ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಘಾತಕಾರಿ ಘಟನೆ-ಹೋಮ್‌ವರ್ಕ್‌ ಮಾಡದ ಕಾರಣಕ್ಕೆ 6 ವರ್ಷದ ವಿದ್ಯಾರ್ಥಿಯನ್ನು ಬಡಿದು ಸಾಯಿಸಿದ ಶಿಕ್ಷಕ!

Twitter
Facebook
LinkedIn
WhatsApp
ಆಘಾತಕಾರಿ ಘಟನೆ-ಹೋಮ್‌ವರ್ಕ್‌ ಮಾಡದ ಕಾರಣಕ್ಕೆ 6 ವರ್ಷದ ವಿದ್ಯಾರ್ಥಿಯನ್ನು ಬಡಿದು ಸಾಯಿಸಿದ ಶಿಕ್ಷಕ!

ಪಾಟ್ನಾ (ಸೆ. 29): ಹೋಮ್‌ವರ್ಕ್‌ ಮಾಡಿಲ್ಲ ಎನ್ನುವ ಕಾರಣಕ್ಕೆ ಶಿಕ್ಷಕನೊಬ್ಬ, ಪುಟ್ಟ ವಿದ್ಯಾರ್ಥಿಗೆ ಭೀಕರವಾಗಿ ಥಳಿಸಿ, ಸಾಯಿಸಿದ ಘಟನೆ ನಡೆದಿದೆ. ಬಿಹಾರದ ಗಯಾದಲ್ಲಿ ಈ ಘಟನೆ ನಡೆದಿದೆ. ಶಾಲೆಯ ಹಾಸ್ಟೆಲ್‌ನಲ್ಲಿಯೇ ತಂಗಿದ್ದ 6 ವರ್ಷದ ಹುಡುಗ ಮೂರನೇ ತರಗತಿಯಲ್ಲಿ ಓದುತ್ತಿದ್ದ. ಪೊಲೀಸರ ಮಾಹಿತಿಯ ಪ್ರಕಾರ, ಬುಧವಾರ ಶಾಲೆಯ ಘೇಟ್‌ನ ಹೊರಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಗು ಪತ್ತೆಯಾಗಿತ್ತು ಎಂದು ಹೇಳಿದ್ದಾರೆ. ಪೊಲೀಸರು ಮಗುವನ್ನು ನೋಡಿದ ವೇಳೆ, ಆತನ ಮುಖ ಸಂಪೂರ್ಣವಾಗಿ ಊದಿಕೊಂಡಿತ್ತು. ಆತನ ಮೂಗಿನಿಂದ ರಕ್ತ ಸುರಿಯುತ್ತಿತ್ತು. ಅಲ್ಲದೆ, ಶಾಲೆಯ ಸಮವಸ್ತ್ರ ಕೂಡ ಸಂಪೂರ್ಣವಾಗಿ ಹರಿದುಹೋಗಿತ್ತು. ತಕ್ಷಣವೇ ಪೊಲೀಸರು ಆಸ್ಪತ್ರೆಗೆ ಸಾಗಿಸಿದರೂ, ಮಾರ್ಗಮಧ್ಯದಲ್ಲಿಯೇ ಹುಡುಗ ಸಾವು ಕಂಡಿದ್ದಾರೆ. 6 ವರ್ಷದ ಹುಡುಗ, ವಜೀರ್‌ಗಂಜ್-ಫತೇಪುರ್ ರಸ್ತೆಯಲ್ಲಿರುವ ಬಧಿ ಬಿಘಾ ಗ್ರಾಮದ ಬಳಿ ಇರುವ ಲಿಟಲ್ ಲೀಡರ್ಸ್ ಪಬ್ಲಿಕ್ ಸ್ಕೂಲ್‌ನಲ್ಲಿ ಓದುತ್ತಿದ್ದ. ಹುಡುಗನ ಮನೆ ಶಾಲೆಯಿಂದ ಮೂರು ಕಿಲೋಮೀಟರ್‌ ದೂರದಲ್ಲಿದ್ದ ಕಾರಣಕ್ಕೆ ಹುಡುಗನನ್ನು ಶಾಲೆಯ ಹಾಸ್ಟೆಲ್‌ನಲ್ಲಿಯೇ ಇರಿಸಿದ್ದರು. ಮಗು ಸಾವು ಕಂಡಿದ್ದು ತಿಳಿದ ಕೂಡಲೇ, ಹುಡುಗನ ಕುಟುಂಬದವರು ಶಾಲೆಯ ಎದುರು ಪ್ರತಿಭಟನೆಗೆ ಇಳಿದಿದ್ದಾರೆ.

ಪ್ರತಿಭಟನೆ ತೀವ್ರವಾದ ಬಳಿಕ ಪೊಲೀಸರು ಶಾಲಾ ನಿರ್ದೇಶಕ ವಿಕಾಸ್ ಸಿಂಗ್ ಅವರನ್ನು ಬುಧವಾರ ಸಂಜೆ ಬಂಧಿಸಿದ್ದಾರೆ. 302ರ ಅಡಿಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಮಗುವಿನ ಸಾವಿನ ನಂತರ ಶಾಲೆಯನ್ನೂ ಮುಚ್ಚಲಾಗಿದೆ. ಹಾಸ್ಟೆಲ್‌ನಲ್ಲಿರುವ ಎಲ್ಲಾ ಮಕ್ಕಳನ್ನು ಮನೆಗೆ ಕಳುಹಿಸಲಾಗಿದೆ.

ನನ್ನ ಮೊಮ್ಮಗನನ್ನು ಶಾಲೆ ಹಾಗೂ ಆಡಳಿತ ಮಂಡಳಿಯೇ ಕೊಲೆ ಮಾಡಿದೆ ಎಂದು ಮಗುವಿನ ಅಜ್ಜ ರಾಮಬಾಲಕ್ ಪ್ರಸಾದ್ ಆರೋಪಿಸಿದ್ದಾರೆ. ಹಲ್ಲೆಯ ಬಗ್ಗೆ ಈ ಹಿಂದೆಯೂ ದೂರು ನೀಡಲಾಗಿತ್ತು, ಆದರೆ ಈಗ ಹಾಗಾಗುವುದಿಲ್ಲ ಎಂದು ಶಾಲೆಯವರು ಹೇಳಿದ್ದರು. ಅದರ ನಂತರ ಎಲ್ಲವೂ ಸರಿಯಾಗಿತ್ತು. ಅಜ್ಜ, ತನ್ನ ಮೊಮ್ಮಗ ವಿವೇಕ್ ಕುಮಾರ್‌ನನ್ನು ಶಿಕ್ಷಕ ವಿಕಾಸ್ ಕುಮಾರ್ ಸಿಂಗ್ ಹೊಡೆದು ಶಾಲೆಯಿಂದ ಹೊರಹಾಕಿದ್ದ. ನಂತರ ಅವನು ಶಾಲೆಯ ಹೊರಗೆ ಸ್ವಲ್ಪ ದೂರದಲ್ಲಿ ಗಂಟೆಗಳ ಕಾಲ ಪ್ರಜ್ಞಾಹೀನನಾಗಿ ಬಿದ್ದಿದ್ದ ಎಂದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ