ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

29ನೇ ಮಹಡಿಯಿಂದ ಬಿದ್ದು 12ವರ್ಷದ ಬಾಲಕಿ ಆತ್ಮಹತ್ಯೆ

Twitter
Facebook
LinkedIn
WhatsApp
29ನೇ ಮಹಡಿಯಿಂದ ಬಿದ್ದು 12ವರ್ಷದ ಬಾಲಕಿ ಆತ್ಮಹತ್ಯೆ

ಬೆಂಗಳೂರು: 29ನೇ ಮಹಡಿಯಿಂದ ಬಿದ್ದು 12ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೇಗೂರು ಬಳಿಯ ಅಪಾರ್ಟ್‍ಮೆಂಟ್ ಒಂದರಲ್ಲಿ ನಡೆದಿದೆ.

ಬಾಲಕಿ ಅಪಾರ್ಟ್‍ಮೆಂಟ್‍ನಲ್ಲಿ ತಂದೆ – ತಾಯಿ ಜೊತೆ ವಾಸವಾಗಿದ್ದಳು. ಖಾಸಗಿ ಶಾಲೆಯೊಂದರಲ್ಲಿ 6ನೇ ತರಗತಿ ವ್ಯಾಸಾಂಗ ಮಾಡುತ್ತಿದ್ದಳು ಎನ್ನಲಾಗಿದೆ. ಬಾಲಕಿಯ ತಂದೆ ಸಾಫ್ಟ್‌ವೇರ್‌ ಎಂಜಿನಿಯರ್, ತಾಯಿ ಗೃಹಿಣಿಯಾಗಿದ್ದಾರೆ. ಬಾಲಕಿಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಬಾಲಕಿ ಮಂಗಳವಾರ ರಾತ್ರಿ ಮಲಗಿದ್ದ ವೇಳೆ, ಇದ್ದಕ್ಕಿದ್ದಂತೆ ಮುಂಜಾನೆ 4:30ಕ್ಕೆ ಎದ್ದು ಹಾಲ್‍ಗೆ ಬಂದಿದ್ದಳು. ಈ ವೇಳೆ ಬಾಲಕಿಯನ್ನು ಆಕೆಯ ತಾಯಿ ವಿಚಾರಿಸಿದಾಗ, ಸರಿಯಾಗಿ ಉತ್ತರಿಸದೆ ಮತ್ತೆ ಮಲಗುವುದಾಗಿ ರೂಮಿಗೆ ತೆರಳಿದ್ದಳು. ಸುಮಾರು 5 ಗಂಟೆ ವೇಳೆಗೆ ಬಾಲಕಿ ಅಪಾರ್ಟ್‍ಮೆಂಟ್ ಮೇಲಿನಿಂದ ಕೆಳಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಜೋರಾದ ಶಬ್ದ ಕೇಳಿ ಸೆಕ್ಯೂರಿಟಿ ಹೊರಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ನಂತರ ಪೋಷಕರಿಗೆ ಹಾಗೂ ಅಪಾರ್ಟ್‍ಮೆಂಟ್ ಅಸೋಸಿಯೇಷನ್‍ಗೆ ಸೆಕ್ಯೂರಿಟಿ ಮಾಹಿತಿ ನೀಡಿದ್ದರು.

ಈ ಸಂಬಂಧ ಹುಳಿಮಾವು (Hulimavu) ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಜ.31ಕ್ಕೆ ಜಯದೇವ ಆಸ್ಪತ್ರೆ ನಿರ್ದೇಶಕರಾಗಿ ಡಾ. ಮಂಜುನಾಥ್ ಅವಧಿ ಅಂತ್ಯ

ಬೆಂಗಳೂರು: ಜಯದೇವ ಆಸ್ಪತ್ರೆ ನಿರ್ದೇಶಕರನ್ನಾಗಿ ಡಾ. ಮಂಜುನಾಥ್‍ರನ್ನು (Dr Manjunath) ಮುಂದುವರಿಸುವ ನಿರ್ಧಾರವನ್ನು ಸರ್ಕಾರ ಕೈ ಬಿಟ್ಟಿದೆ. ಜನವರಿ 31ಕ್ಕೆ ಜಯದೇವ ಆಸ್ಪತ್ರೆ ನಿರ್ದೇಶಕರಾಗಿ (Jayadeva Hospital Director) ಡಾ. ಮಂಜುನಾಥ್ ಅವಧಿ ಮುಕ್ತಾಯವಾಗಲಿದೆ.

ಕಳೆದ ಬಾರಿ ಅವಧಿ ಮುಕ್ತಾಯ ಬಳಿಕ ಜನರ ಒತ್ತಾಯ ಕೇಳಿ ಬಂದ ಹಿನ್ನೆಲೆ 6 ತಿಂಗಳ ಕಾಲ ಹುದ್ದೆಯಲ್ಲಿ ಸರ್ಕಾರ ಮುಂದುವರಿಸಿತ್ತು. ಎನ್‍ಎಂಸಿ ಆಕ್ಟ್ ಪ್ರಕಾರ 70 ವರ್ಷದವರೆಗೂ ಸೇವೆ ಸಲ್ಲಿಸಬಹುದಾಗಿದೆ. ಡಾ. ಮಂಜುನಾಥ್ ಅವರಿಗೆ 67 ವರ್ಷವಾಗಿದ್ದು, ಇನ್ನು 3 ವರ್ಷಗಳ ಕಾಲ ಸೇವೆ ಸಲ್ಲಿಸಬಹುದಾಗಿದೆ. ಆದರೆ ಸರ್ಕಾರ ಮುಂದುವರಿಸುವ ನಿರ್ಧಾರ ಕೈಗೊಳ್ಳದ ಹಿನ್ನೆಲೆಯಲ್ಲಿ ಜನವರಿ 31ಕ್ಕೆ ಡಾ. ಮಂಜುನಾಥ್ ನಿವೃತ್ತಿ ಘೋಷಣೆ ಮಾಡಲಿದ್ದಾರೆ.

ಜಯದೇವ ಆಸ್ಪತ್ರೆ ನಿರ್ದೇಶಕರ ಹುದ್ದೆಗೆ ಪೈಪೋಟಿ ಆರಂಭವಾಗಿದ್ದು, 15ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ. ಈ ನಡುವೆ ಮೈಸೂರು ಮೂಲದ ಸಿಎಂ ಆಪ್ತರಿಗೆ ನಿರ್ದೇಶಕರ ಹುದ್ದೆ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ ಅನ್ನೋ ಚರ್ಚೆ ಜೋರಾಗಿದೆ.

ಚುನಾವಣೆಗೆ ಸ್ಪರ್ಧಿಸ್ತಾರೆ ಎಂಬ ಚರ್ಚೆ ಜೋರಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಡಾ.ಮಂಜುನಾಥ್ ಅವರು, ಆ ರೀತಿ ಏನಿಲ್ಲ ಚುನಾವಣೆಗೆ ನಿಲ್ಲೊಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist