲರಾದ ಕಾರಣ ಸ್ಥಳ ಪರಿಶೀಲನೆ ನಡೆಸಲಾಯಿತು. ಪರಿಶೀಲನೆಯ ಪ್ರಕಾರ ಎ ಬ್ಲಾಕ್‌ನಲ್ಲಿ 44, ಬಿ ಬ್ಲಾಕ್‌ನಲ್ಲಿ 78, ಸಿ ಬ್ಲಾಕ್‌ನಲ್ಲಿ 97, ಡಿ ಬ್ಲಾಕ್‌ನಲ್ಲಿ 78, ಇ ಬ್ಲಾಕ್‌ನಲ್ಲಿ 51, ಎಫ್ ಬ್ಲಾಕ್‌ನಲ್ಲಿ 107 ಮತ್ತು ಜಿ ಬ್ಲಾಕ್‌ನಲ್ಲಿ 88 ನಿವೇಶನ ಸೇರಿದಂತೆ 543 ನಿವೇಶನ ರದ್ದುಪಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ನಿವೇಶನ ಹಂಚಿಕೆದಾರರು ಎರಡು ದಶಕ ಕಳೆದರೂ ಮನೆಗಳನ್ನು ನಿರ್ಮಿಸಿಲ್ಲ. ಇದು ಹಕ್ಕುಪತ್ರದ ಷರತ್ತುಗಳ ಉಲ್ಲಂಘನೆಯಾಗಿದೆ ಎಂದು ಆಯುಕ್ತರು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist