ಭಾಷಣ ಮಾಡುವಾಗ ವೇದಿಕೆ ಮೇಲೆಯೇ ಕುಸಿದು ಬಿದ್ದು ಹಿರಿಯ ಪ್ರಾಧ್ಯಾಪಕ ನಿಧನ...!
Twitter
Facebook
LinkedIn
WhatsApp
ಐಐಟಿ ಕಾನ್ಪುರದ ಹಿರಿಯ ಪ್ರಾಧ್ಯಾಪಕರೊಬ್ಬರು ವಿಶ್ವವಿದ್ಯಾಲಯದಲ್ಲಿ ಹಳೆಯ ವಿದ್ಯಾರ್ಥಿಗಳನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದ ವೇಳೆ ಹೃದಯಸ್ತಂಭನದಿಂದ ಸಾವನ್ನಪ್ಪಿದ್ದಾರೆ. ಸಮೀರ್ ಖಂಡೇಕರ್ ಐಐಟಿ ಕಾನ್ಪುರ ಸಭಾಂಗಣದಲ್ಲಿ ನಡೆದ ಹಳೆಯ ವಿದ್ಯಾರ್ಥಿಗಳ ಸಮಾವೇಶದಲ್ಲಿ ಭಾಷಣ ಮಾಡುತ್ತಿದ್ದರು.
ಖಂಡೇಕರ್ ಅವರು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವ ಮಾರ್ಗಗಳ ಬಗ್ಗೆ ಮಾತನಾಡುತ್ತಿದ್ದರು. ಖಂಡೇಕರ್ ಇದ್ದಕ್ಕಿದ್ದಂತೆ ಅಸ್ವಸ್ಥರಾದರು, ಎದೆಯಲ್ಲಿ ಸ್ಬಲ್ಪ ನೋವು ಕಾಣಿಸಿಕೊಂಡಿತ್ತು. ಅವರು ಭಾವುಕರಾಗಿದ್ದಾರೆ ಎಂದು ವಿದ್ಯಾರ್ಥಿಗಳು ಭಾವಿಸಿದ್ದರು. ಸ್ವಲ್ಪ ಸಮಯದ ನಂತರ ಬೆವರು ಬರಲು ಶುರುವಾಗಿತ್ತು. ವೇದಿಕೆ ಮೇಲೆಯೇ ಕುಸಿದು ಬಿದ್ದರು. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯ ನೀರಜ್ ಕುಮಾರ್ ಪ್ರಕಾರ, ಆಸ್ಪತ್ರೆಗೆ ಕರೆತರುವ ಮೊದಲೇ ಖಂಡೇಕರ್ ಮೃತಪಟ್ಟಿದ್ದರು.
ಬಳಿಕ ಬಸ್ ಅನ್ನು ಪೊಲೀಸ್ ಠಾಣೆಯ ಬಳಿಗೆ ಬಂದು ನಿಲ್ಲಿಸಲಾಯಿತು. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡರು ಎಂದು ಮೂಲಗಳು ತಿಳಿಸಿವೆ. ಘಟನೆಯ ಸುದ್ದಿ ಹರಡುತ್ತಿದ್ದಂತೆ ಕೆಲವು ಯುವಕರು ಮಹಿಳಾ ಪೊಲೀಸ್ ಠಾಣೆಯ ಮುಂದೆ ಜಯಾಯಿಸಿ, ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ಓದುತ್ತಿರುವ ಪ್ರೊಫೆಸರ್ ಅವರ ಮಗ ತನ್ನ ತಂದೆಯ ಅಂತ್ಯಕ್ರಿಯೆಯನ್ನು ನಡೆಸಲಿದ್ದಾರೆ. ಖಂಡೇಕರ್ ಅವರು 2019 ರಿಂದ ಕೊಲೆಸ್ಟ್ರಾಲ್ನಿಂದ ಬಳಲುತ್ತಿದ್ದರು ಮತ್ತು ನಿರಂತರ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದರು. ಅವರು ತಂದೆ-ತಾಯಿ, ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.
ಮಧ್ಯಪ್ರದೇಶದ ಜಬಲ್ಪುರದಲ್ಲಿ ಜನಿಸಿದ ಖಾಂಡೇಕರ್ ಐಐಟಿ ಕಾನ್ಪುರದಲ್ಲಿ ಬಿ.ಟೆಕ್ ಓದಿದ್ದು, ಪಿಎಚ್ಡಿಗಾಗಿ ಜರ್ಮನಿಗೆ ತೆರಳಿದ್ದರು. 2004 ರಲ್ಲಿ, ಅವರು ಐಐಟಿ ಕಾನ್ಪುರದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇರಿದರು, ನಂತರ ಅವರು ಸಹ ಪ್ರಾಧ್ಯಾಪಕರಾದರು. ನಂತರ ಅವರನ್ನು ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥರಾಗಿದ್ದರು. ಅವರ ಹೆಸರಿಗೆ ಎಂಟು ಪೇಟೆಂಟ್ಗಳೂ ಇವೆ.