ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಾಲ ಕೊಟ್ಟು ವಸೂಲಿ ಮಾಡಲಾಗದೇ ಬ್ಯಾಂಕ್ ಮ್ಯಾನೇಜರ್ ನೇಣಿಗೆ ಶರಣು

Twitter
Facebook
LinkedIn
WhatsApp
ಸಾಲ ಕೊಟ್ಟು ವಸೂಲಿ ಮಾಡಲಾಗದೇ ಬ್ಯಾಂಕ್ ಮ್ಯಾನೇಜರ್ ನೇಣಿಗೆ ಶರಣು

ಪುದುಚೇರಿ/ಕಾಕಿನಾಡ್: ಇದುವರೆಗೆ ಸಾಲ ಮಾಡಿ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳನ್ನು ಕೇಳಿರಬಹುದು. ಆದರೆ ಇಲ್ಲೊಂದು ಕಡೆ ಕೊಟ್ಟ ಸಾಲವನ್ನು ವಾಪಸ್ ಮರು ಪಾವತಿ ಮಾಡಲಾಗದೆ ಬ್ಯಾಂಕ್ ಮ್ಯಾನೇಜರ್ ಓರ್ವರು ನೇಣಿಗೆ ಶರಣಾಗಿದ್ದಾರೆ. ಪುದುಚೇರಿಯಲ್ಲಿ ಈ ಅವಘಡ ಸಂಭವಿಸಿದೆ. ಹೀಗೆ ಸಾವಿಗೆ ಶರಣಾದ ಬ್ಯಾಂಕ್ ಮ್ಯಾನೇಜರ್‌ನನ್ನು ಸಾಯಿರತ್ನ ಶ್ರೀಕಾಂತ್ ಎಂದು ಗುರುತಿಸಲಾಗಿದೆ. ಇವರು ಆಂಧ್ರಪ್ರದೇಶದ ಕಾಕಿನಾಡು ಜಿಲ್ಲೆಯ ಪಿಥಪುರಂ ಜಿಲ್ಲೆಯ ನಿವಾಸಿ ಎಂದು ಪೊಲೀಸರು ಹೇಳಿದ್ದಾರೆ.

ಶ್ರೀಕಾಂತ್ (Sayiratna Srikanth) ಪುದುಚೇರಿಯ (Puducherry) ಯನಂನಲ್ಲಿ ಯುಕೋ ಬ್ಯಾಂಕ್‌ನ ಶಾಖಾ ಮ್ಯಾನೇಜರ್ (bank manager) ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಹಿರಿಯ ಅಧಿಕಾರಿಗಳು ನೀಡಿದ ಟಾರ್ಗೆಟ್ ರೀಚ್ ಆಗಲು ಇವರು ಅನೇಕರಿಗೆ ಬ್ಯಾಂಕ್‌ನಿಂದ ಸಾಲ (loans) ನೀಡಿದ್ದರು. ಸಾಲ ನೀಡಿದ ಬಳಿಕ ಸಾಲ ಮರು ಪಾವತಿ ಮಾಡಲು ಜನರಿಗೆ ಕೇಳುವಂತೆ ಮೇಲಾಧಿಕಾರಿಗಳು ಇವರಿಗೆ ಒತ್ತಡ ಹೇರಿದ್ದರು ಎನ್ನಲಾಗಿದೆ.

ಆದರೆ, ಮೇಲಾಧಿಕಾರಿಗಳ ಒತ್ತಡಕ್ಕೆ ಮಣಿದು ಸಾಲ ವಸೂಲಿ (Loan Recovery) ಮಾಡಲು ಸಾಧ್ಯವಾಗದೆ ಇದ್ದಾಗ ತಾವೇ ಸಾಲ ಪಡೆದು ವಸೂಲಾತಿಯನ್ನು ಸ್ವಲ್ಪ ಮಟ್ಟಿಗೆ ಇತ್ಯರ್ಥಪಡಿಸಲು ಯತ್ನಿಸಿದ್ದರು. ಇತ್ತ ಈತ ತೆಗೆದುಕೊಂಡ ವೈಯಕ್ತಿಕ ಸಾಲಗಳ ಬಡ್ಡಿದರವೂ ಗಗನಕ್ಕೇರುತ್ತಿತ್ತು. ಇದರಿಂದ ತನಗೆ ಬರುತ್ತಿದ್ದ ಸಂಬಳದಲ್ಲಿ ಕನಿಷ್ಠ ತನ್ನ ಹಾಗೂ ಕುಟುಂಬದ ಹೊಟ್ಟೆ ತುಂಬಿಸಿಕೊಳ್ಳಲು ಕೂಡ ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿತ್ತು. ಹಣಕಾಸಿನ ಅಸಮತೋಲನ ಸಂಪೂರ್ಣ ಬದುಕನ್ನೇ ಅಡಿಮೇಲು ಮಾಡಿತ್ತು. ಇದರೊಂದಿಗೆ ಇತ್ತ ಕೊಟ್ಟ ಸಾಲವೂ ವಾಪಸ್ ಬಾರದೇ ಅತ್ತ ಅಧಿಕಾರಿಗಳ ಒತ್ತಡವೂ ಹೆಚ್ಚಿದ ಹಿನ್ನೆಲೆಯಲ್ಲಿ ಮಾನಸಿಕ ಒತ್ತಡ ತಡೆದುಕೊಳ್ಳಲಾಗದೇ ಶ್ರೀಕಾಂತ್ ಖಿನ್ನತೆಗೆ (depression) ಒಳಗಾಗಿದ್ದರು. ಪರಿಣಾಮ ಪತ್ನಿ ಗಾಯತ್ರಿ ಹಾಗೂ ಪುಟ್ಟ ಮಕ್ಕಳನ್ನು ಬಿಟ್ಟು ನೇಣಿಗೆ ಶರಣಾಗಿದ್ದಾರೆ. ಈ ಪುಟ್ಟ ಕುಟುಂಬ ಯಾನಂನ ಗೋಪಾಲ್‌ ನಗರದಲ್ಲಿ (Gopal Nagar) ನೆಲೆಸಿತ್ತು.

ಈ ಹಿಂದೆ ಶ್ರೀಕಾಂತ್ ಮಚಲಿಪಟ್ಟಣ ಬ್ರಾಂಚ್‌ನ (Machilipatnam branch) ಮ್ಯಾನೇಜರ್ ಆಗಿ ಮೂರು ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದರು. ಆ ಸಮಯದಲ್ಲಿ ಅವರು ತಮ್ಮ ಗ್ರಾಹಕರಿಗೆ ಬ್ಯಾಂಕ್‌ನ ಮೇಲಾಧಿಕಾರಿಗಳ ನಿರ್ದೇಶನದಂತೆ ಸಾಲ ನೀಡಿದ್ದರು ಎನ್ನಲಾಗಿದೆ. ಆದರೆ ಸಾಲ ಪಡೆದವರು ವಾಪಸ್ ಬ್ಯಾಂಕ್‌ಗೆ ಹಿಂದಿರುಗಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಶ್ರೀಕಾಂತ್ ವೈಯಕ್ತಿಕವಾಗಿ ತಮ್ಮ ಹೆಸರಿನಲ್ಲಿ 60 ಲಕ್ಷ ರೂ ಸಾಲ ಮಾಡಿ ಆ ಸಾಲವನ್ನು ಪಾವತಿಸಿದ್ದರು ಎನ್ನಲಾಗಿದೆ. ಇದಾದ ನಂತರ ಅವರು ಯಾನಂ ಬ್ರಾಂಚ್‌ಗೆ ವರ್ಗಾವಣೆಯಾಗಿ ಬಂದಿದ್ದು, ಇಲ್ಲಿಗೆ ಬಂದ ಮೇಲೆ ಅವರಿಗೆ ಅಲ್ಲಿ ಸಾಲ ಮರುಪಾವತಿ ಮಾಡದ ವ್ಯಕ್ತಿ ಇಲ್ಲೂ 37 ಲಕ್ಷ ರೂ ಸಾಲ ಮಾಡಿರುವುದು ತಿಳಿದು ಬಂದಿದೆ. ಇದು ಶ್ರೀಕಾಂತ್‌ಗೆ ಮಾನಸಿಕ ಆಘಾತ ನೀಡಿದೆ.

ಈ ಹಿಂದೆ ಶ್ರೀಕಾಂತ್ ಮಚಲಿಪಟ್ಟಣ ಬ್ರಾಂಚ್‌ನ (Machilipatnam branch) ಮ್ಯಾನೇಜರ್ ಆಗಿ ಮೂರು ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದರು. ಆ ಸಮಯದಲ್ಲಿ ಅವರು ತಮ್ಮ ಗ್ರಾಹಕರಿಗೆ ಬ್ಯಾಂಕ್‌ನ ಮೇಲಾಧಿಕಾರಿಗಳ ನಿರ್ದೇಶನದಂತೆ ಸಾಲ ನೀಡಿದ್ದರು ಎನ್ನಲಾಗಿದೆ. ಆದರೆ ಸಾಲ ಪಡೆದವರು ವಾಪಸ್ ಬ್ಯಾಂಕ್‌ಗೆ ಹಿಂದಿರುಗಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಶ್ರೀಕಾಂತ್ ವೈಯಕ್ತಿಕವಾಗಿ ತಮ್ಮ ಹೆಸರಿನಲ್ಲಿ 60 ಲಕ್ಷ ರೂ ಸಾಲ ಮಾಡಿ ಆ ಸಾಲವನ್ನು ಪಾವತಿಸಿದ್ದರು ಎನ್ನಲಾಗಿದೆ. ಇದಾದ ನಂತರ ಅವರು ಯಾನಂ ಬ್ರಾಂಚ್‌ಗೆ ವರ್ಗಾವಣೆಯಾಗಿ ಬಂದಿದ್ದು, ಇಲ್ಲಿಗೆ ಬಂದ ಮೇಲೆ ಅವರಿಗೆ ಅಲ್ಲಿ ಸಾಲ ಮರುಪಾವತಿ ಮಾಡದ ವ್ಯಕ್ತಿ ಇಲ್ಲೂ 37 ಲಕ್ಷ ರೂ ಸಾಲ ಮಾಡಿರುವುದು ತಿಳಿದು ಬಂದಿದೆ. ಇದು ಶ್ರೀಕಾಂತ್‌ಗೆ ಮಾನಸಿಕ ಆಘಾತ ನೀಡಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ