ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪ್ರೀತಿಸಿ ಊರು ಬಿಟ್ಟ ಅಪ್ರಾಪ್ತ ಪ್ರೇಮಿಗಳು; ಮನನೊಂದು ಆತ್ಮಹತ್ಯೆಗೆ ಶರಣಾದ ಬಾಲಕಿ ತಂದೆ

Twitter
Facebook
LinkedIn
WhatsApp
ಪ್ರೀತಿಸಿ ಊರು ಬಿಟ್ಟ ಅಪ್ರಾಪ್ತ ಪ್ರೇಮಿಗಳು; ಮನನೊಂದು ಆತ್ಮಹತ್ಯೆಗೆ ಶರಣಾದ ಬಾಲಕಿ ತಂದೆ

ಮಂಡ್ಯ: ತನ್ನ ಮಗಳಿಗೆ (Daughter) ಉತ್ತಮ ವಿದ್ಯಾಭ್ಯಾಸ ಕೊಟ್ಟು ಮುಂದೆ ಒಳ್ಳೆ ಕಡೆ ಸಂಬಂಧ ನೋಡಿ ಮದುವೆ ಮಾಡಬೇಕೆಂದು ಆ ತಂದೆ ಕನಸು ಕಟ್ಟಿಕೊಂಡಿದ್ದ. ಆದರೆ ಆ ಮಗಳು ಇದೀಗ ಹದಿಯರೆಯದ ವಯಸ್ಸಿನಲ್ಲೇ ಪ್ರೀತಿಯ (Love) ಬಲೆಗೆ ಬಿದ್ದು, ಪ್ರೀತಿಸಿದವನ ಜೊತೆ ಓಡಿ ಹೋಗಿದ್ದಾಳೆ. ಇದೀಗ ಆ ತಂದೆ (Father) ಮಗಳು ನನ್ನ ಮರ್ಯಾದೆ ಕಳೆದು ಹೋದಳು ಎಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಹೆತ್ತ ಮಕ್ಕಳನ್ನು ಚೆನ್ನಾಗಿ ಓದಿಸಬೇಕು, ಅವರು ಒಳ್ಳೆಯ ಕೆಲಸಕ್ಕೆ ಸೇರಬೇಕು. ಮುಂದೆ ಒಳ್ಳೆಯ ಕಡೆ ಸಂಬಂಧ ನೋಡಿ ಮದುವೆ ಮಾಡಿ ಅವರ ಸಂಸಾರ ಚೆನ್ನಾಗಿ ನಡೆಯಬೇಕೆಂಬ ನೂರಾರು ಕನಸುಗಳನ್ನು ಹೆತ್ತವರು ಕಂಡಿರುತ್ತಾರೆ. ಇದೇ ರೀತಿಯ ಕನಸ್ಸನ್ನು ಮಂಡ್ಯ ಜಿಲ್ಲೆಯ ಕೆಆರ್ ಪೇಟೆ (KR Pete) ತಾಲೂಕಿನ ಬಾಚಹಳ್ಳಿ ಗ್ರಾಮದ ರೈತ ರವಿ ಕೂಡ ಕಂಡಿದ್ದ. ರವಿಯ ಮಗಳು ಬೂಕನಕೆರೆಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದು, ಇನ್ನೂ ಈ ವಯಸ್ಸಿನಲ್ಲೇ ಬಾಚಹಳ್ಳಿ ಗ್ರಾಮದ ಅಭಿ ಎಂಬಾತನ ಪ್ರೀತಿಯ ಬಲೆಗೆ ಬಿದ್ದು ಮನೆ ಬಿಟ್ಟು ಹೋಡಿ ಹೋಗಿದ್ದಾಳೆ.

ರವಿ ತನ್ನ ಮಗಳನ್ನು ಚೆನ್ನಾಗಿ ಓದಿಸಿ ಒಳ್ಳೆಯ ಹುಡುಗನನ್ನು ಹುಡುಕಿ ಮದುವೆ ಮಾಡಬೇಕು ಎಂದುಕೊಂಡಿದ್ದ. ಆದರೆ ಈತನ ಮಗಳ 18 ವರ್ಷ ತುಂಬದೇ ಅದೇ ಗ್ರಾಮದಲ್ಲಿ ಮನೆಯಲ್ಲೇ ಇದ್ದ ಅಭಿಯ ಪ್ರೀತಿಯ ಬಲೆಗೆ ಬಿದ್ದು ಓಡಿ ಹೋಗಿರುವುದು ಹೆತ್ತವರಿಗೆ ಆಘಾತ ತಂದಿದೆ. ಈ ಇಬ್ಬರು ಪ್ರೇಮಿಗಳು ಓಡಿ ಹೋದಾಗ ಕೆಆರ್ ಪೇಟೆ ಪೊಲೀಸ್ ಠಾಣೆಗೆ ದೂರನ್ನು ಸಹ ನೀಡಿದ್ದಾರೆ. ಆದರೆ ಐದು ದಿನವಾದ್ರು ಪೊಲೀಸರು ಓಡಿ ಹೋದ ಪ್ರೇಮಿಗಳನ್ನು ಹುಡುಕುವಲ್ಲಿ ಆಸಕ್ತಿ ತೋರಿಸಲಿಲ್ಲ.

ಇತ್ತ ಮಗಳು ಓಡಿ ಹೋಗಿ ತನ್ನ ಮರ್ಯಾದೆ ಕಳೆದಳು ಎಂದು ರವಿ ಮನನೊಂದು ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಾವಿಗೆ ಮಗಳು ಒಂದು ಕಡೆ ಕಾರಣವಾದ್ರೆ ಇನ್ನೊಂದು ಪೊಲೀಸರ ಬೇಜವಾಬ್ದಾರಿ ಕಾರಣ ಎಂದು ರವಿ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ರವಿಯ ಮೃತದೇಹವನ್ನು ಪೊಲೀಸ್ ಠಾಣೆ ಮುಂದೆ ಇಟ್ಟು ಪ್ರತಿಭಟನೆ ನಡೆಸಿದ್ರು. ಬಳಿಕ ಮಂಡ್ಯ ಎಸ್ಪಿ ಯತೀಶ್ ಸ್ಥಳಕ್ಕೆ ಭೇಟಿ ನೀಡಿ ಜನರನ್ನು ಸಮಾಧಾನಪಡಿಸಿ ರವಿ ಮೃತದೇಹವನ್ನು ಅಂತ್ಯಕ್ರಿಯೆ ಮಾಡಿಕೊಳ್ಳುವಂತೆ ಕೇಳಿಕೊಂಡ ನಂತರ ಪ್ರತಿಭಟನೆ ಹಿಂಪಡೆದರು.

ಒಟ್ಟಾರೆ ಹದಿಹರೆಯದ ವಯಸ್ಸಿನಲ್ಲಿ ಪ್ರೀತಿ ಪ್ರೇಮದ ಬಲೆಗೆ ಬಿದ್ದು ಮನೆ ಬಿಟ್ಟು ಓಡಿ ಹೋದ ಮಗಳು ತಂದೆಯ ಸಾವಿಗೆ ಕಾರಣವಾಗಿರುವುದು ಹೃದಯ ವಿದ್ರಾವಕ ಘಟನೆಯಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist