ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಭೂವಂಚನೆಯ ಪ್ರಕರಣಗಳಿಗೆ ಕಡಿವಾಣ; ಜಮೀನಿನ ಪಹಣಿಗೆ ಆಧಾರ್‌ ಲಿಂಕ್!

Twitter
Facebook
LinkedIn
WhatsApp
ಭೂವಂಚನೆಯ ಪ್ರಕರಣಗಳಿಗೆ ಕಡಿವಾಣ; ಜಮೀನಿನ ಪಹಣಿಗೆ ಆಧಾರ್‌ ಲಿಂಕ್!

ಬೆಂಗಳೂರು: ರಾಜ್ಯದಲ್ಲಿ ಭೂವಂಚನೆಯಂತಹ (Land Fraud) ಅನೇಕ ಪ್ರಕರಣಗಳು ಕೇಳಿ ಬರುತ್ತಲೇ ಇವೆ. ಜತೆಗೆ ಬರ ಸೇರಿದಂತೆ ಇನ್ನಿತರ ಪರಿಹಾರಗಳು ನೇರವಾಗಿ ಎಲ್ಲ ರೈತರಿಗೆ ವರ್ಗಾವಣೆ ಆಗುತ್ತಿಲ್ಲ. ಕೆಲವೇ ಕೆಲವರಿಗೆ ಯೋಜನೆಯ ಫಲ ದೊರೆಯುತ್ತಿದೆ ಎಂಬ ದೂರುಗಳು ಬರುತ್ತಿದ್ದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈಗ ಶಾಶ್ವತ ವ್ಯವಸ್ಥೆ ಮಾಡಲು ಮುಂದಾಗಿದೆ. ಹೀಗಾಗಿ ರೈತರ ಜಮೀನುಗಳ ಆರ್‌ಟಿಸಿ ಇಲ್ಲವೇ ಪಹಣಿಯನ್ನು ಆಧಾರ್‌ಗೆ ಲಿಂಕ್‌ (Aadhaar Link) ಮಾಡಲು ಚಿಂತನೆ ನಡೆಸಿದೆ. ಈ ಕ್ರಮವು ಸಣ್ಣ – ಅತಿ ಸಣ್ಣ ರೈತರಿಗೆ (Small and marginal farmers) ಅನುಕೂಲ ಮಾಡಿಕೊಡಲಿದೆ. ಈ ವಿಷಯ ಈಗ ಬೆಳಗಾವಿ ಅಧಿವೇಶನದಲ್ಲಿ (Belagavi Winter Session) ಪ್ರಸ್ತಾಪ ಆಗಿದೆ.

 

ರಾಜ್ಯ ಸರ್ಕಾರದಿಂದ ಸಣ್ಣ ಮತ್ತು ಅತಿ ಸಣ್ಣ ರೈತರನ್ನು ಗುರುತಿಸಿ ಅವರಿಗೆ ಪರಿಹಾರ ಕ್ರಮಗಳನ್ನು ಒದಗಿಸುವುದಕ್ಕೆ “ಶಾಶ್ವತ ವ್ಯವಸ್ಥೆ” ರೂಪಿಸಲು ಚಿಂತನೆ ನಡೆಸಿದೆ. ಹೀಗಾಗಿ ರೈತರ ಪಹಣಿಗೆ ಆಧಾರ್ ಸಂಖ್ಯೆಯನ್ನು ಲಿಂಕ್‌ ಮಾಡಲು ಮುಂದಾಗಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಬೆಳಗಾವಿ ಅಧಿವೇಶನದಲ್ಲಿ ಸೋಮವಾರ ಹೇಳಿದ್ದಾರೆ.

 

ಬರಗಾಲದ ಮೇಲೆ ನಡೆದ ಚರ್ಚೆ ವೇಳೆ ಪ್ರತಿಕ್ರಿಯೆ ನೀಡಿದ್ದ ಸಚಿವ ಕೃಷ್ಣ ಬೈರೇಗೌಡ, ಕೇಂದ್ರ ಸರ್ಕಾರದ ಅಂಕಿ- ಅಂಶಗಳ ಪ್ರಕಾರ ಕರ್ನಾಟಕದಲ್ಲಿರುವುದು ಶೇ. 44ರಷ್ಟು ಸಣ್ಣ ಮತ್ತು ಅತಿ ಸಣ್ಣ ರೈತರಿದ್ದಾರೆ (ಎರಡು ಹೆಕ್ಟೇರ್‌ಗಿಂತ ಕಡಿಮೆ ಭೂಮಿಯನ್ನು ಹೊಂದಿರುವವರು). ಆದರೆ, ವಾಸ್ತವದಲ್ಲಿ, ರಾಜ್ಯದ 70 ಪ್ರತಿಶತದಷ್ಟು ಸಣ್ಣ ಮತ್ತು ಅತಿ ಸಣ್ಣ ರೈತರು ಇದ್ದಾರೆ. ಈ ಎಲ್ಲರನ್ನು ಗುರುತಿಸುವ ಕಾರ್ಯ ಹಾಗೂ ಒಂದು ವ್ಯವಸ್ಥೆಯಡಿ ತರುವ ಕಾರ್ಯವು ಇದುವರೆಗೆ ಆಗಿಲ್ಲ. ಈ ನಿಟ್ಟಿನಲ್ಲಿ ಸರ್ಕಾರ ಈಗ ಕ್ರಮ ವಹಿಸಲು ಮುಂದಾಗಲಾಗಿದೆ ಎಂದು ವಿವರಿಸಿದರು.

 

ಆಧಾರ್ – ಪಹಣಿ ಲಿಂಕ್‌ನಿಂದ ಆಗುವ ಪ್ರಯೋಜನ ಏನು?

ಜಮೀನಿನ ಪಹಣಿಗೆ ಆಧಾರ್‌ ಸಂಖ್ಯೆಯನ್ನು ಲಿಂಕ್‌ ಮಾಡಿದರೆ ಭೂ-ಸಂಬಂಧಿತ ವಂಚನೆಗಳನ್ನು ತಡೆಯಬಹುದಾಗಿದೆ. ಅಷ್ಟೇ ಅಲ್ಲದೆ, ಜಮೀನು ಮಾಲೀಕತ್ವವನ್ನು ಸಹ ಖಾತ್ರಿಪಡಿಸುವುದು ಇದರಿಂದ ಸಾಧ್ಯವಾಗುತ್ತದೆ. ಹೀಗಾಗಿ ಎಲ್ಲ ರೀತಿಯ ಅಕ್ರಮಗಳಿಗೂ ಇದರಿಂದ ಕಡಿವಾಣವನ್ನು ಹಾಕಬಹುದಾಗಿದೆ.

ಕೇಂದ್ರ ಸರ್ಕಾರಕ್ಕೆ ಒತ್ತಾಯ

ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ನೇರವಾಗಿ ಪರಿಹಾರವನ್ನು ತಲುಪಿಸುವುದಕ್ಕಾಗಿ ಶಾಶ್ವತ ವ್ಯವಸ್ಥೆಯನ್ನು ರೂಪಿಸಬೇಕಾಗಿದೆ. ಈ ಸಂಬಂಧ ನಾವು ಕೇಂದ್ರ ಸರ್ಕಾರವನ್ನು ಸಹ ಒತ್ತಾಯಿಸಿದ್ದೇವೆ. ಇದಕ್ಕಾಗಿ ಎಲ್ಲ ಆರ್‌ಟಿಸಿಗಳನ್ನು ಆಧಾರ್‌ನೊಂದಿಗೆ ಲಿಂಕ್ ಮಾಡಲು ಮತ್ತು ಆಧಾರ್ ದೃಢೀಕರಣವನ್ನು ಬಳಸಲು ಯೋಚಿಸುತ್ತಿದ್ದೇವೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದರು.

ಆಂಧ್ರದಲ್ಲಿ ಜಾರಿಯಲ್ಲಿರುವ ಪ್ಲ್ಯಾನ್‌!

ಈ ಪ್ಲ್ಯಾನ್‌ ಈಗಾಗಲೇ ಆಂಧ್ರ ಪ್ರದೇಶದಲ್ಲಿ ಜಾರಿಯಲ್ಲಿದೆ. ಆರ್‌ಟಿಸಿ ಜತೆಗೆ ಆಧಾರ್ ಲಿಂಕ್ ಮಾಡುವ ಕೆಲಸ ಈಗಾಗಲೇ ನಡೆದಿದೆ. ರೆಕಾರ್ಡ್‌ ಆಫ್ ರೈಟ್ಸ್ (ಆರ್‌ಟಿಸಿ), ಟೆನನ್ಸಿ ಆಂಡ್ ಕ್ರಾಪ್ಸ್ (ಪಹಣಿ) ಒಮ್ಮೆ ಅಪ್ಡೇಟ್‌ ಆದಲ್ಲಿ, ಅದರಲ್ಲಿ ಜಮೀನು ಮಾಲೀಕರ ವಿವರ, ಪ್ರದೇಶ, ಮಣ್ಣಿನ ಪ್ರಕಾರ, ಭೂಮಿಯ ಸ್ವಾಧೀನದ ಸ್ವರೂಪ, ಬೆಳೆದ ಬೆಳೆಗಳು ಸೇರಿದಂತೆ ಇನ್ನಿತರ ಸಮಗ್ರ ಮಾಹಿತಿಯನ್ನು ನಮೂದು ಮಾಡಲಾಗಿರುತ್ತದೆ.

ಹೀಗಾಗಿ ಒಟ್ಟಾರೆಯಾಗಿ ರೈತರಿಗೆ ಪರಿಹಾರ ವಿತರಣೆ ವ್ಯವಸ್ಥೆಯನ್ನು ಎಂಡ್ ಟು ಎಂಡ್ ಆಟೋಮೇಷನ್ ಮಾಡುವ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist