ಶನಿವಾರ, ಮೇ 11, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಷೇರು ಮಾರುಕಟ್ಟೆಯಲ್ಲಿ ರಕ್ತಪಾತ: ಸೆನ್ಸೆಕ್ಸ್ 1000 ಅಂಕ ಕುಸಿತ, ಹೂಡಿಕೆದಾರರಿಗೆ 7 ಲಕ್ಷ ಕೋಟಿ ರೂ. ನಷ್ಟ

Twitter
Facebook
LinkedIn
WhatsApp
ಷೇರು ಮಾರುಕಟ್ಟೆಯಲ್ಲಿ ರಕ್ತಪಾತ: ಸೆನ್ಸೆಕ್ಸ್ 1000 ಅಂಕ ಕುಸಿತ, ಹೂಡಿಕೆದಾರರಿಗೆ 7 ಲಕ್ಷ ಕೋಟಿ ರೂ. ನಷ್ಟ

ಮುಂಬೈ: ದೇಶೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ಬೆಳವಣಿಗೆಗಳಿಂದ ಭಾರತೀಯ ಷೇರು ಮಾರುಕಟ್ಟೆಯಲ್ಲಿ(Share Market) ರಕ್ತಪಾತವಾಗಿದ್ದು, ಸೆನ್ಸೆಕ್ಸ್ 1000 ಅಂಕ ಕುಸಿದಿದೆ.

ಬಾಂಬೆ ಷೇರು ಮಾರುಕಟ್ಟೆ (BSE) ಸಂವೇದಿ ಸೂಚಂಕ್ಯ ಸೆನ್ಸೆಕ್ಸ್‌ (Sensex) ಮತ್ತು ರಾಷ್ಟ್ರೀಯ ಷೇರು ಮಾರುಕಟ್ಟೆ (NSE) ಸೂಚಂಕ್ಯ ನಿಫ್ಟಿ (Nifty) ಅಂಕಗಳು ಭಾರೀ ಇಳಿಕೆಯಾಗಿದ್ದು, ಹೂಡಿಕೆದಾರರಿಗೆ ಒಂದೇ ದಿನ ಸುಮಾರು 7 ಲಕ್ಷ ಕೋಟಿ ರೂ. ನಷ್ಟವಾಗಿದೆ.

ಶುಕ್ರವಾರದಿಂದ ಮಾರುಕಟ್ಟೆಯಲ್ಲಿ ಕುಸಿತ ಮುಂದುವರೆದಿದ್ದು, ಎನ್‌ಎಸ್‌ಇ ನಿಫ್ಟಿ ಸೂಚ್ಯಂಕವು 17,000 ಪಾಯಿಂಟ್‌ಗಳಿಗಿಂತ ಕೆಳಕ್ಕೆ ಕುಸಿದಿದೆ ಮತ್ತು ಬಿಎಸ್‌ಇ ಸೆನ್ಸೆಕ್ಸ್ 953.70 ಪಾಯಿಂಟ್‌ ಕುಸಿತ ಕಂಡು, ದಿನದಂತ್ಯಕ್ಕೆ 57,145.22ಕ್ಕೆ ಕುಸಿತವಾಗಿದೆ. ಫ್ಚಿ ಕೂಡ 311.05 ಅಂಕಗಳ ಕುಸಿತ ಕಂಡು 17,016.30 ಅಂಕಗಳಿಗೆ ತಲುಪಿದೆ.

ಷೇರು ಮಾರುಕಟ್ಟೆಯಲ್ಲಿ ರಕ್ತಪಾತ: ಸೆನ್ಸೆಕ್ಸ್ 1000 ಅಂಕ ಕುಸಿತ, ಹೂಡಿಕೆದಾರರಿಗೆ 7 ಲಕ್ಷ ಕೋಟಿ ರೂ. ನಷ್ಟ

ಸೋಮವಾರದಂದು ರೂಪಾಯಿ ಹೊಸ ಸಾರ್ವಕಾಲಿಕ ಕನಿಷ್ಠ ಮಟ್ಟವನ್ನು ತಲುಪಿತು, ಇದು ದಾಖಲೆಯ ಮೂರನೇ ಸತತ ಸೆಷನ್ ಅನ್ನು ಉಲ್ಲಂಘಿಸಿದೆ. 30-ಷೇರುಗಳ ಸೆನ್ಸೆಕ್ಸ್ ಪ್ಯಾಕ್‌ಗಳಲ್ಲಿ, ಪವರ್ ಗ್ರಿಡ್, ಟಾಟಾ ಸ್ಟೀಲ್, ಮಾರುತಿ, ಮಹೀಂದ್ರಾ ಮತ್ತು ಮಹೀಂದ್ರಾ, ಎನ್‌ಟಿಪಿಸಿ, ಇಂಡಸ್‌ಇಂಡ್ ಬ್ಯಾಂಕ್, ಆಕ್ಸಿಸ್ ಬ್ಯಾಂಕ್ ಮತ್ತು ಟೈಟಾನ್ ಆರಂಭಿಕ ವಹಿವಾಟಿನಲ್ಲಿ ನಷ್ಟ ಅನುಭವಿಸಿವೆ.

ಇಂದಿನ ವಹಿವಾಟಿನಲ್ಲಿ ನೆಸ್ಲೆ ಮತ್ತು ಹಿಂದೂಸ್ತಾನ್ ಯೂನಿಲಿವರ್ ಮಾತ್ರ ಲಾಭ ಗಳಿಸಿದವು.  ಏಷ್ಯಾದ ಇತರೆಡೆಗಳಲ್ಲಿ, ಸಿಯೋಲ್, ಟೋಕಿಯೊ ಮತ್ತು ಶಾಂಘೈ ಮಾರುಕಟ್ಟೆಗಳು ಕಡಿಮೆ ವಹಿವಾಟು ನಡೆಸುತ್ತಿದ್ದರೆ, ಹಾಂಗ್ ಕಾಂಗ್ ಮಾರುಕಟ್ಟೆ ವಹಿವಾಟು ಸ್ವಲ್ಪಮಟ್ಟಿಗೆ ಏರಿಕೆಯಾಗಿದೆ.

ರೂಪಾಯಿ ಮೌಲ್ಯ ದಾಖಲೆ ಪ್ರಮಾಣದ ಕುಸಿತ ಡಾಲರ್‌ ಮುಂದೆ ರೂಪಾಯಿ ಮೌಲ್ಯ ಕೂಡ ಸಾರ್ವಕಾಲಿಕ ಕುಸಿತವಾಗಿದ್ದು, ಸೋಮವಾರ ರೂಪಾಯಿ ಮೌಲ್ಯ 81.55ಕ್ಕೆ ಇಳಿಕೆಯಾಗಿದೆ.

ಮಾರುಕಟ್ಟೆ ಕುಸಿತಕ್ಕೆ ಕಾರಣ ಏನು?
ಅಮೆರಿಕದ ಫೆಡರಲ್‌ ರಿಸರ್ವ್‌ (Federal Reserve) ಬಡ್ಡಿ ದರವನ್ನು ಏರಿಸಿದ ಪರಿಣಾಮ ಹೂಡಿಕೆದಾರರು ಷೇರುಗಳನ್ನು ಮಾರಾಟ ಮಾಡುತ್ತಿದ್ದಾರೆ. ಪರಿಣಾಮ ವಿಶ್ವಾದ್ಯಂತ ಷೇರು ಮಾರುಕಟ್ಟೆಯ ಮೇಲೆ ಪರಿಣಾಮ ಬೀರಿದೆ. ಹಣದುಬ್ಬರ ನಿಯಂತ್ರಿಸಲು ಆರ್‌ಬಿಐ ಬಡ್ಡಿದರವನ್ನು ಮತ್ತಷ್ಟು ಏರಿಸುವ ಸಾಧ್ಯತೆಯಿದೆ. ಈ ಬಾರಿ 35 ಬೇಸಿಸ್‌ ಪಾಯಿಂಟ್‌ ಏರಿಸಬಹುದು ಎಂಬ ನಿರೀಕ್ಷೆಯಿದೆ. ಜಪಾನ್‌ನಲ್ಲಿ 20 ತಿಂಗಳಿನಲ್ಲೇ ಕಡಿಮೆ ಪ್ರಮಾಣದಲ್ಲಿ ಕೈಗಾರಿಕ ಪ್ರಗತಿ ದಾಖಲಾಗಿದೆ. ಕಚ್ಚಾ ವಸ್ತುಗಳ ಬೆಲೆ ಏರಿಕೆ, ವಿಶ್ವಾದ್ಯಂತ ಆರ್ಥಿಕ ಬೆಳವಣಿಗೆ ಕುಸಿದ ಹಿನ್ನೆಲೆಯಲ್ಲಿ ಷೇರು ಮಾರುಕಟ್ಟೆಗಳಲ್ಲಿ ರಕ್ತಪಾತ ಆಗುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ